AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಫೋನ್, ಮೆಸೇಜ್ ಮಾಡಬೇಡಿ ಎಂದಿದ್ದಳು -‘ಸಿಡಿ ಲೇಡಿ’ ತಾಯಿಯ ಆತಂಕ

ನಾನು ಊರಿಗೆ ಕರೆದಿದ್ದಕ್ಕೆ ಬರುವುದಿಲ್ಲವೆಂದು ಹೇಳಿದ್ದಳು. ನನ್ನ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಫೋನ್, ಮೆಸೇಜ್ ಮಾಡಬೇಡಿ ಎಂದಿದ್ದಳು -‘ಸಿಡಿ ಲೇಡಿ’ ತಾಯಿಯ ಆತಂಕ
ಸಿಡಿ ಯುವತಿಯ ಕುಟುಂಬಸ್ಥರು
KUSHAL V
|

Updated on:Mar 16, 2021 | 9:18 PM

Share

ಬೆಳಗಾವಿ: ‘ಸಿಡಿ’ಯಲ್ಲಿರುವಳು ನಾನಲ್ಲ ಎಂದು ಮಗಳು ಹೇಳಿದಳು ಎಂದು ಟಿವಿ9ಗೆ ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ, ಆ ಸಿಡಿಯಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಸಿಡಿ ವೈರಲ್ ಆದಾಗ ಕೇಳಿದ್ದಕ್ಕೆ ನನ್ನ ಮಗಳು ಹಾಗೆ ಹೇಳಿದ್ದಳು ಎಂದು ಟಿವಿ9ಗೆ ಸಂತ್ರಸ್ತೆಯ ತಾಯಿ ಹೇಳಿದ್ದಾರೆ. 

ಮನೆಗೆ ವಾಪಸ್ ಬಂದಾಗ ಹೇಳುವೆ ಎಂದಿದ್ದಳು. ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಳು. ನಾನೆಲ್ಲಿದ್ದೀನಿ ಎನ್ನುವುದೂ ಗೊತ್ತಿಲ್ಲ ಎಂದು ಹೇಳಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಮಗಳನ್ನು ಯಾರೋ ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಮಗಳ ಜೀವಕ್ಕೆ ಅಪಾಯವಿದೆ ಎಂದು ಆಕೆಯ ತಾಯಿ ಆತಂಕ ವ್ಯಕ್ತಪಡಿಸಿದರು.

‘ನನ್ನ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಳು’ ಟಿವಿಯಲ್ಲಿ ವಿಡಿಯೋ ನೋಡಿ ನಾನು ಪುತ್ರಿಗೆ ಕರೆ ಮಾಡಿದ್ದೆ. ಕರೆ ಮಾಡಿದ್ದಾಗ ಟಿವಿ ನೋಡು ಎಂದು ಮಗಳಿಗೆ ಹೇಳಿದ್ದೆ. ಟಿವಿಯಲ್ಲಿ ದೃಶ್ಯವನ್ನು ನೋಡಿ ನಮಗೆ ಆಘಾತವಾಯಿತು ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ಆಗ, ನಾನು ಯಾವುದೇ ತಪ್ಪು ಮಾಡಿಲ್ಲ, ಅದು ನಾನಲ್ಲ ಅಂದಿದ್ಲು. ನನ್ನಂತೆ ಕಾಣುವ ಹುಡುಗಿ ಫೋಟೋ ಎಡಿಟ್ ಮಾಡಿದ್ದಾರೆ. ನನ್ನ ಪುತ್ರಿ ಮೊಬೈಲ್​ಗೆ ಕರೆ ಮಾಡಿದ್ದಾಗ ಹೀಗೆ ಹೇಳಿದ್ದಳು. ಊರಿಗೆ ಬಂದು ತಪ್ಪುಮಾಡಿಲ್ಲವೆಂದು ಹೇಳುವೆ ಬಾ ಎಂದಿದ್ದೆ. ನಾನು ಊರಿಗೆ ಕರೆದಿದ್ದಕ್ಕೆ ಬರುವುದಿಲ್ಲವೆಂದು ಹೇಳಿದ್ದಳು. ನನ್ನ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ನಾನು ಇರುವಲ್ಲಿ ಕ್ಷೇಮವಾಗಿದ್ದೀನಿ, ತೊಂದರೆಯಿಲ್ಲ ಅಂದ್ಲು. ನನ್ನನ್ನು ಇಲ್ಲೇ ಒಂದು ಕಡೆ ಇಟ್ಟಿದ್ದಾರೆ, ನೀವು ಆರಾಮಾಗಿರಿ. ನನಗೆ ಫೋನ್, ಮೆಸೇಜ್ ಮಾಡಬೇಡಿ ಎಂದು ಸೂಚಿಸಿದ್ದಳು. ನಮ್ಮೊಟ್ಟಿಗೆ ಇರುವ ಮಕ್ಕಳಿಗೆ ಮಗಳು ಸೂಚನೆ ನೀಡಿದ್ದಳು. ನನ್ನ ಫೋನ್​ ಚೆಕ್​ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಳು. ಒಂದು ದಿನ ಬಿಟ್ಟು ಫೋನ್ ಮಾಡಿದಾಗ ಸ್ವಿಚ್​ ಆಫ್​ ಆಗಿತ್ತು ಎಂದು ಸಂತ್ರಸ್ತೆಯ ತಾಯಿ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಹಾಗಾಗಿ, ನಾವು ಬೆಳಗಾವಿಗೆ ಬಂದು ಪೊಲೀಸರಿಗೆ ದೂರು ನೀಡಿದೆವು ಎಂದು ಟಿವಿ9ಗೆ ಯುವತಿಯ ತಾಯಿ ಹೇಳಿದ್ದಾರೆ. ಜೊತೆಗೆ, ಇದ್ರಲ್ಲಿ ಯಾರು ಇದ್ದಾರೆ ಅವರಿಗೆ ಶಿಕ್ಷೆಯಾಗಬೇಕು. ನಮ್ಮ ಮಗಳನ್ನ ಹುಡುಕಿಕೊಡಿ ಎಂದು ದಂಪತಿ ಕೈಮುಗಿದು ಕೇಳಿಕೊಂಡರು.

ಇದನ್ನೂ ಓದಿ: ನನ್ನ ಮಗಳು ಕಿಡ್ನ್ಯಾಪ್‌ ಎಂದು ‘ಸಿಡಿ ಲೇಡಿ’ಯ ತಂದೆಯಿಂದ ಠಾಣೆಗೆ ದೂರು ದಾಖಲು

Published On - 9:16 pm, Tue, 16 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ