AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ, ಷರತ್ತುಗಳು ಅನ್ವಯ

ಶಿರಾಡಿ ಘಾಟ್​ನಲ್ಲಿ ನಿನ್ನೆ(ಗುರುವಾರ) ಬೆಳಿಗ್ಗೆ ಗುಡ್ಡ ಕುಸಿತ ಸಂಭವಿಸಿ, ತಾತ್ಕಾಲಿಕ ತಡೆ ಹೇರಲಾಗಿತ್ತು. ಇದರಿಂದ ರಸ್ತೆ ಮಧ್ಯೆಯೇ ನೂರಾರು ವಾಹನಗಳು ನಿಂತಿದ್ದು, ನಡು ರಸ್ತೆಯಲ್ಲಿಯೇ ಟ್ರಕ್ ಹಾಗೂ ಲಾರಿಗಳ ಚಾಲಕರು ಪರದಾಡುವಂತಾಗಿದೆ. ಈ ಹಿನ್ನಲೆ ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ, ಷರತ್ತುಗಳು ಅನ್ವಯ
ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ
ಮಂಜುನಾಥ ಕೆಬಿ
| Edited By: |

Updated on: Jul 19, 2024 | 5:46 PM

Share

ಹಾಸನ, ಜು.19: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್(Shiradi Ghat) ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿದ್ದು, ಸಂಚಾರಕ್ಕೆ ಅನುವುಮಾಡಿಕೊಟ್ಟಿದೆ. ಆದರೆ, ನಿರ್ಬಂಧಿತ ನಿಯಮಗಳಡಿ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ನಿನ್ನೆ(ಗುರುವಾರ) ಬೆಳಿಗ್ಗೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿ, ತಾತ್ಕಾಲಿಕ ತಡೆ ಹೇರಲಾಗಿತ್ತು. ಇದೀಗ ಅದನ್ನು ವಾಪಾಸ್​ ಪಡೆದು, ಷರತ್ತು ನೀಡಿ ಸಂಚಾರಕ್ಕೆ ಮುಕ್ತ ಮಾಡಿದೆ.

ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ; ಷರತ್ತು ಅನ್ವಯ

ನಾಳೆ(ಶನಿವಾರ) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೌದು, ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೂ, ನಿರ್ಬಂಧಿತ ಸಂಚಾರಕ್ಕೆ ಅವಕಾಶ ನೀಡಿ ಸಕಲೇಶಪುರ ಉಪ ವಿಭಾಗ ಅದಿಕಾರಿ ಶೃತಿ ಆದೇಶಿಸಿದ್ದಾರೆ.

ಇದನ್ನೂ ಓದಿ:ಹಾಸನ: ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಇನ್ನು ನಿನ್ನೆ ರಾತ್ರಿಯಿಂದ ವಾಹನ ಸಂಚಾರ ನಿರ್ಬಂಧ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆಯೇ ನೂರಾರು ವಾಹನಗಳು ನಿಂತಿದ್ದು, ನಡು ರಸ್ತೆಯಲ್ಲಿಯೇ  ದೊಡ್ಡ ದೊಡ್ಡ ಟ್ರಕ್ ಹಾಗೂ ಲಾರಿಗಳ ಚಾಲಕರು ಪರದಾಡುವಂತಾಗಿದೆ. ಊಟ, ತಿಂಡಿ, ಕುಡಿಯುವ ನೀರು, ಶೌಚಾಲಯ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಸರತಿ ಸಾಲಿನಲ್ಲಿ ಸಾವಿರಾರು ವಾಹನಗಳು ನಿಂತಿದ್ದು, ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ ಮಾರ್ಗದಲ್ಲೂ ಸಂಚಾರಕ್ಕೆ ಸಮಸ್ಯೆಯಾಗಿದೆ. ಎಲ್ಲಾ ಮಾರ್ಗದಲ್ಲೂ ಮಳೆ ಹೆಚ್ಚಾಗಿರೊ ಹಿನ್ನೆಲೆಯಲ್ಲಿ ಶಿರಾಡಿಘಾಟ್ ಮಾರ್ಗದ ವಾಹನಗಳು ಎಲ್ಲೂ ಹೊಕಗಲಾಗದೆ ಸಂಕಷ್ಟಕ್ಕೆ ಸಿಲುಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ