AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಇದೀಗ ತಲೆಮರೆಸಿಕೊಂಡಿರುವ ಭವನಿ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ
ಭವಾನಿ ರೇವಣ್ಣ
ರಮೇಶ್ ಬಿ. ಜವಳಗೇರಾ
|

Updated on: May 31, 2024 | 7:56 PM

Share

ಬೆಂಗಳೂರು/ಚಿಕ್ಕಮಗಳೂರು, (ಮೇ 31): ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (Victim Kidnap case) ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ(bhavani revanna )ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಇಂದು (ಮೇ 31) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗಾಗಿ ಎಸ್​ಐಟಿ ಶೋಧ ನಡೆಸಿದೆ.

ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೊಂಡಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಮುಂದಾಗಿದೆ. ಸದ್ಯ ಅಜ್ಙಾತ ಸ್ಥಳಕ್ಕೆ ತೆರಳಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂದು ಎಸ್​ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದ್ದು,  ಎಲ್ಲಿದ್ದಾರೆ ಎನ್ನುವ ಮಾಹಿತಿ ಸಿಕ್ಕ ತಕ್ಷಣ ಯಾವ ಸಂದರ್ಭದಲ್ಲಾದರೂ ಭವಾನಿ ರೇವಣ್ಣ ಅವರ ಬಂಧನವಾಗಬಹುದು.

ಇದನ್ನೂ ಓದಿ: ಕಿಡ್ನ್ಯಾಪ್ ಕೇಸ್​: ಭವಾನಿ ಜಾಮೀನು ಅರ್ಜಿ ವಜಾ, ಇಂದು ರೇವಣ್ಣ ಕುಟುಂಬಕ್ಕೆ ಡಬಲ್ ಶಾಕ್

ತಲೆಮರೆಸಿಕೊಂಡ ಭವಾನಿ ರೇವಣ್ಣ

ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಭವಾನಿ ಕಾರು ಚಾಲಕ ಅಜಿತ್​ಗಾಗಿ ಎಸ್ಐಟಿ ಶೋಧ

ಸಂತ್ರಸ್ತೆ ವಿಡಿಯೋ ಚಿತ್ರೀಕರಿಸಿದ್ದ ಭವಾನಿ ರೇವಣ್ಣ ಕಾರು ಚಾಲನ ಅಜಿತ್​ಗಾಗಿ SIT ಹುಡುಕಾಟ ನಡೆಸಿದ್ದು, ನಿನ್ನೆ (ಮೇ 30) ರಾತ್ರಿ ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರುವ ಅವರ ಮಾವ ದಿನೇಶ್ ಮನೆಯಲ್ಲಿ ಶೋಧ ನಡೆಸಿದೆ. ಅಜಿತ್​ಗಾಗಿ ಎಸ್ಐಟಿ ಶೋಧ ನಡೆಸಿದ ಮಾವ ದಿನೇಶ್​ ಮನೆಗೆ ಬೀಗಹಾಕಿಕೊಂಡು ಹೋಗಿದ್ದಾರೆ.

ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಮೈಸೂರಿನ ಕೆಆರ್​ಪೇಟೆಯಲ್ಲಿ ಎಚ್​ಡಿ ರೇವಣ್ಣ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಸಂತ್ರಸ್ತ ಮಹಿಳೆ ಪುತ್ರ ದೂರು ದಾಖಲಿಸಿದ್ದ. ಬಳಿಕ ಭವಾನಿ ರೇವಣ್ಣ ಕಾರು ಚಾಲಕ ಅಜಿತ್, ನನ್ನ ಯಾರು ಅಪಹರಣ ಮಾಡಿಲ್ಲ ಎಂದು ಸಂತ್ರಸ್ತೆಯಿಂದ ಹೇಳಿಸಿ ಆ ವಿಡಿಯೋವನ್ನು ವೈರಲ್ ಮಾಡಿದ್ದ. ಅಲ್ಲದೇ ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿರುವ ಅಜಿತ್​ಗಾಗಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ