AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೊರಗಿನವರ ಜೊತೆ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು; ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡಕ್ಕೆ ‌ಸಾರ್ವಭೌಮತ್ವ ಇರಬೇಕು. ನಾವು ಬೇರೆಯವರ ಜೊತೆ ಕನ್ನಡ ಬಿಟ್ಟು, ಬೇರೆ ಭಾಷೆ ಮಾತನಡಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಮೂಲಕ ಕರ್ನಾಟಕದಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು. ಬೇರೆ ಭಾಷೆ ಕಲಿರಿ. ಆದ್ರೆ, ಕನ್ನಡದಲ್ಲಿಯೇ ಮಾತನಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಹೊರಗಿನವರ ಜೊತೆ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 02, 2023 | 9:28 PM

Share

ವಿಜಯನಗರ, ನ.02: ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮವನ್ನು ಇಂದು(ನ.02) ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಜ್ಯೋತಿ ರಥಯಾತ್ರೆ(Jyoti RathaYatra)ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ‘ಕರ್ನಾಟಕ ನಾಮಕರಣವಾಗಿ 50 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. 1973 ನವೆಂಬರ್ 2 ರಂದು ಜ್ಯೋತಿ ರಥಯಾತ್ರೆಗೆ ಮೈಸೂರು ಜಿಲ್ಲೆಯವರಾದ ದೇವರಾಜ್ ಅರಸು ಅವರು ಇಲ್ಲಿಂದಲೇ ಚಾಲನೆ ನೀಡಿದ್ದರು. ಇದೀಗ ನಾನು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ್ದೇನೆ ಎಂದರು.

‘ಕನ್ನಡ ಆಡಳಿತ ಭಾಷೆಯಾಗಿ, ಕನ್ನಡದಲ್ಲಿಯೇ ಆಡಳಿತ ನಡೆಯಬೇಕು ಎಂದು ಪ್ರತಿಪಾದಿಸಿದ್ದೆ. ಅಂದು ಇಂಗ್ಲಿಷ್ ‌ಟೈಪ್ ರೈಟರ್ ತಗೆದು, ಕನ್ನಡ ಟೈಪರೇಟರ್ ಕೊಡಿಸುವ ಕೆಲಸ ಮಾಡಿದ್ದೆ. ನಮ್ಮ ನೆಲ, ಜಲ, ಭಾಷೆ,‌ ಸಂಸ್ಕ್ರತಿಯನ್ನು ನಾವೆಲ್ಲರೂ ಗೌರವಿಸಬೇಕು. ಕರ್ನಾಟಕವನ್ನು ಸಂಪದ್ಭರಿತ ರಾಜ್ಯ ಮಾಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ನಾವು ದೇವರಲ್ಲಿ,‌ ಜನರಲ್ಲಿ‌ ನಂಬಿಕೆ ಇಟ್ಟುಕೊಂಡಿದ್ದೇವೆ, ಮೂಡನಂಬಿಕೆಯಲ್ಲಿ ಅಲ್ಲ ಎಂದರು.

ಇದನ್ನೂ ಓದಿ:ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿಡಿಯೋ

ಇನ್ನು ಇದೇ ವೇಳೆ ‘ಸಮ‌ ಸಮಾಜ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ನೀಡಿದ ಭರವಸೆಯನ್ನು ಈಡಿರಿಸಿದ್ದೇವೆ. ಕರ್ನಾಟಕದಲ್ಲಿ ಕನ್ನಡಕ್ಕೆ ‌ಸಾರ್ವಭೌಮತ್ವ ಇರಬೇಕು. ನಾವು ಬೇರೆಯವರ ಜೊತೆ ಕನ್ನಡ ಬಿಟ್ಟು, ಬೇರೆ ಭಾಷೆ ಮಾತನಡಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಮೂಲಕ ಕರ್ನಾಟಕದಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು. ಬೇರೆ ಭಾಷೆ ಕಲಿರಿ. ಆದ್ರೆ, ಕನ್ನಡದಲ್ಲಿಯೇ ಮಾತನಾಡಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​