Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗೆ ವಿಎಚ್​ಪಿ ಖಂಡನೆ

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಮೊದಲು ಮಾಜಿ ಮುಖ್ಯಮಂತ್ರಿ ವಾಸ್ತವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ವಿಎಚ್​ಪಿ ಹೇಳಿದೆ.

ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗೆ ವಿಎಚ್​ಪಿ ಖಂಡನೆ
ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆಂದು ಸಂಗ್ರಹಿಸಿರುವ ಇಟ್ಟಿಗೆಗಳು (ಸಂಗ್ರಹ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 16, 2021 | 6:49 PM

ಬೆಂಗಳೂರು: ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಟ್ವೀಟ್ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ನ (VHP) ಸಂಘಟನಾ ಕಾರ್ಯದರ್ಶಿ ಬಸವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ವಿಎಚ್​ಪಿ ಸೇರಿದಂತೆ ಹಲವು ಸಂಘಟನೆಗಳು ಸಮಾಜದ ಎಲ್ಲ ವರ್ಗಗಳಿಂದಲೂ ದೇಣಿಗೆ ಸಂಗ್ರಹಿಸುತ್ತಿವೆ. ಜನರನ್ನು ಸಂಪರ್ಕಿಸುವ ಸ್ವಯಂಸೇವಕರು ಹಣ ನೀಡಲೇಬೇಕೆಂದು ಯಾರನ್ನೂ ಒತ್ತಾಯಿಸುತ್ತಿಲ್ಲ. ರಾಮಮಂದಿರ ನಿರ್ಮಾಣದಲ್ಲಿ ಇಡೀ ದೇಶ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

ರಾಮನು ಭಾರತದ ಅಸ್ಮಿತೆಯಾಗಿದ್ದಾನೆ. ರಾಮನನ್ನು ಬದುಕಿನ ಆದರ್ಶವಾಗಿ ಜನರು ಭಾವಿಸುತ್ತಾರೆ. ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಮೊದಲು ಮಾಜಿ ಮುಖ್ಯಮಂತ್ರಿ ವಾಸ್ತವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದ್ದಾರೆ.

ರಾಜ್ಯದ ಅತ್ಯುನ್ನತ ಹುದ್ದೆ ನಿರ್ವಹಿಸಿದ್ದ ವ್ಯಕ್ತಿಯಿಂದ ಹೊರಬಂದಿರುವ ಈ ಆಧಾರರಹಿತ ಆರೋಪವನ್ನು ವಿಎಚ್​ಪಿ ಗಂಭೀರವಾಗಿ ಪರಿಗಣಿಸಿದೆ. ದೇಶಭಕ್ತ ಸಂಘಟನೆ ಎನಿಸಿರುವ ಆರ್​ಎಸ್​ಎಸ್​ ಬಗ್ಗೆಯೂ ಕುಮಾರಸ್ವಾಮಿ ಹಗುವಾಗಿ ಮಾತನಾಡಿರುವುದನ್ನು ವಿಎಚ್​ಪಿ ಖಂಡಿಸುತ್ತದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಸಂವಾದದ ಘನತೆಯನ್ನು ಕುಗ್ಗಿಸಿರುವುದು ವಿಷಾದದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಟ್ವೀಟ್​

‘ದೇಣಿಗೆ ನೀಡದವರ ಮನೆಗಳ ಮಾರ್ಕಿಂಗ್’

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದರು.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ.  ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಆರೋಪಿಸಿದ್ದರು.

ಇನ್ನಷ್ಟು..

ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ: ಸಿದ್ದರಾಮಯ್ಯ!

ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ: ಎಚ್ ಡಿ ಕುಮಾರಸ್ವಾಮಿ

Published On - 6:31 pm, Tue, 16 February 21

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ