AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಬಿಟ್ಟು, ದೇಶದ ಜೊತೆ ನಿಲ್ಲುವುದನ್ನ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪಾಕಿಸ್ತಾನವನ್ನು, ಕಪ್ಪು ಪಟ್ಟಿಗೆ ಹಾಕಬೇಕು ಅನ್ನೋದು ಭಾರತದ ನಿಲುವಾಗಿದೆ. ಆದರೆ ಭಾರತದ ಹಿತಾಸಕ್ತಿಯ ವಿರುದ್ಧ ರಾಹುಲ್ ಗಾಂಧಿಯವರು ಕೇಂಬ್ರಿಡ್ಜ್ ವಿವಿಯಲ್ಲಿ ಮಾತನಾಡಿದ್ದರು. ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್ ಈ ಮಟ್ಟದ ತುಷ್ಟಿಕರಣದ ರಾಜಕಾರಣ ಮಾಡಬಾರದು.

ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಬಿಟ್ಟು, ದೇಶದ ಜೊತೆ ನಿಲ್ಲುವುದನ್ನ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on:Mar 06, 2023 | 9:25 PM

Share

ವಿಜಯನಗರ: ಕುಕ್ಕರ್ ಬಾಂಬ್ ಸ್ಪೋಟದ ವಿಚಾರವಾಗಿ ಐಸಿಸ್ ಸ್ಟೇಟ್ ಮೆಂಟ್ ಕುರಿತಂತೆ ಈಗ ಕಾಂಗ್ರೆಸ್ ನಿಲುವು ಏನು..? ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ವಿಜಯನಗರದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಐಸಿಸ್ ಸಂಘಟನೆಯವರು (ISIS) ನಾವು ಮಾಡಿದ್ದೇವೆ ಅಂತ ಹೇಳಿದ್ದಾರೆ. ಆದ್ರೆ ರಾಹುಲ್ ಗಾಂಧಿ ಅವರು ಇದೊಂದು ಕಾರ್ ಸ್ಫೋಟ ಅಂತಾ ಹೇಳಿದ್ರು. ಈಗ ಐಸಿಸ್ ನವರೇ ಒಪ್ಪಿಕೊಂಡಿರುವಾಗ ಕಾಂಗ್ರೆಸ್ (Congress) ಎಷ್ಟರ ಮಟ್ಟಿಗೆ ತುಷ್ಠಿಕರಣ ರಾಜಕೀಯದಲ್ಲಿ (appeasement) ಮುಳುಗಿದೆ ಅನ್ನೋದು ಸ್ಪಷ್ಟವಾಗಿದೆ ಎಂದರು.

ಕುಕ್ಕರ್ ಬಾಂಬ್ ಸ್ಪೋಟವನ್ನ ಡಿ.ಕೆ.ಶಿವಕುಮಾರ್, ಅದೊಂದು ಆಕ್ಸಿಡೆಂಟ್ ಅಷ್ಟೇ ಎಂದಿದ್ರು. ಬಿಜೆಪಿಯವರು ಅಟೆನ್ಸನ್ ಡೈವರ್ಟ್ ಮಾಡ್ತಿದ್ದಾರೆ ಅಂತಾ ಆರೋಪಿಸಿದ್ರು. ಈಗ ಡಿ.ಕೆ ಶಿವಕುಮಾರ್ ಅವರು ಉತ್ತರಿಸಬೇಕು. ಐಸಿಸ್ ನವರೇ ಒಪ್ಪಿಕೊಂಡಿರುವಾಗ, ಐಸಿಸ್, ತಾಲಿಬಾನ್ ನಂಥಹ ಭಯೋತ್ಪಾದಕರ ಪರ ನೀವಿದ್ದೀರಾ? ಅಥವಾ ದೇಶದ ಪರ ಇದ್ದೀರಾ.? ಎಂದು ಜೋಶಿ ಕೈ ನಾಯಕರ ಮೇಲೆ ವಾಗ್ದಾಳಿ ನಡೆಸಿ ತಕ್ಷಣ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ‌.

ಇನ್ನು ರಾಹುಲ್ ಗಾಂಧಿ ವಿರುದ್ಧವು ವಾಗ್ದಾಳಿ ನಡೆಸಿರುವ ಸಚಿವರು, ಕುಕ್ಕರ್ ಸ್ಪೋಟವನ್ನ ರಾಹುಲ್ ಗಾಂಧಿ ಅವರು ಕಾರ್ ಸ್ಫೋಟ ಅಂತ ಹೇಳಿದ್ರು. ಈ ಸ್ಪೋಟದ ಹಿಂದೆ ಭಯೋತ್ಪಾದಕರಿಗೆ ಪಾಕಿಸ್ತಾನದ ಕುಮ್ಮಕ್ಕಿರುವ ಬಗ್ಗೆ ಬಿಜೆಪಿ ಆರೋಪಿಸಿತ್ತು‌. ಪಾಕಿಸ್ತಾನವನ್ನು, ಕಪ್ಪು ಪಟ್ಟಿಗೆ ಹಾಕಬೇಕು ಅನ್ನೋದು ಭಾರತದ ನಿಲುವಾಗಿದೆ. ಆದರೆ ಭಾರತದ ಹಿತಾಸಕ್ತಿಯ ವಿರುದ್ಧ ರಾಹುಲ್ ಗಾಂಧಿಯವರು ಕೇಂಬ್ರಿಡ್ಜ್ ವಿವಿಯಲ್ಲಿ ಮಾತನಾಡಿದ್ದರು.

ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್ ಈ ಮಟ್ಟದ ತುಷ್ಟಿಕರಣದ ರಾಜಕಾರಣ ಮಾಡಬಾರದು. ಕಾಂಗ್ರೆಸ್ ನ ಇಂತಹ ನಿಲುವುಗಳಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಗೆ ಅಡ್ರಸ್ ಇಲ್ಲದಂತಾಗಿದೆ. ಕಾಂಗ್ರೆಸ್ ನಾಯಕರು ಕ್ಷಮೆ ಕೇಳಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶದ ಜೊತೆ ನಿಲ್ಲಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕೈ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 pm, Mon, 6 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ