AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕವಾಗಿ ಬಳಸಿಕೊಂಡು ಮೋಸ: ಬಳ್ಳಾರಿ ಬಿಜೆಪಿ ಎಂಪಿ ಮಗನ ಮುಖವಾಡ ಬಿಚ್ಚಿಟ್ಟ ಯುವತಿ

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾರೆ ಎಂದು ಯುವತಿಯೋರ್ವಳು ಸಂಸದ ದೇವೇಂದ್ರಪ್ಪ ಪುತ್ರ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಬೆಂಗಳೂರಿನ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಅತ್ತ ಮೈಸೂರಿನಲ್ಲಿ ಯುವತಿ ವಿರುದ್ಧ ದೇವೇಂದ್ರಪ್ಪ ಪುತ್ರ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದು, ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ. ಇನ್ನು ಇದೀಗ ಯುವತಿಯೇ ಪ್ರತಿಕ್ರಿಯಿಸಿದ್ದು, ರಂಗನಾಥ್ ಪರಿಚಯ ಹೇಗೆ? ಎನ್ನುವುದನ್ನು ಬಿಚ್ಚಿಟ್ಟಿದ್ದಾರೆ.

ಲೈಂಗಿಕವಾಗಿ ಬಳಸಿಕೊಂಡು ಮೋಸ: ಬಳ್ಳಾರಿ ಬಿಜೆಪಿ ಎಂಪಿ ಮಗನ ಮುಖವಾಡ ಬಿಚ್ಚಿಟ್ಟ ಯುವತಿ
ರಂಗನಾಥ್ ಜೊತೆ ಯುವತಿ
ರಮೇಶ್ ಬಿ. ಜವಳಗೇರಾ
|

Updated on: Nov 17, 2023 | 3:00 PM

Share

ಬೆಂಗಳೂರು, (ನವೆಂಬರ್ 17): ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ(BJP MP Devendrappa) ಪುತ್ರ ರಂಗನಾಥ್ ವಿರುದ್ಧ ಲವ್, ಸೆಕ್ಸ್ ದೋಖಾ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಂತ್ರಸ್ತೆ ಯುವತಿ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಎಫ್​ಐಆರ್ ದಾಖಲಾಗಿದೆ. ಆದ್ರೆ, ಈ ಆರೋಪವನ್ನು ಖುದ್ದು ರಂಗನಾಥ್ ಹಾಗೂ ಸಂಸದ ದೇವೇಂದ್ರಪ್ಪ ಅಲ್ಲಗಳೆದಿದ್ದಾರೆ. ಇನ್ನು ಈ ಬಗ್ಗೆ ಯುವತಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು, 2022ರಿಂದ ಕಾಲೇಜು ಉಪನ್ಯಾಸಕ ರಂಗನಾಥ ನನಗೆ ಪರಿಚಯಸ್ಥರು. ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಬಳಿಕ ನನ್ನನ್ನು ಮದುವೆಯಾಗಿ ಎಂದಾಗ ಅವೈಡ್ ಮಾಡಿದ್ದಾರೆ ಎಂದು ಸ್ಪಷ್ಟಪಡಿದ್ದಾರೆ.

ಬೆಂಗಳೂರಿಗೆ ಬಂದಿದ್ದೇನೆ ಸಿಗುತ್ತಿಯಾ ಎಂದು ಒಂದು ದಿನ ಕರೆ ಮಾಡಿದ್ದರು. ನಂತರ ಭೇಟಿ ಮಾಡಿ ಉಪನ್ಯಾಸಕ ರಂಗನಾಥ ಮೈಸೂರಿಗೆ ಕರೆಸಿಕೊಂಡಿದ್ದ. ಅಲ್ಲದೇ ಖಾಸಗಿ ಹೋಟೆಲ್​ನಲ್ಲಿ ನನ್ನ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಆದ್ರೆ, ನನ್ನನ್ನು ಮದುವೆಯಾಗಿ ಎಂದಾಗ ಅವೈಡ್ ಮಾಡಿದ್ದಾರೆ. ದುಡ್ಡು ಕೊಡುತ್ತೇನೆ ನನ್ನನ್ನು ಬಿಟ್ಟುಬಿಡು ಎಂದು ನನಗೆ ಹೇಳಿದ್ದಾರೆ. ಈಗ ನೋಡಿದ್ರೆ ನನ್ನ ವಿರುದ್ಧವೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಕರ್ನಾಟಕ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ

ಯಾರೋ ಒಬ್ಬರ ಮೇಲೆ ಆರೋಪ ಮಾಡುವುದಕ್ಕೆ ನಾನು ಹುಚ್ಚಲ್ಲ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ. ನಾನು ಡಿಮ್ಯಾಂಡ್ ಮಾಡಿರಲಿಲ್ಲ, ಆರು ತಿಂಗಳ ಆದ್ಮೇಲೆ ಬರುತ್ತೇನೆ ಎಂದು ಹೇಳಿದ್ದರು. ಮನೆ ಬಾಡಿಗೆ ಅವರೇ ಕಟ್ಟಿದ್ದಾರೆ‌‌. ಸಂಸದರ ಪುತ್ರ ರಂಗನಾಥಗೆ ನಾನು ಬ್ಲ್ಯಾಕ್​ಮೇಲ್ ಮಾಡಿಲ್ಲ ಎಂದಿದ್ದಾರೆ.

ಪ್ರತ್ರನ ಮೇಲಿನ ಆರೋಪಕ್ಕೆ ಸಂಸದ ದೇವೇಂದ್ರಪ್ಪ ಹೇಳಿದ್ದೇನು?

ಇನ್ನು ಪುತ್ರನ ಮೇಲೆ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಖುದ್ದ ಸಂಸದ ದೇವೇಂದ್ರಪ್ಪ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಗೆ ಗೊತ್ತಾಗಿದೆ. ಮಹಿಳೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾಳೆ ಎಂದು ಜನ ಹೇಳುತ್ತಿದ್ದಾರೆ. ಆ ಯುವತಿ ನನಗೆ ಒಂದು ಬಾರಿ ಫೋನ್ ಮಾಡಿದ್ದಳು . ನಾನು ನಿನ್ನ ಮುಖ ನೋಡಿಲ್ಲ, ನಗೆ ಯಾಕೆ ಕರೆ ಮಾಡ್ತೀಯಾ? ನನ್ನ ನಂಬರ್ ನಿನಗೆ ಯಾರು ಕೊಟ್ಟರು ಎಂದು ನಾನು ಕೇಳಿದ್ದೆ. ಮಹಿಳೆಗೆ ಅನ್ಯಾಯ ಆಗಿದ್ರೆ ಕಾನೂನು ಪ್ರಕಾರ ಹೋಗಲಿ. ತಪ್ಪು ಸರಿಯನ್ನು ಪೊಲೀಸರು ನಿರ್ಧಾರ ಮಾಡುತ್ತಾರೆ. ಮಹಿಳೆ ಸರ್ಪಾಸ್ತ್ರ ಹಾಕಿದ್ದಾಳೆ, ನನ್ನ ಮಗ ಗರುಡಾಸ್ತ್ರ ಹಾಕಿದ್ದಾನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ