AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆನರಸೀಪುರದಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು

ಹೊಳೆನರಸೀಪುರದಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 06, 2024 | 12:46 PM

Share

ಸಂತ್ರಸ್ತೆಯು ದೂರಿನಲ್ಲಿ ತನ್ನನ್ನು ನಗರದಲ್ಲಿರುವ ಈ ಮನೆಗೂ ಕರೆತರಲಾಗಿತ್ತು ಎಂದು ದಾಖಲಿಸಿರುವಂತಿದೆ. ಹಾಗಾಗೇ, ಸ್ಥಳದ ಮಹಜರ್ ನಡೆಸಲು ಅವರನ್ನು ಅಧಿಕಾರಿಗಳು ಇಲ್ಲಿಗೆ ಕರೆತಂದಿರುತ್ತಾರೆ. ಶನಿವಾರದಂದು ಬಂಧನಕ್ಕೊಳಗಾಗಿರುವ ರೇವಣ್ಣರನ್ನು 4-ದಿನ ಎಸ್ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ. ಸೆಕ್ಸ್ ಟೇಪುಗಳ ಇನ್ನೊಬ್ಬ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು ಅವರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿಮಾಡಲಾಗಿದೆ.

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರರು ದಾಖಲಿಸಿರುವ ಸಂತ್ರಸ್ತೆಯೊಬ್ಬರನ್ನು (victim) ಇಂದು ನಗರದ ಬಸವನಗುಡಿಯಲ್ಲಿರುವ ಶಾಸಕ ಹೆಚ್ ಡಿ ರೇವಣ್ಣ (HD Revanna ) ಮನೆಗೆ ಕರೆತರಲಾಯಿತು. ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಪೊಲೀಸ್ ವಾಹನದಲ್ಲಿ ಸ್ಥಳದ ಮಹಜರ್ ಗಾಗಿ ಕರೆತಂದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅಧಿಕಾರಿಗಳಲ್ಲಿ ಹೆಚ್ಚಿನವರು ಮಹಿಳಾ ಸಿಬ್ಬಂದಿಯಾಗಿದ್ದಾರೆ. ಸಂತ್ರಸ್ತೆಯನ್ನು ಕೊನೆಯಲ್ಲಿ ಜೀಪ್ ನಿಂದ ಕೆಳಗಿಳಿಸಿ ಮನೆಯೊಳಗೆ ಕರೆದೊಯ್ಯಲಾಗುತ್ತದೆ. ಸಂತ್ರಸ್ತೆಯು ದೂರಿನಲ್ಲಿ ತನ್ನನ್ನು ನಗರದಲ್ಲಿರುವ ಈ ಮನೆಗೂ ಕರೆತರಲಾಗಿತ್ತು ಎಂದು ದಾಖಲಿಸಿರುವಂತಿದೆ. ಹಾಗಾಗೇ, ಸ್ಥಳದ ಮಹಜರ್ ನಡೆಸಲು ಅವರನ್ನು ಅಧಿಕಾರಿಗಳು ಇಲ್ಲಿಗೆ ಕರೆತಂದಿರುತ್ತಾರೆ. ಶನಿವಾರದಂದು ಬಂಧನಕ್ಕೊಳಗಾಗಿರುವ ರೇವಣ್ಣರನ್ನು 4-ದಿನ ಎಸ್ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ. ಸೆಕ್ಸ್ ಟೇಪುಗಳ ಇನ್ನೊಬ್ಬ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು ಅವರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂತ್ರಸ್ತೆ ಅಪಹರಣ ಪ್ರಕರಣ, ಇದು ರಾಜಕೀಯ ಷಡ್ಯಂತ್ರ, ಬಂಧನ ಬಳಿಕ ಹೆಚ್​ಡಿ ರೇವಣ್ಣ ಫಸ್ಟ್​ ರಿಯಾಕ್ಷನ್ ​

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.