AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಜಾಬ್ ನಮ್ಮ ಘನತೆ’ ಎಂಬ ಗೋಡೆ ಬರಹ ಕೇಸ್: ಇಬ್ಬರು ಯುವಕರ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Hijab Ban Row: ಹಿಜಾಬ್ ನಮ್ಮ ಘನತೆ' ಎಂಬ ಗೋಡೆ ಮೇಲೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಜನಗರ ಜಿಲ್ಲೆಯ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ

‘ಹಿಜಾಬ್ ನಮ್ಮ ಘನತೆ' ಎಂಬ ಗೋಡೆ ಬರಹ ಕೇಸ್: ಇಬ್ಬರು ಯುವಕರ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Aug 28, 2023 | 7:50 PM

Share

ಬೆಂಗಳೂರು, (ಆಗಸ್ಟ್ 28):ಹಿಜಾಬ್ ನಮ್ಮ ಘನತೆ’ (Hijab is our dignity)ಎಂಬ ಗೋಡೆ ಮೇಲೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court ) ರದ್ದುಗೊಳಿಸಿ ಆದೇಶ ಹೊರಡಿಸಿದೆ. ವಿಜಯನಗರ(Vijayanagara) ಜಿಲ್ಲೆ ಹೊಸಪೇಟೆ ಸರ್ಕಾರಿ ಶಾಲೆಯ ಗೋಡೆ‌ ಮೇಲೆ ಹಿಜಾಬ್ ನಮ್ಮ ಘನತೆ’ ಎಂಬ ಬರಹ ಬರೆಯಲಾಗಿತ್ತು. ಈ ಸಂಬಂಧ ಮುಜಮ್ಮಿಲ್, ಮೊಹಮ್ಮದ್ ಜಮಾಲ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾyಮೂರ್ತಿ ಎಂ ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಪಡಿಸಿ ಆದೇಶಿಸಿದೆ.

ಶಾಲಾ ಗೋಡೆ ಮೇಲೆ ಬರೆದಿದ್ದರಿಂದ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, ಮಾರ್ಚ್ 16, 2022 ರಂದು ಇಬ್ಬರ ವಿರುದ್ಧ ತೆರೆದ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಆದ್ರೆ, ಈ ಕಾಯ್ದೆ ಹೊಸಪೇಟೆ ಪಟ್ಟಣಕ್ಕೆ ಅನ್ವಯವಾಗುವುದಿಲ್ಲ. ಕಾಯ್ದೆ ಹೊಸಪೇಟೆಗೆ ಅನ್ವಯಿಸಲು ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್​ ಮುಂದೆ ವಾದ ಮಂಡಿಸಿದ್ದಾರೆ. ಇದನ್ನು ಆಲಿಸಿದ ಕೋರ್ಟ್, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಗೊಳಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬ: 3 ಕೊಲೆ ಮಾಡಿದ್ದ ಕಲಬುರಗಿಯ ಪಾತಕಿ ನೇಣು ಕುಣಿಕೆಯಿಂದ ಬಚಾವ್

 ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:33 pm, Mon, 28 August 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್