AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?

ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿದೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?
ಸಂತ್ರಸ್ತ ಯುವತಿ
KUSHAL V
|

Updated on:Mar 29, 2021 | 6:16 PM

Share

ಬೆಂಗಳೂರು: ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಸದ್ಯ, ವಕೀಲ ಜಗದೀಶ್ ಅರ್ಜಿ ಸಿಎಂಎಂ ಮುಂದಿದೆ ಎಂದು ತಿಳಿದುಬಂದಿದೆ. ವಕೀಲರ ಅರ್ಜಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದಿದೆ.

‘ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ’ ಇತ್ತ, ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ ಎಂದು ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಆರೋಪಿ ಪವರ್‌ಫುಲ್ ಆಗಿರುವುದರಿಂದ ನಮ್ಮ ಎಲ್ಲ ಚಲನವಲನಗಳನ್ನು ಆರೋಪಿ ಗಮನಿಸ್ತಿದ್ದಾರೆ. ಹೀಗಾಗಿ ನಾನು ಹೆಚ್ಚು ಮಾಹಿತಿ ನೀಡುವುದಕ್ಕೆ ಆಗಲ್ಲ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಆದರೆ, ಆ ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸುತ್ತೇವೆ ಎಂದೂ ಸಹ ಹೇಳಿದರು.

ಅದಕ್ಕೂ ಮುನ್ನ ವಕೀಲ ಜಗದೀಶ್ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಆಗಮಿಸಿ ಸಂತ್ರಸ್ತೆ ಪರ ಅರ್ಜಿ ನೀಡಿ, ಜಡ್ಜ್​ ಮುಂದೆ ಹೇಳಿಕೆಗೆ ಮನವಿ ಮಾಡಿ​ ಡೆಪ್ಯುಟಿ ರಿಜಿಸ್ಟ್ರಾರ್​ಗೆ ಮನವಿ ಮಾಡಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಪಡೆಯಲಾಗಿದೆ. ಸಿಡಿ ಲೇಡಿ ಕೋರ್ಟ್​ಗೆ ಹಾಜರಾಗುವ ಹಿನ್ನೆಲೆಯಲ್ಲಿ ಕೋರ್ಟ್​ ಕಟ್ಟಡದ ಬಳಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ, ಈಗ ನೃಪತುಂಗ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಪೊಲೀಸರು ಭದ್ರತೆ ವಾಪಸ್​ ಪಡೆದಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ

Published On - 5:44 pm, Mon, 29 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?