AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ

ವಿಡಿಯೋ ಕಾಲ್ ಮಾಡಿ ಜನರಿಗೆ ಆನ್​ಲೈನ್ ವಂಚನೆಗೆ ಯತ್ನಿಸಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರ ಹೆಸರಿನಲ್ಲಿ ವಿಡಿಯೋ ಕಾಲ್​ ಮಾಡಿ ವಂಚನೆಗೆ ಯತ್ನಿಸಲಾಗಿದೆ. ಸದ್ಯ ವಿಜಯಪುರ ಸಿಇಎನ್ ಠಾಣೆಗೆ ಯುವಕ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ
ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 16, 2024 | 4:53 PM

Share

ವಿಜಯಪುರ, ಸೆಪ್ಟೆಂಬರ್​ 16: ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್​​ ಯುಗದಲ್ಲಿ ಆನ್ ಲೈನ್ ವಂಚನೆ (cheat) ಎಗ್ಗಿಲ್ಲದೇ ನಡೆಯುತ್ತಿದೆ. ಈ ಮುಂಚೆ ಕರೆ ಮಾಡಿ ನಾವು ಬ್ಯಾಂಕ್​​ನವರು, ಪೊಲೀಸ್ ಕಸ್ಟಮ್ಸ್ ಅಧಿಕಾರಿಗಳು ಎಂದು ಸುಳ್ಳು ಹೇಳಿ ವಂಚಿಸುತ್ತಿದ್ದರು. ಆದರೆ ಕಾಲ ಬದಲಾದಂತೆ ಅವರು ಕೂಡ ಬದಲಾಗಿದ್ದು, ಇದೀಗ ವಿಡಿಯೋ ಕಾಲ್ ಮಾಡಿ ಬೇರೆ ರಾಜ್ಯದ ಪೊಲೀಸರು ಎಂದು ಬೆದರಿಕೆ ಹಾಕಿ ಓಟಿಪಿ ನಂಬರ್ ಪಡೆದು ಮೋಸ ಮಾಡುವ ಜಾಲ ಹುಟ್ಟಿಕೊಂಡಿದ್ದು, ಇಂತಹದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ನಗರದ ನಿವಾಸಿ ಸಂತೋಷ ಚೌಧರಿ ಎಂಬುವವರಿಗೆ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸ್ ಅಧಿಕಾರಿ ಎಂದು ಕರೆ ಮಾಡಿ ಬೆದರಿಕೆ ಹಾಕಿ ಓಟಿಪಿ ಪಡೆಯಲು ಯತ್ನಿಸಿರುವಂತಹ ಘಟನೆ ನಡೆದಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸ್ ಯುನಿಫಾರ್ಮ್​​ ಹಾಕಿಕೊಂಡು ಓರ್ವ ವ್ಯಕ್ತಿ 69-A ರೋಡ್ ವಿಜಯನಗರ ಕಾಲೋನಿ ಜೆವಿ ನಗರ ಅಂದೇರಿ ಇಸ್ಟ್ ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿರೋದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಒನ್ ಡೇ ಟ್ರಿಪ್ ಮಾಡಿ ಕ್ಯಾಬ್ ಚಾಲಕನ ಬಳಿಯೇ ದರೋಡೆ: ಕಾರು ಸಮೇತ ಪರಾರಿಯಾಗಿದ್ದ ಆಸಾಮಿ ಅಂದರ್

ನಿಮ್ಮ ಮೊಬೈಲ್ ನಂಬರ್ ಮೇಲೆ 17 ವಿವಿಧ ಪ್ರಕರಣಗಳು ದಾಖಲಾಗಿವೆ. ಅಶಾಂತಿ ಸೃಷ್ಟಿ ಮಾಡುವುದು ಹಾಗೂ ಹಿಂಸೆ ಮಾಡುವ ಸಂದೇಶ ಹಾಕಿರುವ ಕಾರಣ ಕೇಸ್​ಗಳು ದಾಖಲಾಗಿವೆ ಎಂದು ನಕಲಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!

ಬಳಿಕ ಒನ್ ಸೈಡ್ ವಿಡಿಯೋ ಕಾಲ್ ಮಾಡಿ ಸಹಾಯಕ ಅಧಿಕಾರಿ ಜೊತೆಗೆ ಮಾತನಾಡು ಎಂದು ಹೇಳಿದ್ದಾನೆ. ಸಹಾಯಕ ಅಧಿಕಾರಿ ಸಂತೋಷ ಚೌಧರಿ ಆಧಾರ್ ಕಾರ್ಡ್, ಓಟಿಪಿ ನಂಬರ್ ಕೇಳಿದ್ದಾನೆ. ಈ ಕುರಿತು ಸಂಶಯ ಬಂದ ಹಿನ್ನಲೆ ಸಂತೋಷ ಅದನ್ನು ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಸಿಇಎನ್ ಠಾಣೆಗೆ ಆಗಮಿಸಿ ವಿಡಿಯೋ ಕಾಲ್ ಸ್ಕ್ರೀನ್ ರೆಕಾರ್ಡ್ ವಿಜಯಪುರ ಸಿಇಎನ್ ಪೊಲೀಸರಿಗೆ ನೀಡಿ ದೂರು ದಾಖಲು ಮಾಡಿದ್ದಾರೆ. ಸದ್ಯ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Mon, 16 September 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?