AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

SL Bhyrappa Passes Away: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಇವರಿಗೆ ಸಲ್ಲುತ್ತದೆ.

SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ
S. L. Bhyrappa
TV9 Web
| Edited By: |

Updated on:Sep 24, 2025 | 3:37 PM

Share

ಬೆಂಗಳೂರು, (ಸೆಪ್ಟೆಂಬರ್ 24): ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ (SL Bhyrappa )ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

ಎಸ್​​ಎಲ್ ಭೈರಪ್ಪ ಹೃದಯಾಘಾತದಿಂದ ನಿಧನ

Sl Bhyrappa Death

Sl Bhyrappa Death

ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್​ಎಲ್ ಭೈರಪ್ಪ ಅವರು ಇಂದು (ಸೆಪ್ಟೆಂಬರ್ 24)  ಮಧ್ಹಾಹ್ನ 2.38ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆಸ್ಪತ್ರೆ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಭೈರಪ್ಪ ಅವರ ಕಾದಂಬರಿಗಳು

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್‌.ಎಲ್. ಬೈರಪ್ಪ ಅವರ ಪೂರ್ಣ ಹೆಸರು. ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ. ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ, ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ವಿಶೇಷತೆ ಅಂದರೆ, ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.

Published On - 2:57 pm, Wed, 24 September 25

Follow Us
Web contact
Web contact

TV9 Kannada

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ