Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಜಿಲ್ಲೆಯಲ್ಲಿ ಮಳೆಗೆ 80ಕ್ಕೂ ಹೆಚ್ಚು ಮನೆ ಕುಸಿತ; ನದಿ ಪಾತ್ರದ 22 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸೂಚನೆ

ವಿಜಯನಗರ ಜಿಲ್ಲೆಯಲ್ಲಿ ಮಹಾ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮಳೆ ಅವಾಂತರಕ್ಕೆ ಓರ್ವ ಮಹಿಳೆ ಬಲಿಯಾಗಿದರೆ, ಮೂವರಿಗೆ ಗಾಯಗಳಾಗಿವೆ. ಜೊತೆಗೆ ಮಳೆಗೆ ಕೂಡ್ಲಿಗಿ, ಹೂವಿನಹಡಗಲಿ, ಕೊಟ್ಟೂರು ತಾಲೂಕುಗಳಲ್ಲಿ 80ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದೆ.

ವಿಜಯನಗರ ಜಿಲ್ಲೆಯಲ್ಲಿ ಮಳೆಗೆ 80ಕ್ಕೂ ಹೆಚ್ಚು ಮನೆ ಕುಸಿತ; ನದಿ ಪಾತ್ರದ 22 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸೂಚನೆ
ಮಳೆಯಿಂದ ಕುಸಿದ ಮನೆಗಳು
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 28, 2023 | 12:42 PM

ವಿಜಯನಗರ, ಜು.28: ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಂತೆ ವಿಜಯನಗರ (Vijayanagara) ಜಿಲ್ಲೆಯಲ್ಲಿಯೂ ಮಹಾ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮಳೆ(Rain) ಅವಾಂತರಕ್ಕೆ ಓರ್ವ ಮಹಿಳೆ ಬಲಿಯಾಗಿದರೆ, ಮೂವರಿಗೆ ಗಾಯಗಳಾಗಿವೆ. ಹೌದು ಮಳೆಗೆ ಕೂಡ್ಲಿಗಿ, ಹೂವಿನಹಡಗಲಿ, ಕೊಟ್ಟೂರು ತಾಲೂಕುಗಳಲ್ಲಿ 80ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದೆ. ಜೊತೆಗೆ ಜಿಲ್ಲೆಯಲ್ಲಿ 500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಜಿಲ್ಲೆಯ 22 ಗ್ರಾಮಗಳ ನದಿ ಪಾತ್ರದ ಜನರ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ.

ಸತತ ಮಳೆಯಿಂದಾಗಿ ಅನ್ನದಾತ ಬೆಳೆದ ಬೆಳೆಗಳು ನೀರುಪಾಲು

ಬೀದರ್: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತ ಬೆಳೆದ ಬೆಳೆಗಳು ಜಲಾವೃತವಾಗಿದ್ದು, ಜಮೀನಿನಲ್ಲಿ ನಿಂತು ಕಣ್ಣಿರು ಹಾಕುತ್ತಿರುವ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಇನ್ನು ಮಳೆಯಿಂದಾಗಿ ಸೋಯಾ, ತೋಗರಿ, ಉದ್ದು, ಹೆಸರು ಬೆಳೆಗಳನ್ನು ತಡವಾಗಿ ಬಿತ್ತನೆ ಮಾಡಲಾಗಿತ್ತು. ಇದೀಗ ಮಳೆಯಿಂದ ಬೆಳೆಗಳು ನೀರು ಪಾಲಾಗಿದೆ. ಈ ಕುರಿತು ವೈಜ್ಞಾನಿಕವಾಗಿ ಸರ್ವೆ ಮಾಡಿ ಸೂಕ್ತ ಪರಿಹಾರ ಕೊಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ಮಳೆಗೆ ಧರೆಗುರಳಿದ ಮನೆ, ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯ

ಬೆಳಗಾವಿ: ಜಿಲ್ಲೆಯಾದ್ಯಂತ ಬಿಟ್ಟು ಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಧರೆಗುರುಳಿದ ಘಟನೆ ನಡೆದಿದೆ. ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಲಕ್ಷ್ಮೀ ಹೊಂಡೈ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ದುರ್ಘಟನೆ ಸಂಭವಿಸಿದೆ. ಗೋಡೆ ಬಿಳ್ಳುತ್ತಿದ್ದಂತೆ ಕೂಡಲೇ ಹೊರಗೆ ಓಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ