G20 Summit: ಹಂಪಿಯಲ್ಲಿ ಜಿ20 ಶೃಂಗ ಸಭೆ ತಯಾರಿ, ಯುನೆಸ್ಕೋ ನಿಯಮಗಳನ್ನು ಗಾಳಿಗೆ ತೂರಿದ ಜಿಲ್ಲಾಡಳಿತ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದೆ. ಈ ಸಂಬಂಧ ವಿಜಯನಗರ ಜಿಲ್ಲಾಡಳಿತವತಿಯಿಂದ ಸಿದ್ಧತೆಗಳು ಬರದಿಂದ ಸಾಗಿವೆ. ಸಿದ್ಧತೆಯ ನಡುವೆ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಮಗಳನ್ನು ಜಿಲ್ಲಾಡಳಿತ ಗಾಳಿಗೆ ತೂರಿದೆ.

G20 Summit: ಹಂಪಿಯಲ್ಲಿ ಜಿ20 ಶೃಂಗ ಸಭೆ ತಯಾರಿ, ಯುನೆಸ್ಕೋ ನಿಯಮಗಳನ್ನು ಗಾಳಿಗೆ ತೂರಿದ ಜಿಲ್ಲಾಡಳಿತ
ವಿರೂಪಾಕ್ಷ ದೇವಸ್ಥಾನ ಬಳಿ ಕ್ರೇನ್​
Follow us
|

Updated on:Jun 21, 2023 | 3:22 PM

ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ (Hampi) ಜುಲೈ 13ರಿಂದ ಮೂರು ದಿನಗಳ ಕಾಲ ಜಿ20 ಶೃಂಗಸಭೆ (G20 Summit) ನಡೆಯಲಿದೆ. ಈ ಸಂಬಂಧ ವಿಜಯನಗರ (Vijayanagar) ಜಿಲ್ಲಾಡಳಿತವತಿಯಿಂದ ಸಿದ್ಧತೆಗಳು ಬರದಿಂದ ಸಾಗಿವೆ. ಸಿದ್ಧತೆಯ ನಡುವೆ ಯುನೆಸ್ಕೋ (UNESCO) ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ನಿಯಮಗಳನ್ನು ಜಿಲ್ಲಾಡಳಿತ ಗಾಳಿಗೆ ತೂರಿದೆ. ಹೌದು ಶೃಂಗಸಭೆಯ ಸಿದ್ಧತೆಗಾಗಿ, ಅಧಿಕಾರಿಗಳು ಭಾರಿ ವಾಹನಗಳನ್ನು ಪಾರಂಪರಿಕ ತಾಣದ ನಿರ್ಬಂಧಿತ ವಲಯಗಳಲ್ಲಿ ಸಂಚರಿಸಲು ಬಿಟ್ಟಿದ್ದಾರೆ. ಇದು ಸ್ಮಾರಕಗಳ ಸುರಕ್ಷತೆಗೆ ದೊಡ್ಡ ಅಪಾಯವಾಗಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಯುನೆಸ್ಕೊ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವಿಜಯ ವಿಠಲ ಮಂದಿರ ಮತ್ತು ವಿರೂಪಾಕ್ಷ ದೇವಸ್ಥಾನದ ಬಳಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿದೆ. ಆದರೂ ಕೂಡ, ಆಡಳಿತವು ಇತ್ತೀಚೆಗೆ ವಿರೂಪಾಕ್ಷ ದೇವಾಲಯದ ಗೋಪುರ ಸ್ವಚ್ಛಗೊಳಿಸಲು ಕ್ರೇನ್​​ ಬಳಸಿತ್ತು. ಅಲ್ಲದೆ, ವಿಜಯ ವಿಠಲ ದೇವಸ್ಥಾನದ ಬಳಿ ಟ್ರ್ಯಾಕ್ಟರ್ ಸಂಚಾರಕ್ಕೆ ಅನುಮತಿ ನೀಡಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಆದರೆ ಅಧಿಕಾರಿಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ. ಜಿ20 ಶೃಂಗಸಭೆ ತಯಾರಿಗಾಗಿ ನಮಗೆ ಕಡಿಮೆ ಸಮಯವಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಪ್ರಕಾರ, ಪಾರಂಪರಿಕ ತಾಣಗಳಲ್ಲಿ ಯಾವುದೇ ಉತ್ಖನನ ಅಥವಾ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದಿಲ್ಲ. ಸ್ಮಾರಕಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆಯಿಂದ ಕೆಲಸ ನಡೆಯುತ್ತಿದೆ. ಕಾಮಗಾರಿಗೆ ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿದೆ. ವಿರೂಪಾಕ್ಷ ದೇವಸ್ಥಾನದ ಗೋಪುರ ಸ್ವಚ್ಛಗೊಳಿಸಲು, ಬಂಡೆಗಳನ್ನು ಸ್ಥಳಾಂತರಿಸಲು ಕ್ರೇನ್ ಬಳಸುತ್ತಿದ್ದೇವೆ ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಸಾಮಾಜಿಕ ಕಾರ್ಯಕರ್ತ, ಹಂಪಿ ನಿವಾಸಿ ಪ್ರಭಾಕರ ಜೋಶಿ ಮಾತನಾಡಿ, ನಿರ್ಬಂಧಿತ ಹಾಗೂ ಕಂಪನ ರಹಿತ ವಲಯಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು ಎಂಬ ನಿಯಮ ಸ್ಪಷ್ಟವಾಗಿದೆ. ಆದರೆ, ಶೃಂಗಸಭೆಗೆ ಸಿದ್ಧತೆ ನಡೆಸಲು ಅಧಿಕಾರಿಗಳು ವಿರೂಪಾಕ್ಷ ದೇವಸ್ಥಾನದ ಬಳಿ ಕ್ರೇನ್ ಮತ್ತು ವಿಜಯ ವಿಠಲ ದೇವಸ್ಥಾನದ ಬಳಿ ಟ್ರ್ಯಾಕ್ಟರ್ ಸಂಚರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ವಿವಿಐಪಿಗಳ ಭೇಟಿಯ ಸಂದರ್ಭದಲ್ಲಿಯೂ ಸ್ಮಾರಕಗಳ ಬಳಿ ಬ್ಯಾಟರಿ ಚಾಲಿತ ಬಗ್ಗಿಗಳನ್ನು ಮಾತ್ರ ಅನುಮತಿಸಲಾಗಿದೆ. ಆದರೆ ಅಧಿಕಾರಿಗಳು ಸ್ವತಃ ನಿಯಮಗಳನ್ನು ಅನುಸರಿಸಿಲ್ಲ. ಕ್ರೇನ್‌ಗಳು ಮತ್ತು ಟ್ಯ್ರಾಕ್ಟರ್​​ಗಳ ಸಂಚಾರದಿಂದ ದುರ್ಬಲವಾದ ಸ್ಮಾರಕಗಳಿಗೆ ಹಾನಿಯಾಗಬಹುದು. ಶೃಂಗಸಭೆಯು ಇಲ್ಲಿ ನಡೆಯುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಆದರೆ ಯುನೆಸ್ಕೋದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕೂಡಲೇ ಅಧಿಕಾರಿಗಳು ಭಾರಿ ವಾಹನಗಳ ಪ್ರವೇಶವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Wed, 21 June 23

ತಾಜಾ ಸುದ್ದಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!