AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಇದೀಗ ತಲೆಮರೆಸಿಕೊಂಡಿರುವ ಭವನಿ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ
ಭವಾನಿ ರೇವಣ್ಣ
ರಮೇಶ್ ಬಿ. ಜವಳಗೇರಾ
|

Updated on: May 31, 2024 | 7:56 PM

Share

ಬೆಂಗಳೂರು/ಚಿಕ್ಕಮಗಳೂರು, (ಮೇ 31): ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (Victim Kidnap case) ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ(bhavani revanna )ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಇಂದು (ಮೇ 31) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ.

ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೊಂಡಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಮುಂದಾಗಿದೆ. ಸದ್ಯ ಅಜ್ಙಾತ ಸ್ಥಳಕ್ಕೆ ತೆರಳಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದ್ದು,  ಎಲ್ಲಿದ್ದಾರೆ ಎನ್ನುವ ಮಾಹಿತಿ ಸಿಕ್ಕ ತಕ್ಷಣ ಯಾವ ಸಂದರ್ಭದಲ್ಲಾದರೂ ಭವಾನಿ ರೇವಣ್ಣ ಅವರ ಬಂಧನವಾಗಬಹುದು.

ಇದನ್ನೂ ಓದಿ: ಕಿಡ್ನ್ಯಾಪ್ ಕೇಸ್​: ಭವಾನಿ ಜಾಮೀನು ಅರ್ಜಿ ವಜಾ, ಇಂದು ರೇವಣ್ಣ ಕುಟುಂಬಕ್ಕೆ ಡಬಲ್ ಶಾಕ್

ತಲೆಮರೆಸಿಕೊಂಡ ಭವಾನಿ ರೇವಣ್ಣ

ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಭವಾನಿ ಕಾರು ಚಾಲಕ ಅಜಿತ್​ಗಾಗಿ ಎಸ್ಐಟಿ ಶೋಧ

ಸಂತ್ರಸ್ತೆ ವಿಡಿಯೋ ಚಿತ್ರೀಕರಿಸಿದ್ದ ಭವಾನಿ ರೇವಣ್ಣ ಕಾರು ಚಾಲನ ಅಜಿತ್​ಗಾಗಿ SIT ಹುಡುಕಾಟ ನಡೆಸಿದ್ದು, ನಿನ್ನೆ (ಮೇ 30) ರಾತ್ರಿ ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರುವ ಅವರ ಮಾವ ದಿನೇಶ್ ಮನೆಯಲ್ಲಿ ಶೋಧ ನಡೆಸಿದೆ. ಅಜಿತ್​ಗಾಗಿ ಎಸ್ಐಟಿ ಶೋಧ ನಡೆಸಿದ ಮಾವ ದಿನೇಶ್​ ಮನೆಗೆ ಬೀಗಹಾಕಿಕೊಂಡು ಹೋಗಿದ್ದಾರೆ.

ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಮೈಸೂರಿನ ಕೆಆರ್​ಪೇಟೆಯಲ್ಲಿ ಎಚ್​ಡಿ ರೇವಣ್ಣ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಸಂತ್ರಸ್ತ ಮಹಿಳೆ ಪುತ್ರ ದೂರು ದಾಖಲಿಸಿದ್ದ. ಬಳಿಕ ಭವಾನಿ ರೇವಣ್ಣ ಕಾರು ಚಾಲಕ ಅಜಿತ್, ನನ್ನ ಯಾರು ಅಪಹರಣ ಮಾಡಿಲ್ಲ ಎಂದು ಸಂತ್ರಸ್ತೆಯಿಂದ ಹೇಳಿಸಿ ಆ ವಿಡಿಯೋವನ್ನು ವೈರಲ್ ಮಾಡಿದ್ದ. ಅಲ್ಲದೇ ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿರುವ ಅಜಿತ್​ಗಾಗಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ