AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ವರ್ಷಗಳಿಂದ ಒಂದೆಕಡೇ ಸೇವೆ ಸಲ್ಲಿಸುತ್ತಿದ್ದ ವಿಧಾನ ಪರಿಷತ್​ನ 30 ಅಧಿಕಾರಿಗಳ ವರ್ಗಾವಣೆ

ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯ ಪ್ರಾಮುಖ್ಯತೆ ಹಾಗೂ ಅದರ ಘನತೆ ಹೆಚ್ಚಿಸಲು ಅಗತ್ಯ ಸುಧಾರಣೆಗಳನ್ನು ಕೈಗೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ವಿನೂತನ ಪ್ರಯತ್ನವನ್ನು ಸದಾ ಮುನ್ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಒಂದೆಕಡೇ ಸೇವೆ ಸಲ್ಲಿಸುತ್ತಿದ್ದ ವಿಧಾನ ಪರಿಷತ್​ನ 30 ಅಧಿಕಾರಿಗಳ ವರ್ಗಾವಣೆ
ಬಸವರಾಜ ಹೊರಟ್ಟಿ
TV9 Web
| Edited By: |

Updated on:Aug 20, 2021 | 6:21 PM

Share

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್​ನ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಯತ್ನಕ್ಕೆ ಅವರು ಕೈಹಾಕಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ತಮ್ಮದೇ ಹಿಡಿತ ಹಾಗೂ ಪ್ರಭುತ್ವ ಸಾಧಿಸಿದ್ದ ಹಲವರನ್ನು ಬೇರೆಡೆಗೆ ವರ್ಗಾಯಿಸಿ ವಿಧಾನ ಪರಿಷತ್ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ದಕ್ಷತೆ ಮೂಡಿಸುವಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ನಡೆಸುತ್ತಿರುವ ಭಾಗವೆಂಬ ಮಾತುಗಳು ಕೇಳಿಬಂದಿವೆ. ಈ ಕುರಿತು ನಿನ್ನೆಯಷ್ಟೇ ಅಧಿಸೂಚನೆ ಹೊರಡಿಸಿದ್ದು ಉಪಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಶಾಖಾಧಿಕಾರಿಗಳು, ಹಿರಿಯ ಸಹಾಯಕರು, ಸಹಾಯಕರು ಮತ್ತು ಕಿರಿಯ ಸಹಾಯಕರನ್ನೊಳಗೊಂಡ 30 ಜನರನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ. ಸಿಬ್ಬಂದಿಯ ವರ್ಗಾವಣೆ ಕುರಿತು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅಧಿಕೃತ ಆದೇಶ ಪ್ರಕಟಿಸಿದ್ದಾರೆ

ಪರಿಷತ್ ಸಚಿವಾಲಯದ ಕಾರ್ಯ ನಿರ್ವಹಣೆಯಲ್ಲಿ ವ್ಯಾಪಕ ಬದಲಾವಣೆ ಅವಶ್ಯಕತೆ ಇದೆ ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತಾದರೂ ಈ ಕುರಿತು ಯಾರೂ ಸಹ ಈ ಪ್ರಮಾಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಹಲವಾರು ಪ್ರಭಾವಿಗಳ ಕೃಪಾಶೀರ್ವಾದ, ಒತ್ತಡ ಮೊದಲಾದ ಕಾರಣಗಳಿಂದ ಹಲವು ಸಿಬ್ಬಂದಿ ಸಚಿವಾಲಯದ ಆಯಕಟ್ಟಿನ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅಂತಹ ಕೆಲ ಸಿಬ್ಬಂದಿಗಳ ಬಗ್ಗೆ ಹಲವು ದೂರುಗಳು ಕೇಳಿ ಬಂದಿದ್ದವು. ಇವೆಲ್ಲವುಗಳನ್ನು ಪರಿಗಣಿಸಿ ಸಭಾಪತಿ ಬಸವರಾಜ ಹೊರಟ್ಟಿ ಮಿಂಚಿನ ಕಾರ್ಯಾಚರಣೆ ನಡೆಸಿ ದಿಢೀರನೆ 30 ಜನ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದಾರೆ.

ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯ ಪ್ರಾಮುಖ್ಯತೆ ಹಾಗೂ ಅದರ ಘನತೆ ಹೆಚ್ಚಿಸಲು ಅಗತ್ಯ ಸುಧಾರಣೆಗಳನ್ನು ಕೈಗೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ವಿನೂತನ ಪ್ರಯತ್ನವನ್ನು ಸದಾ ಮುನ್ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಉತ್ತರ ಕರ್ನಾಟಕ ಸ್ಪೆಷಲ್ ಎಣ್ಣೆ ಬದನೆಕಾಯಿ; ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ

(Vidhana Parishad Chairman Basavaraj Horatti orders Transfer of more than 30 officers which has been serving as one for many years)

Published On - 6:09 pm, Fri, 20 August 21