ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಇದೀಗ ತಲೆಮರೆಸಿಕೊಂಡಿರುವ ಭವನಿ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ
ಭವಾನಿ ರೇವಣ್ಣ
Follow us
|

Updated on: May 31, 2024 | 7:56 PM

ಬೆಂಗಳೂರು/ಚಿಕ್ಕಮಗಳೂರು, (ಮೇ 31): ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (Victim Kidnap case) ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ(bhavani revanna )ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಇಂದು (ಮೇ 31) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ.

ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೊಂಡಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಮುಂದಾಗಿದೆ. ಸದ್ಯ ಅಜ್ಙಾತ ಸ್ಥಳಕ್ಕೆ ತೆರಳಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದ್ದು,  ಎಲ್ಲಿದ್ದಾರೆ ಎನ್ನುವ ಮಾಹಿತಿ ಸಿಕ್ಕ ತಕ್ಷಣ ಯಾವ ಸಂದರ್ಭದಲ್ಲಾದರೂ ಭವಾನಿ ರೇವಣ್ಣ ಅವರ ಬಂಧನವಾಗಬಹುದು.

ಇದನ್ನೂ ಓದಿ: ಕಿಡ್ನ್ಯಾಪ್ ಕೇಸ್​: ಭವಾನಿ ಜಾಮೀನು ಅರ್ಜಿ ವಜಾ, ಇಂದು ರೇವಣ್ಣ ಕುಟುಂಬಕ್ಕೆ ಡಬಲ್ ಶಾಕ್

ತಲೆಮರೆಸಿಕೊಂಡ ಭವಾನಿ ರೇವಣ್ಣ

ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಭವಾನಿ ಕಾರು ಚಾಲಕ ಅಜಿತ್​ಗಾಗಿ ಎಸ್ಐಟಿ ಶೋಧ

ಸಂತ್ರಸ್ತೆ ವಿಡಿಯೋ ಚಿತ್ರೀಕರಿಸಿದ್ದ ಭವಾನಿ ರೇವಣ್ಣ ಕಾರು ಚಾಲನ ಅಜಿತ್​ಗಾಗಿ SIT ಹುಡುಕಾಟ ನಡೆಸಿದ್ದು, ನಿನ್ನೆ (ಮೇ 30) ರಾತ್ರಿ ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರುವ ಅವರ ಮಾವ ದಿನೇಶ್ ಮನೆಯಲ್ಲಿ ಶೋಧ ನಡೆಸಿದೆ. ಅಜಿತ್​ಗಾಗಿ ಎಸ್ಐಟಿ ಶೋಧ ನಡೆಸಿದ ಮಾವ ದಿನೇಶ್​ ಮನೆಗೆ ಬೀಗಹಾಕಿಕೊಂಡು ಹೋಗಿದ್ದಾರೆ.

ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಮೈಸೂರಿನ ಕೆಆರ್​ಪೇಟೆಯಲ್ಲಿ ಎಚ್​ಡಿ ರೇವಣ್ಣ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಸಂತ್ರಸ್ತ ಮಹಿಳೆ ಪುತ್ರ ದೂರು ದಾಖಲಿಸಿದ್ದ. ಬಳಿಕ ಭವಾನಿ ರೇವಣ್ಣ ಕಾರು ಚಾಲಕ ಅಜಿತ್, ನನ್ನ ಯಾರು ಅಪಹರಣ ಮಾಡಿಲ್ಲ ಎಂದು ಸಂತ್ರಸ್ತೆಯಿಂದ ಹೇಳಿಸಿ ಆ ವಿಡಿಯೋವನ್ನು ವೈರಲ್ ಮಾಡಿದ್ದ. ಅಲ್ಲದೇ ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿರುವ ಅಜಿತ್​ಗಾಗಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ