ಸಂಪಾದಿತಲೇ ಪರಾಕ್: ಸುಭಿಕ್ಷೆಯ ನಾಡಿಗಾಗಿ ಬಂಗಾರದ ಭವಿಷ್ಯ ನುಡಿದ ಭಂಡಾರದೊಡೆಯ..!

Mailaralingeshwara Karanika 2024: ವಿಜಯನಗರ ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಹೊರ ಬಿದ್ದಿದೆ. ಇಂದು ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆದಿದ್ದು, ಗೊರವಯ್ಯ ರಾಮಣ್ಣ ಅವರು “ಸಂಪಾದಿತಲೇ ಪರಾಕ್” ಎಂದು ಈ ಬಾರಿ ಕಾರ್ಣಿಕ ನುಡಿಯನ್ನು ನುಡಿದ್ದಾರೆ. ಈ ಕಾರ್ಣಿಕ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.

ಸಂಪಾದಿತಲೇ ಪರಾಕ್: ಸುಭಿಕ್ಷೆಯ ನಾಡಿಗಾಗಿ ಬಂಗಾರದ ಭವಿಷ್ಯ ನುಡಿದ ಭಂಡಾರದೊಡೆಯ..!
ರಾಮಣ್ಣ ಗೊರವಯ್ಯ ಕಾರ್ಣಿಕ ನುಡಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 26, 2024 | 7:58 PM

ವಿಜಯನಗರ, (ಫೆಬ್ರವರಿ 26): ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ (mailaralingeshwara Karanika 2024) ನುಡಿ ಹೊರ ಬಿದ್ದಿದೆ. ಇಂದು (ಫೆಬ್ರವರಿ 26) ಹೂವಿನಹಡಗಲಿಯಲಿ  ತಾಲೂಕಿನ ಮೈಲಾರ ಗ್ರಾಮದ ಡೆಂಕನ ಮರಡಿಯಲ್ಲಿ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆದಿದ್ದು, ಗೊರವಯ್ಯ ರಾಮಣ್ಣ ಅವರು “ಸಂಪಾದಿತಲೇ ಪರಾಕ್” ಎಂದು ಈ ಬಾರಿ ಕಾರ್ಣಿಕ ನುಡಿಯನ್ನು ನುಡಿದ್ದಾರೆ.  ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ಸಲ ಭಾರಿ ಮಳೆ, ಬೆಳೆ ಚೆನ್ನಾಗಿ ಆಗಿ ರೈತರ ಬಾಳು ಹಸನಾಗುತ್ತದೆ ಎಂದು ಕಾರ್ಣಿಕ ನುಡಿ ಅರ್ಥೈಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಣಿಕ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಕುದುರೆ ಏರಿ ಬಂದು ದೇವಸ್ಥಾನದ ಪ್ರಧಾನ ಅರ್ಚಕ, ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್, ಗೊರವಯ್ಯಗೆ ದೀಕ್ಷೆ ನೀಡಿದರು. ಗೊರವಯ್ಯ ಸರಸರನೇ 15 ಅಡಿ ಎತ್ತರದ ಬಿಲ್ಲನ್ನು ಏರಿ “ಸಂಪಾದಿತಲೇ ಪರಾಕ್”  ಎಂದು ದೈವವಾಣಿ ನುಡಿದಿದ್ದಾರೆ. ಬಳಿಕ 15 ಅಡಿ ಎತ್ತರದಿಂದಲೇ ಕೆಳಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

ಕಾರ್ಣಿಕದ ಅರ್ಥ

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ಬಾರಿಯಂತೆ ಬರಗಾಲ ಕಡಿಮೆಯಾಗಲಿದೆ. ಮಳೆ ಬೆಳೆ ಚೆನ್ನಾಗಿ ಆಗಲಿದೆ. ಸುಭಿಕ್ಷೆಯಿಂದ ರೈತರು ಸಂತಸ ಪಡಲಿದ್ದಾರೆ ಎಂಬುದಾಗಿ ಕಾರ್ಣಿಕ ನುಡಿಯ ಅರ್ಥವಾಗಿದೆ.

ವಿಜಯನರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನ ಮರಡಿಯಲ್ಲಿ ಪ್ರತಿ ವರ್ಷ ಗೊರವಯ್ಯನ ಕಾರ್ಣಿಕ ಕೇಳಲು ಲಕ್ಷಾಂತರ ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಗೊರವಯ್ಯ ಒಂಬತ್ತು ದಿನಗಳ ಕಾಲ ಉಪವಾಸ ಇದ್ದು ಕಾರ್ಣಿಕ ನುಡಿ ಹೇಳುತ್ತಾರೆ. ಅದರಂತೆ ಈ ವರ್ಷವೂ ಸಹ ಕಾರ್ಣಿಕನ ಕೇಳಲು ಲಕ್ಷಾಂತರ ಜನ ನೆರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್