AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪ್ರಾತಿನಿಧಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 06, 2023 | 6:01 PM

Share

ವಿಜಯನಗರ: ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರದ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ (Kharadapudi Mahesh) ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪವನ್ನು ಮಹೇಶ್ ಎದುರಿಸುತ್ತಿದ್ದಾರೆ.

ಕೆಲವರಿಗೆ ನಮ್ಮ ಮೇಲೆ ಬಹಳ ಪ್ರೀತಿ ಎಂದ ಖಾರದಪುಡಿ ಮಹೇಶ್​ 

ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆಸ್ತಿ ಸೀಜ್ ಮಾಡಿರುವುದು ಹಳೇ ಪ್ರಕರಣ. ನಾವು ಕಾನೂನು ಬದ್ದವಾಗಿದ್ದೇವೆ. ಕಾನೂನಿಗೆ ತೆಲೆ ಬಾಗಿಸುತ್ತೇವೆ. ನ್ಯಾಯಾಲಯ ನಿನ್ನೆ ಆದೇಶ ಮಾಡಿದ್ದು, ನಮಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ನಮ್ಮ ಅಣ್ಣನ ಮಗನ ಆಸ್ತಿ ಬಿಡುಗಡೆ ಮಾಡಿದೆ. ಇದೆಲ್ಲಾ ಹಳೇಯ ಕೇಸ್. ಈಗ ಮತ್ತೆ ಮತ್ತೆ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ ಕೆಲವರಿಗೆ ಬಹಳ ಪ್ರೀತಿಯಿದೆ. ನಾವು ಕೇವಲ ಟಾನ್ಸ್ ಪೋರ್ಟರ್ಸ್​​ಗಳು. ನಾವು ಅಕ್ರಮ ಮಾಡಿಲ್ಲ. ಅತಿ ಶ್ರೀಘ್ರದಲ್ಲೇ ನಾವು ದೋಷಮುಕ್ತರಾಗಿ ಬರುತ್ತೇವೆ ಎಂದರು.

ಇದನ್ನೂ ಓದಿ: Chikkaballapur News: ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ

ನನ್ನ ಆಸ್ತಿ ಎಲ್ಲಿದೆ ತೋರಿಸಲಿ ಉಚಿತವಾಗಿ ನೀಡುವೆ

ಹುಚ್ಚರ ಮದುವೆಯಲ್ಲಿ ಉಂಡವರೇ ಜಾಣ ಎನ್ನುವಂತೆ ಅಷ್ಟು ಕೋಟಿ, ಇಷ್ಟು ಕೋಟಿ ಅಂತಿದ್ದಾರೆ. ಆದರೆ ನಮ್ಮ ಬಳಿ ಅಷ್ಟೊಂದು ಆಸ್ತಿಯಿಲ್ಲ. ನನ್ನ ಆಸ್ತಿ ಎಲ್ಲಿದೆ ಎಂದು ತೋರಿಸಲಿ, ಅರ್ಧ ಆಸ್ತಿಯನ್ನ ಉಚಿತವಾಗಿ ಕೊಡುವೆ. ನಾನೂ ತುಂಬಾ ಗಟ್ಟಿಯಾಗಿರುವೆ. ನನ್ನ ಸ್ನೇಹಿತರು ಪೋನ್ ಮಾಡಿ ಕೇಳುತ್ತಾರೆ. ಅವರಿಗೆ ಹೇಳಿ ಹೇಳಿ ಸಾಕಾಗಿ ಹೋಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು