AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ, ಷರತ್ತುಗಳು ಅನ್ವಯ

ಶಿರಾಡಿ ಘಾಟ್​ನಲ್ಲಿ ನಿನ್ನೆ(ಗುರುವಾರ) ಬೆಳಿಗ್ಗೆ ಗುಡ್ಡ ಕುಸಿತ ಸಂಭವಿಸಿ, ತಾತ್ಕಾಲಿಕ ತಡೆ ಹೇರಲಾಗಿತ್ತು. ಇದರಿಂದ ರಸ್ತೆ ಮಧ್ಯೆಯೇ ನೂರಾರು ವಾಹನಗಳು ನಿಂತಿದ್ದು, ನಡು ರಸ್ತೆಯಲ್ಲಿಯೇ ಟ್ರಕ್ ಹಾಗೂ ಲಾರಿಗಳ ಚಾಲಕರು ಪರದಾಡುವಂತಾಗಿದೆ. ಈ ಹಿನ್ನಲೆ ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ, ಷರತ್ತುಗಳು ಅನ್ವಯ
ಶಿರಾಡಿ ಘಾಟ್​ನಲ್ಲಿ ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 19, 2024 | 5:46 PM

ಹಾಸನ, ಜು.19: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್(Shiradi Ghat) ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿದ್ದು, ಸಂಚಾರಕ್ಕೆ ಅನುವುಮಾಡಿಕೊಟ್ಟಿದೆ. ಆದರೆ, ನಿರ್ಬಂಧಿತ ನಿಯಮಗಳಡಿ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ನಿನ್ನೆ(ಗುರುವಾರ) ಬೆಳಿಗ್ಗೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿ, ತಾತ್ಕಾಲಿಕ ತಡೆ ಹೇರಲಾಗಿತ್ತು. ಇದೀಗ ಅದನ್ನು ವಾಪಾಸ್​ ಪಡೆದು, ಷರತ್ತು ನೀಡಿ ಸಂಚಾರಕ್ಕೆ ಮುಕ್ತ ಮಾಡಿದೆ.

ನಾಳೆಯಿಂದ ವಾಹನ ಸಂಚಾರಕ್ಕೆ ಅವಕಾಶ; ಷರತ್ತು ಅನ್ವಯ

ನಾಳೆ(ಶನಿವಾರ) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೌದು, ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೂ, ನಿರ್ಬಂಧಿತ ಸಂಚಾರಕ್ಕೆ ಅವಕಾಶ ನೀಡಿ ಸಕಲೇಶಪುರ ಉಪ ವಿಭಾಗ ಅದಿಕಾರಿ ಶೃತಿ ಆದೇಶಿಸಿದ್ದಾರೆ.

ಇದನ್ನೂ ಓದಿ:ಹಾಸನ: ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಇನ್ನು ನಿನ್ನೆ ರಾತ್ರಿಯಿಂದ ವಾಹನ ಸಂಚಾರ ನಿರ್ಬಂಧ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆಯೇ ನೂರಾರು ವಾಹನಗಳು ನಿಂತಿದ್ದು, ನಡು ರಸ್ತೆಯಲ್ಲಿಯೇ  ದೊಡ್ಡ ದೊಡ್ಡ ಟ್ರಕ್ ಹಾಗೂ ಲಾರಿಗಳ ಚಾಲಕರು ಪರದಾಡುವಂತಾಗಿದೆ. ಊಟ, ತಿಂಡಿ, ಕುಡಿಯುವ ನೀರು, ಶೌಚಾಲಯ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಸರತಿ ಸಾಲಿನಲ್ಲಿ ಸಾವಿರಾರು ವಾಹನಗಳು ನಿಂತಿದ್ದು, ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ ಮಾರ್ಗದಲ್ಲೂ ಸಂಚಾರಕ್ಕೆ ಸಮಸ್ಯೆಯಾಗಿದೆ. ಎಲ್ಲಾ ಮಾರ್ಗದಲ್ಲೂ ಮಳೆ ಹೆಚ್ಚಾಗಿರೊ ಹಿನ್ನೆಲೆಯಲ್ಲಿ ಶಿರಾಡಿಘಾಟ್ ಮಾರ್ಗದ ವಾಹನಗಳು ಎಲ್ಲೂ ಹೊಕಗಲಾಗದೆ ಸಂಕಷ್ಟಕ್ಕೆ ಸಿಲುಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ