AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನಲೆ 11 ಜನ ಸದಸ್ಯರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ
ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Aug 08, 2023 | 3:20 PM

Share

ವಿಜಯನಗರ, ಆ.8: ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಆಗಸ್ಟ್​ 2ರಂದು ನಡೆಯಬೇಕಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ‌ಯನ್ನ, ನಿನ್ನೆ ನಡೆಸಲು ಮುಂದಾಗಿದ್ದರು. ಅದರಂತೆ ನಿನ್ನೆಯೂ ಸದಸ್ಯರು ಸಕಾಲಕ್ಕೆ ಹಾಜರಾದರೂ, ಆದರೂ ಕೂಡ ಸಿಬ್ಬಂದಿಗಳು ಚುನಾವಣೆ ನಡೆಸಲಿಲ್ಲ. ಈ ಹಿನ್ನಲೆ ಆಕ್ರೋಶಗೊಂಡ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಉದ್ದೇಶಪೂರ್ವಕವಾಗಿ ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಸತ್ಯಾಗ್ರಹ ನಡೆಸಿದ್ದಾರೆ. ಪರಿಣಾಮ ತೊಗರಿಕಟ್ಟೆ ಗ್ರಾಮ ಪಂಚಾಯಿತಿ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತಿಯಲ್ಲಿ ಜುಲೈ 23 ರಂದು ಗ್ರಾ‌ಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಸೋತ ಹಿನ್ನಲೆ ಸದಸ್ಯೆಯೊಬ್ಬರು ಮತ್ತೋರ್ವ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಚಪ್ಪಲಿಯಿಂದ ಹೊಡೆದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಶರ್ಟ್ ಹರಿದ ಘಟನೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸೋತ ಹತಾಶೆಯಲ್ಲಿ ಸದಸ್ಯೆ ಸುಧಾ ಜಿ.ಎನ್. ಎಂಬುವವರು ‘ನನಗೆ ಮತ ಹಾಕಿಲ್ಲ, ಹಾಗಾಗಿ ನಾನು ಸೋತಿದ್ದೇನೆಂದು ಗ್ರಾಮ ಪಂಚಾಯತಿ ಕಚೇರಿ ಒಳಗೆ ನುಗ್ಗಿ ಹಲ್ಲೆ ಮಾಡಿದ್ದರು. ಬಳಿಕ ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಮಣಿ ಎಂಬುವವರು ಅಧ್ಯಕ್ಷೆಯಾಗಿ ಗೆಲುವು ಕಂಡಿದ್ದರು. ಹಲ್ಲೆ ಮಾಡಿದ ನಂತರ ಸುಧಾ‌ ತಲೆ ಮರೆಸಿಕೊಂಡಿದ್ದರು. ಆ ಕುರಿತು ಸುಧಾ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ಸಿನಿಮೀಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿ ಸದಸ್ಯರನ್ನು ಕಿಡ್ನ್ಯಾಪ್​​ ಮಾಡಿದ ಆರೋಪ

ಜುಲೈ 19 ರಂದು ಇದೇ ರೀತಿ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳೆ ಗ್ರಾ.ಪಂಚಾಯತಿ ಸದಸ್ಯ ಡಿ.ಎಲ್.ಮಲ್ಲಯ್ಯ ಮೇಲೆ ಕೊರಟಗೆರೆ ಪಿಡಬ್ಯುಡಿ ಪ್ರಥಮ ದರ್ಜೆ ಸಹಾಯಕನಾಗಿರುವ ಚಿಕ್ಕಣ್ಣ ಹಲ್ಲೆ ನಡೆಸಿದ್ದರು. ‘ನನ್ನ ಮತ ನನ್ನ ಹಕ್ಕು ಎಂದು ಹೇಳಿದ ವ್ಯಕ್ತಿಗೆ, ಸರ್ಕಾರಿ ಅಧಿಕಾರಿ ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:19 pm, Tue, 8 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!