AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನಲೆ 11 ಜನ ಸದಸ್ಯರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ
ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Aug 08, 2023 | 3:20 PM

Share

ವಿಜಯನಗರ, ಆ.8: ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಆಗಸ್ಟ್​ 2ರಂದು ನಡೆಯಬೇಕಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ‌ಯನ್ನ, ನಿನ್ನೆ ನಡೆಸಲು ಮುಂದಾಗಿದ್ದರು. ಅದರಂತೆ ನಿನ್ನೆಯೂ ಸದಸ್ಯರು ಸಕಾಲಕ್ಕೆ ಹಾಜರಾದರೂ, ಆದರೂ ಕೂಡ ಸಿಬ್ಬಂದಿಗಳು ಚುನಾವಣೆ ನಡೆಸಲಿಲ್ಲ. ಈ ಹಿನ್ನಲೆ ಆಕ್ರೋಶಗೊಂಡ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಉದ್ದೇಶಪೂರ್ವಕವಾಗಿ ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಸತ್ಯಾಗ್ರಹ ನಡೆಸಿದ್ದಾರೆ. ಪರಿಣಾಮ ತೊಗರಿಕಟ್ಟೆ ಗ್ರಾಮ ಪಂಚಾಯಿತಿ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತಿಯಲ್ಲಿ ಜುಲೈ 23 ರಂದು ಗ್ರಾ‌ಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಸೋತ ಹಿನ್ನಲೆ ಸದಸ್ಯೆಯೊಬ್ಬರು ಮತ್ತೋರ್ವ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಚಪ್ಪಲಿಯಿಂದ ಹೊಡೆದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಶರ್ಟ್ ಹರಿದ ಘಟನೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸೋತ ಹತಾಶೆಯಲ್ಲಿ ಸದಸ್ಯೆ ಸುಧಾ ಜಿ.ಎನ್. ಎಂಬುವವರು ‘ನನಗೆ ಮತ ಹಾಕಿಲ್ಲ, ಹಾಗಾಗಿ ನಾನು ಸೋತಿದ್ದೇನೆಂದು ಗ್ರಾಮ ಪಂಚಾಯತಿ ಕಚೇರಿ ಒಳಗೆ ನುಗ್ಗಿ ಹಲ್ಲೆ ಮಾಡಿದ್ದರು. ಬಳಿಕ ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಮಣಿ ಎಂಬುವವರು ಅಧ್ಯಕ್ಷೆಯಾಗಿ ಗೆಲುವು ಕಂಡಿದ್ದರು. ಹಲ್ಲೆ ಮಾಡಿದ ನಂತರ ಸುಧಾ‌ ತಲೆ ಮರೆಸಿಕೊಂಡಿದ್ದರು. ಆ ಕುರಿತು ಸುಧಾ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ಸಿನಿಮೀಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿ ಸದಸ್ಯರನ್ನು ಕಿಡ್ನ್ಯಾಪ್​​ ಮಾಡಿದ ಆರೋಪ

ಜುಲೈ 19 ರಂದು ಇದೇ ರೀತಿ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳೆ ಗ್ರಾ.ಪಂಚಾಯತಿ ಸದಸ್ಯ ಡಿ.ಎಲ್.ಮಲ್ಲಯ್ಯ ಮೇಲೆ ಕೊರಟಗೆರೆ ಪಿಡಬ್ಯುಡಿ ಪ್ರಥಮ ದರ್ಜೆ ಸಹಾಯಕನಾಗಿರುವ ಚಿಕ್ಕಣ್ಣ ಹಲ್ಲೆ ನಡೆಸಿದ್ದರು. ‘ನನ್ನ ಮತ ನನ್ನ ಹಕ್ಕು ಎಂದು ಹೇಳಿದ ವ್ಯಕ್ತಿಗೆ, ಸರ್ಕಾರಿ ಅಧಿಕಾರಿ ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:19 pm, Tue, 8 August 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ