AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ

ವಿಜಯನಗರ ಜಿಲ್ಲೆಯಲ್ಲಿ ಅಧಿಖಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಪತ್ರ ಚಳವಳಿ ನಡೆದಿದೆ. ಆದ್ರೆ, ಇದರಲ್ಲಿ ಮಾಜಿ ಶಾಸಕ ಗೆದ್ದು ಬೀಗಿದ್ದಾರೆ.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ
ವಿಧಾನಸೌಧ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ| Edited By: |

Updated on: Jul 21, 2023 | 2:04 PM

Share

ವಿಜಯನಗರ, (ಜುಲೈ 21): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಧಿಕಾರಿಗಳ ವರ್ಗಾವಣೆ (Transfer) ದಂಧೆ ಆರೋಪ ಮಾಡಿದ್ದು, ಅದಕ್ಕೀಗ ಹಾಲಿ ಹಾಗೂ ಮಾಜಿ ಶಾಸಕರ ಶಿಪಾರಸ್ಸು ಪತ್ರಗಳು ಪುಷ್ಟಿ ನೀಡುವಂತಿದೆ. ಹೌದು..ವಿಜಯನಗರ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗಾಗಿ ಮಾಜಿ- ಹಾಲಿ ಶಾಸಕರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ವಿಜಯನಗರ ಶಾಸಕ ಎಚ್. ಆರ್.ಗವಿಯಪ್ಪ ಹಾಗೂ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ನಡುವೆ ಅಧಿಕಾರಿಗಳ ವರ್ಗಾವಣೆ ಶಿಫಾರಸ್ಸು ಪತ್ರ ಚಳವಳಿ ನಡೆದಿವೆ. ಒಬ್ಬರು ವರ್ಗಾವಣೆಗೆ ಪ್ರಯತ್ನಿಸಿದರೆ, ಮತ್ತೊಬ್ಬರಿಂದ ಅದೇ ಸ್ಥಾನದಲ್ಲಿ ಮುಂದುವರಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ವರ್ಗಾವಣೆ, ಕಾಂಗ್ರೆಸ್​ ಶಾಸಕನ ಪತ್ರ ವೈರಲ್

ಬೀರೇಂದ್ರ ಅವರನ್ನು ಹೊಸಪೇಟೆಯಲ್ಲಿ ಮುಂದುವರಿಸುವಂತೆ ಶಾಸಕ ಗವಿಯಪ್ಪ ಸರ್ಕಾರಕ್ಕೆ ಶಿಪಾರಸ್ಸು ಪತ್ರ ಬರೆದಿದ್ದರೆ, ಇತ್ತ ಕೊಪ್ಪಳದಲ್ಲಿ ಸಹಾಯಕ ನಿಬಂಧಕರಾಗಿದ್ದ ಟಿ.ಎಸ್. ರವಿಕುಮಾರ್ ಅವರನ್ನು ಹೊಸಪೇಟೆಗೆ ವರ್ಗಾಯಿಸುವಂತೆ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸು ಪತ್ರ ಬರೆದಿದ್ದರು. ಅಂತಿಮವಾಗಿ ಮಾಜಿ ಶಾಸಕ ಭೀಮಾನಾಯ್ಕ ಪತ್ರಕ್ಕೆ ಮನ್ನಣೆ ನೀಡಿ ಸರ್ಕಾರ, ಬಿರೇಂದ್ರ ಅವರನ್ನು ವರ್ಗಾವಣೆ ಮಾಡಿದೆ.

ಇದರೊಂದಿಗೆ ಸರ್ಕಾರ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸಿಗೆ ಸರ್ಕಾರ ಮಣೆ ಹಾಕಿದ್ದು, ಶಾಸಕ ಎಚ್. ಆರ್.ಗವಿಯಪ್ಪ ಪತ್ರಕ್ಕೆ ಸಿಗದ ಮನ್ನಣೆ ಸಿಕ್ಕಿಲ್ಲ. ಇದರಿಂದ ಮಾಜಿ ಶಾಸಕ ಭೀಮಾನಾಯ್ಕ ಹಸ್ತಕ್ಷೇಪಕ್ಕೆ ಶಾಸಕ ಗವಿಯಪ್ಪ ಅಸಮಾಧಾನಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್