AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: ಇಂದಿನಿಂದ 8 ದಿನ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ

ಈ ಬಾರಿ ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 8 ದಿನಗಳಕಾಲ ನಡೆಯಲಿದೆ.

G20 Summit: ಇಂದಿನಿಂದ 8 ದಿನ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ
ಜಿ20 ಶೃಂಗಸಭೆ ಹಂಪಿ
TV9 Web
| Updated By: ವಿವೇಕ ಬಿರಾದಾರ|

Updated on: Jul 09, 2023 | 7:34 AM

Share

ಹೊಸಪೇಟೆ: ಈ ಬಾರಿ ಭಾರತ ಜಿ20 ಶೃಂಗಸಭೆಯ (G-20 Summit) ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ (Hampi) ಇಂದಿನಿಂದ 8 ದಿನ (ಜು.09 ರಿಂದ ಜು.16) ರವರೆಗೆ ನಡೆಯಲಿದೆ. ಈ ಮೂಲಕ ವಿಜಯನಗರ (Vijayanagar) ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೇಷ್ಟಿಯಿಂದ ಹಂಪಿಯಲ್ಲಿ ಜಿ.20 ಶೃಂಗಸಭೆ ಆಯೋಜಿಸಲಾಗಿದೆ.

ಇನ್ನು ಇಂದಿನಿಂದ ಜು.13ರವರೆಗೆ ಜಿ20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪಾರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟಗಳು ಸುದೀರ್ಘವಾಗಿ ಚರ್ಚೆ ನಡೆಸಲಿವೆ. ಈ ಸಭೆಯಲ್ಲಿ ದೇಶ-ವಿದೇಶದ 252 ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ಜಿ20 ಶೆರ್ಪಾ ಸಭೆ

ಜಿ20 ಶೆರ್ಪಾ ಸಭೆ ಜು.13ರಿಂದ 16ರವರೆಗೆ ನಡೆಯಲಿದೆ. ಜಿ20 ರಾಷ್ಟ್ರಗಳ ಪ್ರಧಾನಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಶೆರ್ಪಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಿ20 ರಾಷ್ಟ್ರಗಳ ಸಭೆಗಳಲ್ಲಿ ಇದೊಂದು ವಿಶೇಷ ಸಭೆಯಾಗಿದೆ. ಸಭೆಯಲ್ಲಿ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು, 4 ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಒಟ್ಟು 52 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಭಯ ಸಭೆಗಳಲ್ಲಿ 200ಕ್ಕೂ ಅಧಿಕ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಈಗಾಗಲೇ ರಾಜಸ್ಥಾನದ ಉದಯಪುರ, ಅಸ್ಸಾಮಿನ ಕುಮಾರ್ಗಮ್‌ನಲ್ಲಿ ಶೆರ್ಪಾ ಸಭೆಗಳು ನಡೆದಿವೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಹಿರಿಮೆ ಮತ್ತು ಉತ್ಪನ್ನಗಳನ್ನು ಉನ್ನತೀಕರಿಸಲು 3ನೇ ಶೆರ್ಪಾ ಸಭೆ ವಿಶ್ವವಿಖ್ಯಾತ ಪಾರಂಪರಿಕ ತಾಣ ಹಂಪಿಯಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!