AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಮುಂಗಾರು ಮಳೆ; ಬತ್ತಿ ಹೋಗುತ್ತಿವೆ ಜಲಾಶಯಗಳು

ಕಾಫಿನಾಡಿನಲ್ಲೂ ವರುಣ ಮುನಿಸಿಕೊಂಡಿದ್ದಾನೆ. ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಬಾರದ ಹಿನ್ನೆಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿರುವ ಐತಿಹಾಸಿಕ ಕೆರೆ ಸಂಪೂರ್ಣ ಬತ್ತಿ ಹೋಗಿದೆ.

ಕೈ ಕೊಟ್ಟ ಮುಂಗಾರು ಮಳೆ; ಬತ್ತಿ ಹೋಗುತ್ತಿವೆ ಜಲಾಶಯಗಳು
ಟಿಬಿ ಡ್ಯಾಂ
TV9 Web
| Edited By: |

Updated on: Jul 02, 2023 | 8:16 AM

Share

ವಿಜಯನಗರ: ರಾಜ್ಯದಲ್ಲಿ ಮುಂಗಾರು(Monsoon) ಮಳೆ ವಿಳಂಬವಾಗಿ ಅನೇಕ ಜಲಾಶಯಗಳು ಬತ್ತಿ ಹೋಗಿವೆ. ಹೊಸಪೇಟೆಯ ತುಂಗಭದ್ರಾ ಜಲಾಶಯ(Tungabhadra Dam) ಸಂಪೂರ್ಣ ಖಾಲಿ ಖಾಲಿಯಾಗಿದೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರ ಪ್ರದೇಶದ ಜೀವನಾಡಿಯಾಗಿರುವ ಟಿಬಿ ಡ್ಯಾಂ ಸಂಪೂರ್ಣ ಖಾಲಿಯಾಗಿದೆ. ಟಿಬಿ ಡ್ಯಾಂನಲ್ಲೀಗ ಕೇವಲ 3.092 TMC ನೀರು ಮಾತ್ರ ಶೇಖರಣೆಯಾಗಿದೆ. 2 ಟಿಎಂಸಿ ಡೆಡ್ ಸ್ಟೋರೇಜ್. ಇನ್ನುಳಿದ ಒಂದು ಟಿಎಂಸಿ ನೀರು ಮಾತ್ರ ಕುಡಿಯಲು ಬಳಕೆಗೆ ಮೀಸಲಿಡಲಾಗಿದೆ.

105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಒಂದು ಟಿಎಂಸಿ ನೀರು ಮಾತ್ರ ಕುಡಿಯಲು ಯೋಗ್ಯ. ಕಳೆದ ವರ್ಷ ಇದೇ ದಿನದ ವೇಳೆಗೆ ಡ್ಯಾಂನಲ್ಲಿ‌ 45.855 ಟಿಎಂಸಿ ನೀರು ಸಂಗ್ರಹಣೆ ಇತ್ತು. ಈ ಭಾರಿ ಮುಂಗಾರು ಮಳೆ ವಿಳಂಬದಿಂದ ಡ್ಯಾಂ ಸಂಪೂರ್ಣ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಉತ್ತಮವಾಗಿ ಮಳೆಯಾಗದಿದ್ದರೇ ಕುಡಿಯುವ ನೀರಿಗೆ ಹಾಹಾಕಾರ ಎದ್ದುವ ಸಾಧ್ಯತೆ ಇದೆ.

ಚಿಕ್ಕಮಗಳೂರಿನಲ್ಲಿ ಬತ್ತಿ ಹೋದ ಐತಿಹಾಸಿಕ ಕೆರೆ

ಕಾಫಿನಾಡಿನಲ್ಲೂ ವರುಣ ಮುನಿಸಿಕೊಂಡಿದ್ದಾನೆ. ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಬಾರದ ಹಿನ್ನೆಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿರುವ ಐತಿಹಾಸಿಕ ಕೆರೆ ಸಂಪೂರ್ಣ ಬತ್ತಿ ಹೋಗಿದೆ. ನೂರಾರು ಹಳ್ಳಿಗಳ ಜೀವನಾಡಿಯಾಗಿರುವ 2036 ಎಕರೆ ವಿಸ್ತೀರ್ಣದ ಮದಗದ ಕೆರೆ ಸಂಪೂರ್ಣ ಬರಿದಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗದ ಹಿನ್ನೆಲೆ ಮದಗದ ಕೆರೆ ಖಾಲಿ ಖಾಲಿ.

2016-17 ರಲ್ಲಿ ಬರಗಾಲ ಬಂದಿದ್ರೂ ಕೂಡ ಮದಗದ ಕೆರೆ ಬತ್ತಿ ಹೋಗಿರಲಿಲ್ಲ. ಕಳೆದ ವರ್ಷ ಮದಗದ ಕೆರೆ ತುಂಬಿ ಕೋಡಿ ಬಿದ್ದಿತ್ತು. ಬಯಲು ಸೀಮೆ ಭಾಗದ ಜನರ ಕುಡಿಯುವ ನೀರಿನ ಮೂಲವಾಗಿದೆ.

ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ

ಹಾಸನದ ಕಾವೇರಿ ನದಿ ಪಾತ್ರದ ಪ್ರಮುಖ ಜಲಾಶಯವಾದ ಹೇಮಾವತಿ ಜಲಾಶಯದಲ್ಲಿ ನೀರಿನ‌ ಮಟ್ಟ ಸಂಪೂರ್ಣ ಕುಸಿದಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದಿನ ನೀರಿನ ಮಟ್ಟ 2890.05 ಅಡಿ ಇದೆ. ಕಳೆದ ವರ್ಷ ಇದೇ ದಿನ 2908.31 ಅಡಿ ನೀರಿತ್ತು. ಗರಿಷ್ಠ 37.103 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 14.079 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 24.426 ಟಿಎಂಸಿ ನೀರಿತ್ತು.

ಕಳೆದ ವರ್ಷ 3556 ಕ್ಯುಸೆಕ್ ನೀರಿನ ಒಳ ಹರಿವು ಇತ್ತು ಇಂದು ಕೇವಲ 85 ಕ್ಯುಸೆಕ್ ನೀರಿನ ಒಳ ಹರಿವು ಇದೆ. ಹೊರ ಹರಿವು 1350. ಕ್ಯುಸೆಕ್ ಇದೆ ಕಳೆದ ವರ್ಷ ಇದೇ ದಿನ 200 ಕ್ಯುಸೆಕ್ ನೀರಿನ ಹೊರ ಹರಿವು ಇತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್