AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಆಹ್ವಾನ ಕೊಟ್ಟಿದ್ದು ರಾಮ ಮಂದಿರ ಉದ್ಘಾಟನೆಗಲ್ಲ, ಭೇಟಿಗಷ್ಟೇ: ವಿಹೆಚ್​ಪಿ ಸ್ಪಷ್ಟನೆ

ಫೆಬ್ರವರಿಯಲ್ಲಿ ರಾಮ ಮಂದಿರಕ್ಕೆ ಭೇಟಿ ಕೊಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಆದಷ್ಟು ಬೇಗ ರಾಮನ ದರ್ಶನ ಪಡೆಯುವಂತೆ ಮನವಿ ಮಾಡಿದ್ದೇವೆ ಎಂದು ವಿಹೆಚ್​ಪಿ ತಿಳಿಸಿದೆ.

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಆಹ್ವಾನ ಕೊಟ್ಟಿದ್ದು ರಾಮ ಮಂದಿರ ಉದ್ಘಾಟನೆಗಲ್ಲ, ಭೇಟಿಗಷ್ಟೇ: ವಿಹೆಚ್​ಪಿ ಸ್ಪಷ್ಟನೆ
ಲಕ್ಷ್ಮೀ ಹೆಬ್ಬಾಳ್ಕರ್
TV9 Web
| Edited By: |

Updated on: Jan 05, 2024 | 9:28 AM

Share

ಬೆಳಗಾವಿ, ಜನವರಿ 5: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಪ್ರತಿಪಕ್ಷಗಳ ನಾಯಕರಿಗೆ ಆಹ್ವಾನ ನೀಡುತ್ತಿಲ್ಲ ಎಂಬ ಟೀಕೆಗಳ ಮಧ್ಯೆಯೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರಿಗೆ ವಿಶ್ವ ಹಿಂದೂ ಪರಿಷತ್ (VHP) ಆಮಂತ್ರಣ ನೀಡಿರುವ ಬಗ್ಗೆ ಗುರುವಾರ ವರದಿಯಾಗಿತ್ತು. ಆದರೆ, ಈ ಆಮಂತ್ರಣ ರಾಮ ಮಂದಿರ ಉದ್ಘಾಟನೆಗಲ್ಲ, ರಾಮ ಮಂದಿರ ಭೇಟಿಗಷ್ಟೇ ಎಂದು ವಿಹೆಚ್​ಪಿ ಸ್ಪಷ್ಟಪಡಿಸಿದೆ. ರಾಮ ಮಂದಿರಕ್ಕೆ ಒಮ್ಮೆಯಾದರೂ ಭೇಟಿ ನೀಡಿ ಎಂದು ಆಹ್ವಾನ ನೀಡಲಾಗಿದೆ. ರಾಮ ಮಂದಿರಕ್ಕೆ ಭೇಟಿ ಕೊಡಿ ಅಂತಾ ಅಕ್ಷತಾ ಅಭಿಯಾನ ಆಮಂತ್ರಣ ನೀಡಿದ್ದೇವೆ ಎಂದು ವಿಹೆಚ್‌ಪಿ ಮುಖಂಡ ಪರಮೇಶ್ವರ್ ಹೆಗಡೆ ‘ಟಿವಿ9’ಗೆ ತಿಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಮ ಮಂದಿರಕ್ಕೆ 2 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಹೀಗಾಗಿ ಅವರಿಗೆ ಆಹ್ವಾನ ನೀಡಿದ್ದೇವೆ. ಸಾಮಾನ್ಯರಿಂದ ಹಿಡಿದು ಎಲ್ಲರಿಗೂ ಪಕ್ಷಾತೀತವಾಗಿ ಆಹ್ವಾನ ನೀಡುತ್ತಿದ್ದೇವೆ. ಅದೇ ರೀತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೀಡಿದ್ದೇವೆ. ರಾಮ ಮಂದಿರಕ್ಕೆ ಹೋಗಿ ಬನ್ನಿ ಎಂದು ಆಮಂತ್ರಣ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿಯಲ್ಲಿ ರಾಮ ಮಂದಿರಕ್ಕೆ ಭೇಟಿ ಕೊಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಆದಷ್ಟು ಬೇಗ ರಾಮನ ದರ್ಶನ ಪಡೆಯುವಂತೆ ಮನವಿ ಮಾಡಿದ್ದೇವೆ ಎಂದು ವಿಹೆಚ್​ಪಿ ತಿಳಿಸಿದೆ.

‘ಅಕ್ಷತಾ ಅಭಿಯಾನ’ದ ಅಂಗವಾಗಿ ಗುರುವಾರ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹೆಬ್ಬಾಳ್ಕರ್ ಮನೆಗೆ ತೆರಳಿ ಆಹ್ವಾನ ನೀಡಿದ್ದರು. ರಾಮ ಮಂದಿರ ಉದ್ಘಾಟನೆ ಆಹ್ವಾನ ವಿಚಾರ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿತ್ತು.

ಇದನ್ನೂ ಓದಿ: ಟೀಕೆಗಳ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಆಮಂತ್ರಣ ನೀಡಿದ ವಿಹೆಚ್​ಪಿ

ರಾಮ ಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರವಾಗಿ ಕಾಂಗ್ರೆಸ್ ನಾಯಕರು ಟೀಕಾಪ್ರಹಾರ ನಡೆಸುತ್ತಿರುವ ಬೆನ್ನಲ್ಲೇ ಹೆಬ್ಬಾಳ್ಕರ್​​ಗೆ ಆಹ್ವಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!