AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G-20 Summit: ಹಂಪಿಯಲ್ಲಿ ಜಿ-20 ಶೃಂಗಸಭೆ: ನಾಳೆಯಿಂದ ಶೆರ್ಪಾ ಸಭೆ ಆರಂಭ

ಅಮಿತಾಭ್ ಕಾಂತ್ ಅವರ ಅಧ್ಯಕ್ಷತೆಯಲ್ಲಿ ಜುಲೈ 13ರಿಂದ 16ರವರೆಗೆ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಮೂರು ದಿನಗಳ ಕಾಲ ಭಾರತದ ಜಿ-20ರ ಅಧ್ಯಕ್ಷತೆಯಲ್ಲಿ ಮೂರನೇ ಶೆರ್ಪಾಗಳ ಸಭೆ ನಡೆಯಲಿದೆ.

G-20 Summit: ಹಂಪಿಯಲ್ಲಿ ಜಿ-20 ಶೃಂಗಸಭೆ: ನಾಳೆಯಿಂದ ಶೆರ್ಪಾ ಸಭೆ ಆರಂಭ
ಜಿ-20 ಶೃಂಗಸಭೆ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 12, 2023 | 7:14 PM

ವಿಜಯನಗರ-ಹಂಪಿ: ಭಾರತದ ಜಿ-20 (G-20 Summit) ರ ಅಧ್ಯಕ್ಷತೆಯಲ್ಲಿ ಮೂರನೇ ಶೆರ್ಪಾಗಳ ಸಭೆಯು ಅಮಿತಾಭ್ ಕಾಂತ್ ಅವರ ಅಧ್ಯಕ್ಷತೆಯಲ್ಲಿ ಜುಲೈ 13ರಿಂದ 16ರವರೆಗೆ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ 3ನೇ ಶೆರ್ಪಾ ಸಭೆಯಲ್ಲಿ ಆಯಾ ಶೆರ್ಪಾಗಳು ಮತ್ತು ಜಿ-20ರ ಸದಸ್ಯರು, ಆಹ್ವಾನಿತ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ನಿಯೋಗಗಳ ಮುಖ್ಯಸ್ಥರ ನೇತೃತ್ವದಲ್ಲಿ 120ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಎಲ್ಲಾ ಪ್ರತಿನಿಧಿಗಳು ನಾಯಕರ ಘೋಷಣೆಯ ರಚನೆಯ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಈ ಘೋಷಣೆಗಳನ್ನು ಅಂತಿಮವಾಗಿ ನವದೆಹಲಿಯ ಶೃಂಗಸಭೆಯಲ್ಲಿ ಜಿ-20ರ ನಾಯಕರು ಅಂಗೀಕರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಂತರ್ಗತ, ಮಹತ್ವಾಕಾಂಕ್ಷೆಯ, ಕ್ರಿಯಾ ಆಧಾರಿತ ಮತ್ತು ನಿರ್ಣಾಯಕ ಕಾರ್ಯಸೂಚಿಯ ದೃಷ್ಟಿಕೋನದಿಂದ ಮಾರ್ಗದರ್ಶಿಸಲ್ಪಟ್ಟ ಶೆರ್ಪಾಗಳು ಭಾರತದ ಅಧ್ಯಕ್ಷತೆಯಲ್ಲಿ ಹಸಿರು ಅಭಿವೃದ್ಧಿ, ಹವಾಮಾನ, ಹಣಕಾಸು, ಮತ್ತು ಪರಿಸರಕ್ಕಾಗಿ ಜೀವನಶೈಲಿ (ಎಲ್.ಐ.ಎಫ್.ಇ); ವೇಗವರ್ಧಿತ, ಅಂತರ್ಗತ ಮತ್ತು ಸ್ಥಿತಿಸ್ಥಾಪಕ ಬೆಳವಣಿಗೆ; ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಯನ್ನು ತೀವ್ರಗೊಳಿಸುವುದು; ತಾಂತ್ರಿಕ ರೂಪಾಂತರ ಮತ್ತು ವಿದ್ಯುನ್ಮಾನ ತಂತ್ರಜ್ಞಾನ ಸಾರ್ವಜನಿಕ ಮೂಲಸೌಕರ್ಯ; 21ನೇ ಶತಮಾನದ ಬಹುಪಕ್ಷೀಯ ಸಂಸ್ಥೆಗಳು; ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯ ಆದ್ಯತೆಗಳನ್ನು ಪ್ರತಿಬಿಂಬಿಸುವ ಪಠ್ಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಸಂಸ್ಕೃತಿ, ಪರಂಪರೆ ಭೂತಕಾಲದ ಆಧಾರ ಸ್ತಂಭ ಮತ್ತು ಭವಿಷ್ಯಕ್ಕೆ ದಾರಿದೀಪ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಪ್ರತಿಕ್ರಿಯೆಯ ನಂತರ ಬಂದ ಈ ಆದ್ಯತೆಗಳು ಭಾರತದ ಅಧ್ಯಕ್ಷತೆಯ ಅವಧಿಯಲ್ಲಿ ವಿವಿಧ ಕಾರ್ಯ ಪ್ರವಾಹಗಳಲ್ಲಿನ ಚರ್ಚೆಗಳಿಗೆ ಮಾರ್ಗದರ್ಶನ ನೀಡಿವೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಹಂಪಿ ನಗರವು ತುಂಗಭದ್ರ ನದಿ ದಂಡೆಯಲ್ಲಿದ್ದು, ಇದು ವಿಜಯನಗರ ಸಾಮ್ರಾಜ್ಯದ ಕೊನೆಯ ರಾಜಧಾನಿಯಾಗಿತ್ತು. ಹಂಪಿಯು ಸಂಕೀರ್ಣ ವಿನ್ಯಾಸಗಳು ಮತ್ತು ಇತರ ಸ್ಮಾರಕಗಳೊಂದಿಗೆ ಭವ್ಯವಾದ ದ್ರಾವಿಡ ಶೈಲಿಯ ದೇವಾಲಯಗಳಿಗೆ ಹೆಸರುವಾಸಿಯಾಗಿದೆ. ಇದು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ಹಗಲಿನಲ್ಲಿ ತೀವ್ರವಾದ ಚರ್ಚೆಗಳಲ್ಲಿ ತೊಡಗಿರುವ ಪ್ರತಿನಿಧಿಗಳಿಗೆ, ಸಂಜೆಯಲ್ಲಿ ಹಂಪಿಯ ಭವ್ಯ ತಾಣವು ನೀಡುವ ಶ್ರೀಮಂತ ಪರಂಪರೆಯ ಸ್ಥಳೀಯ ಪಾಕವನ್ನು ಸವಿಯುತ್ತಾ, ಸ್ಥಳೀಯ ಸಾಂಸ್ಕೃತಿಕ ಪ್ರದರ್ಶನದ ಅನುಭವಗಳನ್ನು ಪಡೆಯುವ ಅವಕಾಶವಿದೆ.

4,100 ಹೆಕ್ಟೇರ್ ಪ್ರದೇಶದ ವ್ಯಾಪ್ತಿಯಲ್ಲಿ ತಮ್ಮ ರಾಜರ ಕಥೆಗಳನ್ನು ಹೇಳುವ ಕೋಟೆಗಳು ಮತ್ತು ಪವಿತ್ರ ಸಂಕೀರ್ಣಗಳು, ಹಾಡುವ ಕಂಬಗಳ ಸಭಾಂಗಣಗಳು, ಮಂಟಪಗಳು ಮತ್ತು ಸ್ಮಾರಕಗಳು, ನೀರಿನ ರಚನೆಗಳು ಮತ್ತು ನದಿತೀರಗಳು ಅಂದಿನ ಸುವರ್ಣ ಯುಗಕ್ಕೆ ಸಾಕ್ಷಿಯಾಗಿವೆ.

ಇದನ್ನೂ ಓದಿ: ಹಂಪಿಯಲ್ಲಿ ಜಿ-20 ಶೃಂಗಸಭೆ: ಹಿಂದಿನ ಎರಡು ಸಿಡಬ್ಲೂಜಿ ಸಭೆಗಳ ಶಿಫಾರಸುಗಳ ಮೇಲೆ ಸಹಮತ ಮೂಡಿಸಲು ಹೆಚ್ಚಿನ ಒತ್ತು

ಈ ಸಭೆಯ ಪ್ರತಿನಿಧಿಗಳು ಹಂಪಿಯ ಐತಿಹಾಸಿಕ ಸ್ಥಳಗಳು ಮತ್ತು ಸ್ಮಾರಕಗಳಾದ ವಿಜಯ ವಿಠ್ಠಲ ದೇವಸ್ಥಾನ, ಯಡೂರು ಬಸವಣ್ಣ ಕಾಂಪ್ಲೆಕ್ಸ್ ಮತ್ತು ವಿರೂಪಾಕ್ಷ ದೇವಾಲಯ, ರಾಯರ ಹಂಪಿ ವಸ್ತು ಸಂಗ್ರಹಾಲಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಸ್ಥಳೀಯ ಕುಶಲಕರ್ಮಿಗಳು ಕುಶಲತೆಯಿಂದ ರಚಿಸಿದ ಚೆನ್ನಪಟ್ಟಣದ ಆಟಿಕೆಗಳು, ಕಿನ್ಹಲ್ಲಾ, ಬಿದ್ರಿ, ಗಂಜಿಫಾ ಮುಂತಾದ ಕುಶಲಕಲಾ ವಸ್ತುಗಳ ಅನುಭವ ಪಡೆಯಲಿದ್ದಾರೆ.

16ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ರಾಜ ಕೃಷ್ಣದೇವರಾಯನು ನಿರ್ಮಿಸಿದ ಹಂಪಿಯ ವಿಜಯ ವಿಠ್ಠಲ ದೇವಾಲಯದ ಭವ್ಯವಾದ ಕಲ್ಲಿನ ರಥವು ಸಾಮ್ರಾಜ್ಯದ ಸೌಂದರ್ಯ ಮತ್ತು ಕಲಾತ್ಮಕ ಪರಿಪೂರ್ಣತೆಯನ್ನು ಪ್ರತಿನಿಧಿಸುತ್ತದೆ. ಅಪ್ರತಿಮ ಹಂಪಿಯ ಕಲ್ಲಿನ ರಥವು ಭಾರತದ ಐವತ್ತು ರೂಪಾಯಿಯ ನೋಟಿನಲ್ಲಿ ಮಾನ್ಯತೆಯನ್ನು ಪಡೆದಿದ್ದು, ಜಿ-20ರ 3ನೇ ಷರ್ಪಾ ಸಭೆಗೆ ಆಯ್ಕೆ ಮಾಡಿದ ತಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ