AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪ್ರಾತಿನಿಧಿಕ ಚಿತ್ರ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 06, 2023 | 6:01 PM

ವಿಜಯನಗರ: ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರದ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ (Kharadapudi Mahesh) ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪವನ್ನು ಮಹೇಶ್ ಎದುರಿಸುತ್ತಿದ್ದಾರೆ.

ಕೆಲವರಿಗೆ ನಮ್ಮ ಮೇಲೆ ಬಹಳ ಪ್ರೀತಿ ಎಂದ ಖಾರದಪುಡಿ ಮಹೇಶ್​ 

ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆಸ್ತಿ ಸೀಜ್ ಮಾಡಿರುವುದು ಹಳೇ ಪ್ರಕರಣ. ನಾವು ಕಾನೂನು ಬದ್ದವಾಗಿದ್ದೇವೆ. ಕಾನೂನಿಗೆ ತೆಲೆ ಬಾಗಿಸುತ್ತೇವೆ. ನ್ಯಾಯಾಲಯ ನಿನ್ನೆ ಆದೇಶ ಮಾಡಿದ್ದು, ನಮಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ನಮ್ಮ ಅಣ್ಣನ ಮಗನ ಆಸ್ತಿ ಬಿಡುಗಡೆ ಮಾಡಿದೆ. ಇದೆಲ್ಲಾ ಹಳೇಯ ಕೇಸ್. ಈಗ ಮತ್ತೆ ಮತ್ತೆ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ ಕೆಲವರಿಗೆ ಬಹಳ ಪ್ರೀತಿಯಿದೆ. ನಾವು ಕೇವಲ ಟಾನ್ಸ್ ಪೋರ್ಟರ್ಸ್​​ಗಳು. ನಾವು ಅಕ್ರಮ ಮಾಡಿಲ್ಲ. ಅತಿ ಶ್ರೀಘ್ರದಲ್ಲೇ ನಾವು ದೋಷಮುಕ್ತರಾಗಿ ಬರುತ್ತೇವೆ ಎಂದರು.

ಇದನ್ನೂ ಓದಿ: Chikkaballapur News: ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ

ನನ್ನ ಆಸ್ತಿ ಎಲ್ಲಿದೆ ತೋರಿಸಲಿ ಉಚಿತವಾಗಿ ನೀಡುವೆ

ಹುಚ್ಚರ ಮದುವೆಯಲ್ಲಿ ಉಂಡವರೇ ಜಾಣ ಎನ್ನುವಂತೆ ಅಷ್ಟು ಕೋಟಿ, ಇಷ್ಟು ಕೋಟಿ ಅಂತಿದ್ದಾರೆ. ಆದರೆ ನಮ್ಮ ಬಳಿ ಅಷ್ಟೊಂದು ಆಸ್ತಿಯಿಲ್ಲ. ನನ್ನ ಆಸ್ತಿ ಎಲ್ಲಿದೆ ಎಂದು ತೋರಿಸಲಿ, ಅರ್ಧ ಆಸ್ತಿಯನ್ನ ಉಚಿತವಾಗಿ ಕೊಡುವೆ. ನಾನೂ ತುಂಬಾ ಗಟ್ಟಿಯಾಗಿರುವೆ. ನನ್ನ ಸ್ನೇಹಿತರು ಪೋನ್ ಮಾಡಿ ಕೇಳುತ್ತಾರೆ. ಅವರಿಗೆ ಹೇಳಿ ಹೇಳಿ ಸಾಕಾಗಿ ಹೋಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್