ಸ್ಮಾರಕವಾಗಿರುವ ವಿಧಾನ ಸೌಧವನ್ನು ಸರ್ಕಾರ ಡಬ್ಬ ಅಂಗಡಿಯೆಂದು ಪರಿಗಣಿಸಿದೆ: ನಾರಾಯಣಸ್ವಾಮಿ ಚಲವಾದಿ
ಆಗಿರುವ ಪ್ರಮಾದವನ್ನು ಕೆಲ ಸಚಿವರು ಅಂಗೀಕರಿಸಿದ್ದಾರೆ, ಆದರೆ ಮುಖ್ಯಮಂತ್ರಿ ತಪ್ಪೊಪ್ಪಿಕೊಂಡಿದ್ದಾರಾ? ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿರುತ್ತದೆ, ವಿಧಾನಸೌಧವನ್ನು ಒಂದು ಡಬ್ಬದಂತೆ ಪರಿಗಣಿಸಿ ಅದನ್ನು ಅಪಹಾಸ್ಯ ಮಾಡಿದ್ದಾರೆ, ಆಗಿರುವ ಎಲ್ಲ ತಪ್ಪುಗಳನ್ನು ಒಪ್ಪಿಕೊಂಡು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ಸಲ್ಲಿಸಬೇಕೆಂದು ಅಂತ ಆಗ್ರಹಿಸುತ್ತೇನೆ ಎಂದು ಚಲವಾದಿ ಹೇಳಿದರು.
ಬೆಂಗಳೂರು, ಜೂನ್ 5: ಬಿಜೆಪಿ ನಾಯಕರ ಗುಂಪೊಂದು ಇಂದು ವಿಧಾನ ಸೌಧ ಆವರಣಕ್ಕೆ ಭೇಟಿ ನೀಡಿ ನಿನ್ನೆಯ ಕಾರ್ಯಕ್ರಮದ ನಿಮಿತ್ತ ಏನೆಲ್ಲ ಹಾಳಾಗಿವೆ ಅನ್ನೋದರ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಧಾನ ಪರಿಷತ್ನಲ್ಲಿ ವಿಪಕ್ಷ ನಾಯಕ ನಾರಾಯಣಸ್ವಾಮಿ ಚಲವಾದಿ, ಒಂದು ಸ್ಮಾರಕವಾಗಿರುವ ವಿಧಾನ ಸೌಧ ಅವರಣದಲ್ಲಿರುವ ಪ್ರತಿಮೆಗಳು, ಗಿಡ ಮರಗಳು, ಗೇಟ್ಗಳನ್ನು ರಕ್ಷಣೆ ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ, ಹೈಕೋರ್ಟ್ ಮೇಲೂ ಜನ ಹತ್ತಿ ನಿಂತಿದ್ದರು, ಒಂದು ಕಾರ್ಯಕ್ರಮ ನಡೆಸಬೇಕಾದರೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಅರಿವಿಲ್ಲವೇ? ಸನ್ಮಾನ ಸಮಾರಂಭ ನಡೆಸುವ ಆತುರವೇನಿತ್ತು ಎಂದು ಚಲವಾದಿ ಪ್ರಶ್ನಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರಕ್ಕಾಗಿ ಬಣ ಬಡಿದಾಟ ನಡೆದರೆ ನಮ್ಮಲ್ಲಿ ಪಕ್ಷದ ಸಂಘಟನೆಗಾಗಿ: ನಾರಾಯಣಸ್ವಾಮಿ ಚಲವಾದಿ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ

