AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಜ್ಯೂನಿಯರ್ ಕಲಾವಿದರ ನೆರವಿಗೆ ನಿಲ್ಲುವ ಸಲುವಾಗಿ ಬೆಂಗಳೂರಿನ ಸುಮನಹಳ್ಳಿ ಬಳಿ ಕಿರಿಯ ಕಲಾವಿದರ 200 ಕುಟುಂಬಗಳಿಗೆ ಫುಡ್ ಕಿಟ್ ಹಂಚುವ ಮೂಲಕ ನಟ ವಿನೋದ್ ರಾಜ್ ಹಾಗೂ ತಾಯಿ ಹಿರಿಯ ನಟಿ ಲೀಲಾವತಿ ಮಾನವೀಯತೆ ಮೆರೆದಿದ್ದಾರೆ.

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್
ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ
preethi shettigar
|

Updated on: May 10, 2021 | 11:20 AM

Share

ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್​ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ ಸಹ ಚಿತ್ರರಂಗದ ಜ್ಯೂನಿಯರ್ ಕಲಾವಿದರಿಗೆ ನೆರವಾಗುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ನಟಿ ಲೀಲಾವತಿ ಚಿತ್ರರಂಗದಲ್ಲಿ ವೈಟ್ ಅಂಡ್ ಬ್ಲಾಕ್ ಕಾಲದಿಂದ ಆಗಿನ ಕಲರ್ ಫುಲ್ ದುನಿಯಾದವರೆಗೆ ಬಹು ಬೇಡಿಕೆಯಿದ್ದವರು. ಆಗ ಡಾ.ರಾಜ್ ಸೇರಿದಂತೆ ಅನೇಕ ಹಿರಿಯ ಕಲಾವಿದರೊಂದಿಗೆ ತೆರೆ ಹಂಚಿಕೊಂಡಿದ್ದ ಲೀಲಾವತಿ ಚಂದನವನದಲ್ಲಿ ಮಿಂಚಿದ್ದರು. ಇವರ ಮಗ ವಿನೋದ್ ರಾಜ್ ಸಹ ಡ್ಯಾನ್ಸ್ ರಾಜ ಡ್ಯಾನ್ಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ನೃತ್ಯದಲ್ಲಿ ಜನಮಣ್ಣನೆ ಗಳಿಸಿದ್ದರು. ಕಾಲ ಕ್ರಮೇಣ ಚಿತ್ರರಂಗದಿಂದ ದೂರ ಸರಿದ ತಾಯಿ ಮಗ ಕೃಷಿ ಕಾಯಕ ಮಾಡುತ್ತಿದ್ದು, ಸ್ವತಃ ತಾವೇ ಆರ್ಥಿಕ ಸಂಕಷ್ಟದಲ್ಲಿದ್ದರು ಚಿತ್ರರಂಗದ ಬಡ ಜ್ಯೂನಿಯರ್ ಕಲಾವಿದರ ನೆರವಿಗೆ ನಿಲ್ಲುವ ಸಲುವಾಗಿ ಬೆಂಗಳೂರಿನ ಸುಮನಹಳ್ಳಿ ಬಳಿ ಕಿರಿಯ ಕಲಾವಿದರ 200 ಕುಟುಂಬಗಳಿಗೆ ಫುಡ್ ಕಿಟ್ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ಕಳೆದ ವರ್ಷ ಮಾರ್ಚ್‌ನಲ್ಲಿ ದೇಶಕ್ಕೆ ಕಾಲಿಟ್ಟಿತ್ತು, ಕೊರೊನಾ ನಮ್ಮ ದೇಶಕ್ಕೆ ಬಂದಿದ್ದೆ ತಡ ಎಲ್ಲಾ ಉದ್ಯಮಗಳು ನೆಲಕಚ್ಚಿ ಹೋಗಿದ್ದು, ಒಂದಷ್ಟು ಸಣ್ಣ ಉದ್ಯಮಗಳಂತು ಬಾಗಿಲು ಮುಚ್ಚಿವೆ. ಚಿತ್ರರಂಗ ಸಹ ಇದರಿಂದ ಹೊರತೇನಲ್ಲ, ಚಿತ್ರರಂಗದಲ್ಲಿ ಶೂಟಿಂಗ್ ಬಂದ್ ಆಯ್ತು ಹಿರಿಯ ಕಲಾವಿದರಿಂದ ಹಿಡಿದು ಕಿರಿಯ ಕಲಾವಿದರು ಶೂಟಿಂಗ್ ಇಲ್ಲದೆ, ಆದಾಯ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುವಂತಾಗಿತ್ತು. ಇನ್ನೇನು ಎಲ್ಲಾ ಸರಿ ಹೋಗಿದೆ ಚಿತ್ರೋದ್ಯಮ ಮತ್ತೆ ಚೇತರಿಸಿಕೊಳ್ಳುತಿದೆ ಎನ್ನುವಷ್ಟರಲ್ಲಿ ಮತ್ತೆ ಎದುರಾದ ಎರಡನೇ ಅಲೆ ಸೋಂಕಿನಿಂದ ಮತ್ತೆ ಚಿತ್ರರಂಗ ಸ್ಥಬ್ದವಾಗಿದೆ. ಹೀಗಿರುವಾಗ ಚಿತ್ರರಂಗವನ್ನೆ ನಂಬಿಕೊಂಡು ಬದುಕು ನಡೆಸುತ್ತಿರುವ ಹಲವು ಜ್ಯೂನಿಯರ್ ಆರ್ಟಿಸ್ಟ್‌ಗಳ ಬದುಕು ಬೀದಿಗೆ ಬರುವಂತಾಗಿದ್ದು, ಇಂತಹ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ನಟ ವಿನೋದ್ ರಾಜ್ ಹಾಗೂ ತಾಯಿ ಹಿರಿಯ ನಟಿ ಲೀಲಾವತಿ ಮುಂದೆ ಬಂದಿದ್ದಾರೆ.

ಇದೇ ವೇಳೆ ಮಾತನಾಡಿದ ವಿನೋದ್ ರಾಜ್ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಈ ವೇಳೆ ಕೊರೊನಾ ಮಹಾಮಾರಿ ಮತ್ತೊಂದು ಹೊಡೆತ ಕೊಟ್ಟಿದೆ, ಇಂತಹ ಸಂದರ್ಭದಲ್ಲಿ ಬರೀ ಸರ್ಕಾರವನ್ನ ನೆಚ್ಚಿಕೊಂಡರೆ ಆಗುವುದಿಲ್ಲ. ನಮ್ಮಂತ ನಿಮ್ಮಂತ ದಾನಿಗಳು ಕಷ್ಟದಲ್ಲಿರುವವರ ಸಹಾಯಕ್ಕೆ ದಾವಿಸಬೇಕಿದೆ ಎಂದು ಕೈಮುಗಿದು ಮನವಿ ಮಾಡಿದರು.

ಒಟ್ಟಾರೆ 200 ಕಲಾವಿರ ಕುಟುಂಬಗಳಿಗೆ ಹಿರಿಯ ಜೀವಗಳು ನೆರವಾಗಿದ್ದು, ಮತ್ತಷ್ಟು ನಟ-ನಟಿಯರು ಇಂತಹ ಸಂಕಷ್ಟದಲ್ಲಿರುವ ಸಹ ಕಲಾವಿದರ ನೆರವಿಗೆ ನಿಲ್ಲಬೇಕಿದೆ.

ಇದನ್ನೂ ಓದಿ:

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ ಗ್ರಾಮೀಣ ಭಾಗದ ಜನರಿಗೆ ನನ್ನ ನೆರವು ಬಳಕೆಯಾಗಲಿ! ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ರಿಷಭ್ ಪಂತ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ