AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ

ಹೊಸಪೇಟೆಯಲ್ಲಿ ನಡೆದ ಕೆಡಿಪಿ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತವಾಗಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಾರಿ ಶೇ 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ. ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.

SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ
SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ
ವಿನಾಯಕ ಬಡಿಗೇರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 21, 2024 | 7:00 PM

Share

ವಿಜಯನಗರ, ಜೂನ್ 21: ಎಸ್​​ಎಸ್​ಎಲ್​ಸಿ (SSLC) ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತವಾಗಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಹೊಸಪೇಟೆಯಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ 10ನೇ ಸ್ಥಾನದಲ್ಲಿದ್ದ 27ಕ್ಕೆ ಕುಸಿದಿದೆ. ಜಿಲ್ಲೆಯ ಶೇಕಡಾವಾರು ಪ್ರಮಾಣ ಕುಸಿತವಾಗಿದೆ. ಇದಕ್ಕೆ ಸಿಇಒ ಹೊಣೆ ಆಗಿದ್ದರಿಂದ ನೋಟಿಸ್ ಜಾರಿ ಮಾಡಿ ಅಮಾನತು ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಬಾರಿ ಶೇ 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ ಎಂದರೆ ನಿಮ್ಮ ಸಾಧನೆ ಏನು? ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಸಿಎಂ ಪ್ರಶ್ನಿಸಿದ್ದಾರೆ. ಇನ್ನು ಮುಂದಿನ ವರ್ಷ ಕೃಪಾಂಕ ಕೊಡಬಾರದು ಎಂದು ಹೇಳಿದ್ದೇನೆ ಎಂದರು.

2 ಜಿಲ್ಲೆಗಳ ಡಿಎಂಎಫ್​ ಫಂಡ್ ಸ್ವಲ್ಪ ಗೊಂದಲವಿದೆ

ಬಳ್ಳಾರಿ, ವಿಜಯನಗರ ಜಿಲ್ಲೆಯ ಫಂಡ್​ ಬಗ್ಗೆ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2 ಜಿಲ್ಲೆಗಳ ಡಿಎಂಎಫ್​ ಫಂಡ್ ಸ್ವಲ್ಪ ಗೊಂದಲವಿದೆ. ವಿಜಯನಗರದವರು ಶೇ.28ರಷ್ಟು ಬರಬೇಕು ಅಂತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯವರು ಇದನ್ನು ಒಪ್ಪುತ್ತಿಲ್ಲ. ಅದನ್ನು ಸರಿಯಾಗಿ ಪರಿಶೀಲನೆ ಮಾಡಲು ಹೇಳಿದ್ದೇನೆ. ಎಲ್ಲರೂ ಕುಳಿತು ಸರಿಯಾಗಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: SSLC ಫಲಿತಾಂಶ ಪ್ರಕಟ: ಮತ್ತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಕೆರೆಗಳ ಹುಳೆತ್ತುವ ಕಾರ್ಯ ಮಾಡಬೇಕು. ಮಳೆ ನೀರು ಸರಾಗವಾಗಿ ಕೆರೆಗಳಿಗೆ ಹೋಗುವಂತೆ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆರೆ ಒತ್ತುವರಿಯಾಗಿದ್ದರೆ ತೆರವುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಕೆರೆಗಳು ಬಹಳ ಮುಖ್ಯ ಇದೆ ಅದನ್ನ ಸರಿಪಡಿಸಬೇಕು ಎಂದರು.

ಇದನ್ನೂ ಓದಿ: SSLC ಮೌಲ್ಯಮಾಪನ ಎಡವಟ್ಟು; ಮರು ಮೌಲ್ಯಮಾಪನ ವೇಳೆ ತಾಲೂಕಿಗೆ ಟಾಪರ್, ಇಷ್ಟಪಟ್ಟ ಕಾಲೇಜು ಸಿಗಲಿಲ್ಲವೆಂದು ವಿದ್ಯಾರ್ಥಿನಿ ಅಳಲು

ನವಲಿ ಸಮಾನಾಂತರ ಜಲಾಶಯ ನಿರ್ಮಾಣ ವಿಚಾರವಾಗಿ ಮಾತನಾಡಿದ್ದು, ಆಂಧ್ರಪ್ರದೇಶ, ತೆಲಂಗಾಣದವರ ಪಾಲು ಇದೆ. ಹೀಗಾಗಿ ಅವರ ಜೊತೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!