AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ

ವಿಡಿಯೋ ಕಾಲ್ ಮಾಡಿ ಜನರಿಗೆ ಆನ್​ಲೈನ್ ವಂಚನೆಗೆ ಯತ್ನಿಸಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರ ಹೆಸರಿನಲ್ಲಿ ವಿಡಿಯೋ ಕಾಲ್​ ಮಾಡಿ ವಂಚನೆಗೆ ಯತ್ನಿಸಲಾಗಿದೆ. ಸದ್ಯ ವಿಜಯಪುರ ಸಿಇಎನ್ ಠಾಣೆಗೆ ಯುವಕ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ
ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 16, 2024 | 4:53 PM

Share

ವಿಜಯಪುರ, ಸೆಪ್ಟೆಂಬರ್​ 16: ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್​​ ಯುಗದಲ್ಲಿ ಆನ್ ಲೈನ್ ವಂಚನೆ (cheat) ಎಗ್ಗಿಲ್ಲದೇ ನಡೆಯುತ್ತಿದೆ. ಈ ಮುಂಚೆ ಕರೆ ಮಾಡಿ ನಾವು ಬ್ಯಾಂಕ್​​ನವರು, ಪೊಲೀಸ್ ಕಸ್ಟಮ್ಸ್ ಅಧಿಕಾರಿಗಳು ಎಂದು ಸುಳ್ಳು ಹೇಳಿ ವಂಚಿಸುತ್ತಿದ್ದರು. ಆದರೆ ಕಾಲ ಬದಲಾದಂತೆ ಅವರು ಕೂಡ ಬದಲಾಗಿದ್ದು, ಇದೀಗ ವಿಡಿಯೋ ಕಾಲ್ ಮಾಡಿ ಬೇರೆ ರಾಜ್ಯದ ಪೊಲೀಸರು ಎಂದು ಬೆದರಿಕೆ ಹಾಕಿ ಓಟಿಪಿ ನಂಬರ್ ಪಡೆದು ಮೋಸ ಮಾಡುವ ಜಾಲ ಹುಟ್ಟಿಕೊಂಡಿದ್ದು, ಇಂತಹದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ನಗರದ ನಿವಾಸಿ ಸಂತೋಷ ಚೌಧರಿ ಎಂಬುವವರಿಗೆ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸ್ ಅಧಿಕಾರಿ ಎಂದು ಕರೆ ಮಾಡಿ ಬೆದರಿಕೆ ಹಾಕಿ ಓಟಿಪಿ ಪಡೆಯಲು ಯತ್ನಿಸಿರುವಂತಹ ಘಟನೆ ನಡೆದಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸ್ ಯುನಿಫಾರ್ಮ್​​ ಹಾಕಿಕೊಂಡು ಓರ್ವ ವ್ಯಕ್ತಿ 69-A ರೋಡ್ ವಿಜಯನಗರ ಕಾಲೋನಿ ಜೆವಿ ನಗರ ಅಂದೇರಿ ಇಸ್ಟ್ ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿರೋದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಒನ್ ಡೇ ಟ್ರಿಪ್ ಮಾಡಿ ಕ್ಯಾಬ್ ಚಾಲಕನ ಬಳಿಯೇ ದರೋಡೆ: ಕಾರು ಸಮೇತ ಪರಾರಿಯಾಗಿದ್ದ ಆಸಾಮಿ ಅಂದರ್

ನಿಮ್ಮ ಮೊಬೈಲ್ ನಂಬರ್ ಮೇಲೆ 17 ವಿವಿಧ ಪ್ರಕರಣಗಳು ದಾಖಲಾಗಿವೆ. ಅಶಾಂತಿ ಸೃಷ್ಟಿ ಮಾಡುವುದು ಹಾಗೂ ಹಿಂಸೆ ಮಾಡುವ ಸಂದೇಶ ಹಾಕಿರುವ ಕಾರಣ ಕೇಸ್​ಗಳು ದಾಖಲಾಗಿವೆ ಎಂದು ನಕಲಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!

ಬಳಿಕ ಒನ್ ಸೈಡ್ ವಿಡಿಯೋ ಕಾಲ್ ಮಾಡಿ ಸಹಾಯಕ ಅಧಿಕಾರಿ ಜೊತೆಗೆ ಮಾತನಾಡು ಎಂದು ಹೇಳಿದ್ದಾನೆ. ಸಹಾಯಕ ಅಧಿಕಾರಿ ಸಂತೋಷ ಚೌಧರಿ ಆಧಾರ್ ಕಾರ್ಡ್, ಓಟಿಪಿ ನಂಬರ್ ಕೇಳಿದ್ದಾನೆ. ಈ ಕುರಿತು ಸಂಶಯ ಬಂದ ಹಿನ್ನಲೆ ಸಂತೋಷ ಅದನ್ನು ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಸಿಇಎನ್ ಠಾಣೆಗೆ ಆಗಮಿಸಿ ವಿಡಿಯೋ ಕಾಲ್ ಸ್ಕ್ರೀನ್ ರೆಕಾರ್ಡ್ ವಿಜಯಪುರ ಸಿಇಎನ್ ಪೊಲೀಸರಿಗೆ ನೀಡಿ ದೂರು ದಾಖಲು ಮಾಡಿದ್ದಾರೆ. ಸದ್ಯ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Mon, 16 September 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!