AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ

ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ
ಹಣ್ಣು ಮತ್ತು ತರಕಾರಿಗಳು (ಸಾಂದರ್ಭಿಕ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Jan 24, 2021 | 9:25 PM

Share

ಬೆಂಗಳೂರು: ನಗರದ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳಲ್ಲಿ ಭಾರೀ ಪ್ರಮಾಣದ ಭಾರ ಲೋಹ ಇರುವುದನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಈ ವಿಚಾರ ತುಂಬಾನೇ ಆತಂಕ ಮೂಡಿಸಿದೆ.

ಬೆಂಗಳೂರು ಸುತ್ತಮುತ್ತಲ ಭಾಗದಲ್ಲಿ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಸೊಪ್ಪು, ಟೊಮ್ಯಾಟೋ, ಭತ್ತ ಹಾಗೂ ಬೀಟ್ರೂಟ್​ನಲ್ಲಿ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ಪ್ರಮಾಣದ ಭಾರ ಲೋಹದ ಅಂಶ ಕಂಡು ಬಂದಿದೆ.

ಕ್ರೋಮಿಯಂ, ಕ್ಯಾಡ್ಮಿಯಮ್ ಮತ್ತು ನಿಕಲ್ ಲೋಹಗಳು ತರಕಾರಿ ಹಾಗೂ ಸೊಪ್ಪಿನಲ್ಲಿ ಇರುವ ವಿಚಾರ ತಿಳಿದು ಬಂದಿದೆ. ಈ ರೈತರು ತಮ್ಮ ಬೆಳೆಗೆ ಕೆರೆ ನೀರನ್ನು ಬಳಕೆ ಮಾಡಿಕೊಂಡಿದ್ದಾರೆ. ಭೂಮಿಯನ್ನು ಫಲವತ್ತಾಗಿಸಲು ಸರೋವರದ ಕೆಸರನ್ನು ಕೂಡ ಸೇರಿಸಿದ್ದಾರೆ. ಕೆರೆ ನೀರು ಈಗಾಗಲೇ ಕಲುಷಿತಗೊಂಡಿದೆ. ಅದೇ ನೀರನ್ನು ಬಳಕೆ ಮಾಡಿದ್ದರಿಂದ  ಇದು ಗಿಡಗಳಿಗೂ ಸೇರಿದೆ.

ಇನ್ನು, ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾರಗೊಂಡನಹಳ್ಳಿ, ಹೊಸಕೋಟೆ, ವರ್ತೂರು, ಜಿಗಣಿ ಭಾಗದಲ್ಲಿರುವ ಕೆರೆ ನೀರು ಬಳಕೆ ಮಾಡಿ ಬೆಳೆದ ಬೆಳೆಗಳಲ್ಲಿ ಈ ಅಪಾಯಕಾರಿ ಅಂಶ ಕಾಣಿಸಿಕೊಂಡಿದೆ. ಇದನ್ನು ನಿರಂತರವಾಗಿ ಸೇವನೆ ಮಾಡುವುದರಿಂದ ಮಾರಕ ರೋಗಗಳು ಕಾಣಿಸಿಕೊಳ್ಳಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. 2017ರಲ್ಲೂ ತಜ್ಞರು ಇದೇ ಮಾದರಿಯ ಎಚ್ಚರಿಕೆ ನೀಡಿದ್ದರು.

ಆಕಳ ಹಾಲು ಕಲುಶಿತ! ಅಪಾಯಕಾರಿ ಲೋಹಗಳುಳ್ಳ ತರಕಾರಿ ಹಾಗೂ ಹುಲ್ಲನ್ನು ಸೇವನೆ ಮಾಡುವ ಹಸುಗಳಿಗೆ ಇದರ ಅಪಾಯ ತಪ್ಪಿದ್ದಲ್ಲ. ಅಷ್ಟೇ ಅಲ್ಲ, ಆಕಳಿನ ಹಾಲಿನಲ್ಲೂ ವಿಷಕಾರಿ ಅಂಶ ಸೇರಿರುವ ಸಾಧ್ಯತೆ ಇರುತ್ತದೆ. ಇದನ್ನು ಸೇವನೆ ಮಾಡಿದ ಮನುಷ್ಯನಿಗೆ ಅಪಾಯ ಎದುರಾಗಬಹುದು.

ಮನೆ ಮೇಲೆ ಬಗೆಬಗೆ ತರಕಾರಿ, ನಗುತಿವೆ ಹತ್ತಾರು ಬಗೆಯ ಸೊಪ್ಪು, ಹೂ ಗಿಡಗಳು; ತಾರಸಿ ಕೃಷಿಯ ಯಶೋಗಾಥೆಯಿದು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​