AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ

ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗೆ ಸೇರುವ ತಾಲ್ಲೂಕುಗಳು
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 08, 2021 | 6:30 PM

Share

ಬೆಂಗಳೂರು: ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು ಆರು ತಾಲ್ಲೂಕುಗಳು ಇರಲಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಘೋಷಿಸಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ಭಾಗವಾಗಲಿವೆ.

ಇಷ್ಟು ದಿನ ಈ ತಾಲ್ಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳು ಮಾತ್ರ ಉಳಿಯುತ್ತವೆ.

ಹೆಲಿಕಾಪ್ಟರ್​ನಲ್ಲಿ ಹೊಸಪೇಟೆಗೆ ಆನಂದ್​ಸಿಂಗ್ ನೂತನ ಜಿಲ್ಲೆಯ ಅಧಿಸೂಚನೆ ಹೊರಬಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊಸಪೇಟೆಗೆ ಸಚಿವ ಆನಂದ್​ಸಿಂಗ್ ಹೆಲಿಕಾಪ್ಟರ್​ನಲ್ಲಿ ಹೊರಟರು. ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸಿ, ರಾಜ್ಯ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಲಿದ್ದಾರೆ.

ಆನಂದ್​ಸಿಂಗ್ ಅವಿರತ ಹೋರಾಟ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ಕೇಂದ್ರವಾಗಿಸಿ ನೂತನ ವಿಜಯನಗರ ಜಿಲ್ಲೆ ರಚಿಸಬೇಕು ಎನ್ನುವುದು ಕಾಂಗ್ರೆಸ್​ನಿಂದ ಬಿಜೆಪಿಗೆ ಆನಂದ್​ಸಿಂಗ್ ಪಕ್ಷಾಂತರ ಮಾಡಲು ಇಟ್ಟಿದ್ದ ಮುಖ್ಯ ಷರತ್ತಾಗಿತ್ತು. ನೂತನ ವಿಜಯನಗರ ಜಿಲ್ಲೆಯ ರಚನೆಗೆ ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ ಮತ್ತು ಕೆ.ಸಿ.ಕೊಂಡಯ್ಯ ಅವರ ತೀವ್ರ ವಿರೋಧ ಇತ್ತು. ಇದೀಗ ಹೊಸ ಜಿಲ್ಲೆಯ ರಚನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಆನಂದ್​ಸಿಂಗ್​ಗೆ ಜಿಲ್ಲೆಯಲ್ಲಿ ಹಿಡಿತ ಹೆಚ್ಚಾಗುವಂತೆ ಮಾಡಿದೆ. ಜನರು ಆನಂದ್​ ಸಿಂಗ್​ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

Karnataka-Gazate

ಕರ್ನಾಟಕ ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆ

ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ PIL ವಜಾ

Published On - 4:28 pm, Mon, 8 February 21

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು