AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ: 7 ಮಂದಿಯ ವಿಚಾರಣೆ ನಡೆಸಿದ ಪೊಲೀಸರು

ಮಂಗಳವಾರ (ಫೆ.27) ರಂದು ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಬೆಂಬಲಿಗರು ನಾಸಿರ್ ಹುಸೇನ್ ಪರ ಘೋಷಣೆ ಕೂಗಿದ್ದರು. ಇದರ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ: 7 ಮಂದಿಯ ವಿಚಾರಣೆ ನಡೆಸಿದ ಪೊಲೀಸರು
ವಿಧಾನಸೌಧ ಪೊಲೀಸ್​ ಠಾಣೆ
Jagadisha B
| Edited By: |

Updated on: Mar 01, 2024 | 8:48 AM

Share

ಬೆಂಗಳೂರು, ಮಾ.01: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ (Vidhana Soudha Pro Pakistan Slogan) ಕೂಗಿದ ಪ್ರಕರಣಕ್ಕೆ ಸಂಬಂಧಸಿದಂತೆ ವಿಧಾನಸೌಧ ಪೊಲೀಸರು (Vidhana Soudha Police) ಇಲ್ಲಿಯವರೆಗು ಏಳು ಜನರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಏಳು ಜನ ತಾವು ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದಾರೆ. ಈ ಏಳು ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ​ಪೊಲೀಸರು ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ಗೆ ರವಾನೆ ಮಾಡಿದ್ದಾರೆ. ಇನ್ನು ಧ್ವನಿ ಮಾದರಿ ಜೊತೆಗೆ ವಿಡಿಯೋ ತುಣಕನ್ನು ಕಳುಹಿಸಿದ್ದಾರೆ. ಪೊಲೀಸರು ಎಲ್ಲ ಮಾಧ್ಯಮಗಳಿಂದ ವಿಡಿಯೋ ತುಣಕುಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಡಿಯೋಗಳಲ್ಲಿ ಕೇವಲ ಒಂದು ವಿಡಿಯೋ ತುಣುಕನ್ನು ಮಾತ್ರ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದೆ.

ಇನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ಮೇಲೆ ವಿಧಾನಸೌಧ ಪೊಲೀಸರು 26 ಜನರ ಪಟ್ಟಿ ತಯಾರಿಸಿದ್ದು, ಇನ್ನೂ 19 ಜನರ ವಿಚಾರಣೆ ಬಾಕಿ ಇದೆ.

ಇದನ್ನೂ ಓದಿ: ಪಾಕ್​ ಪರ ಘೋಷಣೆ: ವಿಧಿವಿಜ್ಞಾನದಲ್ಲಿ ವಿಡಿಯೋ ತನಿಖೆ ಹೇಗೆ ನಡೆಯುತ್ತದೆ ಗೊತ್ತಾ? ಸೈಬರ್ ಮಾಹಿತಿ ಇಲ್ಲಿದೆ

ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ವಿಜಯೋತ್ಸವದ ವೇಳೆ ಪಕ್ಕದಲ್ಲಿ ಇದ್ದ ಬೆಂಬಲಿಗ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಹೀಗಾಗಿ ಬುಧವಾರ ಬ್ಯಾಡಗಿಗೆ ತೆರಳಿದ್ದ ಪೊಲೀಸರ ತಂಡ, ಮೊಹಮ್ಮೆದ್ ಶಫಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈತನ ಧ್ವನಿ ಮಾದರಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಏನಿದು ಪ್ರಕರಣ

ಮಂಗಳವಾರ (ಫೆ.27) ರಂದು ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಬೆಂಬಲಿಗರು ನಾಸಿರ್ ಹುಸೇನ್ ಪರ ಘೋಷಣೆ ಕೂಗಿದ್ದರು. ಇದರ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ