AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಪವರ್ ಸ್ಟಾರ್ ಅಭಿಮಾನಿಗಳಿಂದ ಅಪ್ಪು ದೇವರ ಮಾಲೆ ಧರಿಸಿ, ಸಮಾಧಿ ದರ್ಶನ; ಏನಿದು ಅಪ್ಪು ಮಾಲೆ ವ್ರತಾಚರಣೆ, ಹೇಗಿದೆ ತಯಾರಿ? ಇಲ್ಲಿದೆ ನೋಡಿ

ಅಯ್ಯಪ್ಪನ ಮಾಲೆ, ಹನುಮನ ಮಾಲಾಧಾರಿಗಳು, ಮಾಲೆ ಧರಿಸಿ ವ್ರತಾಚರಣೆ ಮಾಡೋದನ್ನ ನೋಡಿದ್ದೇವೆ, ಕೇಳಿದ್ದೇವೆ. ಆದ್ರೆ ರಾಜ್ಯದಲ್ಲೀಗ ಅಪ್ಪು ಮಾಲೆ ಅಭಿಯಾನ ಶುರುವಾಗಿದೆ. ಅಷ್ಟಕ್ಕೂ ಏನಿದೂ ಅಪ್ಪು ಮಾಲಾ ವ್ರತಾಚರಣೆ, ಅಭಿಮಾನಿಗಳೇ ದೇವರು ಎನ್ನುತ್ತಿದ್ದ ಅಭಿಮಾನಿಗಳ ಪ್ರೀತಿಯ ಅಪ್ಪುವಿಗಾಗಿ ಅಭಿಮಾನಿಗಳು ಆರಂಭಿಸಿರುವ ಅಪ್ಪು ಮಾಲೆ ಅಚರಣೆ ಹೇಗಿದೆ ಅನ್ನೋ ಕುರಿತು ಇಲ್ಲಿದೆ ನೋಡಿ.

ವಿಜಯನಗರ: ಪವರ್ ಸ್ಟಾರ್ ಅಭಿಮಾನಿಗಳಿಂದ ಅಪ್ಪು ದೇವರ ಮಾಲೆ ಧರಿಸಿ, ಸಮಾಧಿ ದರ್ಶನ; ಏನಿದು ಅಪ್ಪು ಮಾಲೆ ವ್ರತಾಚರಣೆ, ಹೇಗಿದೆ ತಯಾರಿ? ಇಲ್ಲಿದೆ ನೋಡಿ
ವಿಜಯನಗರದಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ ಮಾಲೆ ವ್ರತಾಚರಣೆ
TV9 Web
| Edited By: |

Updated on:Feb 24, 2023 | 9:13 AM

Share

ವಿಜಯನಗರ: ಅಭಿಮಾನಿಗಳ ಯುವರಾಜ ಅಪ್ಪು ನಮ್ಮನ್ನಗಲಿ ಒಂದೂವರೆ ವರ್ಷವಾಗುತ್ತ ಬಂದಿದೆ.‌ ಆದರೂ ಅಭಿಮಾನಿಗಳ ದೇವರಾಗಿರುವ ಪುನೀತ ರಾಜಕುಮಾರ್ ಇಂದಿಗೂ ಅಜರಾಮರ. ಅದ್ರಲ್ಲೂ ದೊಡ್ಮನೆ ಹುಡ್ಗನಿಗೂ, ಹೊಸಪೇಟೆಗೂ ಅವಿನಾಭಾವ ಸಂಬಂಧ. ಯಾರು ಕೈ ಬಿಟ್ಟರೂ ಹೊಸಪೇಟೆ ಜನ ನಮ್ಮನ್ನ ಕೈ ಬಿಡಲ್ಲ ಅಂತ ಖುದ್ದು ಪುನೀತ್ ರಾಜ್ ಕುಮಾರ್ ಅವರು ಹೇಳಿದ್ದರು. ಅದರಂತೆಯೇ ಅಪ್ಪು ಇದ್ದಾಗಲೂ, ಇದೀಗ ನಮ್ಮ ನಡುವೆ ಇಲ್ಲದ ವೇಳೆಯಲ್ಲೂ ಅಪ್ಪು ಅವರನ್ನ ಅಜರಾಮರವಾಗಿಸುವ ಕೆಲಸಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದು, ಪವರ್ ಸ್ಟಾರ್ ಪುನೀತ್ ರಾಜಕುಮಾರ ಅಭಿಮಾನಿಗಳು ಜಿಲ್ಲೆಯಲ್ಲಿ ಅಪ್ಪು ದೇವರ ಮಾಲೆ ಧರಿಸುವ ವ್ರತಾಚರಣೆಗೆ ಸಜ್ಜಾಗುತ್ತಿದ್ದಾರೆ.

ಹೊಸಪೇಟೆಯ ಹೃದಯ ಭಾಗದಲ್ಲಿರುವ ಪುನೀತ್ ರಾಜಕುಮಾರ ವೃತ್ತದಲ್ಲಿ ಪವರ್ ಸ್ಟಾರ್ ಅಭಿಮಾನಿಗಳು ಅಪ್ಪು ದೇವರ ಮಾಲೆಯನ್ನು ಮಾರ್ಚ್ 1 ರಿಂದ 17ರವರೆಗೆ ಮಾಲೆ ಧರಿಸಿ, ಮಾ.18ಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿ ದರ್ಶನ (ಪುಣ್ಯಭೂಮಿ) ಮಾಡಲಿದ್ದಾರೆ. ಹೌದು, ಅಪ್ಪು ಅವರ ಜನ್ಮದಿನವನ್ನು ಸರ್ಕಾರ ಸ್ಫೂರ್ತಿ ದಿನ ಎಂದು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಅಪ್ಪು ಅಭಿಮಾನಿಗಳು ಅಪ್ಪು ದೇವರ ಮಾಲಾಧಾರಣೆ ಮಾಡಲಿದ್ದಾರೆ.

ಇದನ್ನೂ ಓದಿ:‘ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ’; ‘ಅಪ್ಪು ದೇವರ ಮಾಲೆ’ ಬಗ್ಗೆ ನಟ ಪ್ರಥಮ್ ಅಸಮಾಧಾನ

ಅಪ್ಪು ದೇವರ ಮಾಲೆ ಧರಿಸುವ ಮೂಲಕ ವ್ರತಾಚರಣೆಗೆ ಸಜ್ಜಾದ ಅಭಿಮಾನಿಗಳು

ಇನ್ನು ಅಪ್ಪು ದೇವರ ಮಾಲೆ ಧರಿಸಲು ಮುಂದಾಗಿರುವ ಅಭಿಮಾನಿಗಳು, ಅಪ್ಪು ದೇವರ ಡಾಲರ್ ಇರುವ ಮಾಲೆ ಧರಿಸುವುದು, ಕೇಸರಿ ಶಾಲು, ಕೇಸರಿ ಪಂಚೆ, ಕೇಸರಿ ಶರ್ಟ್ ಧರಿಸಿ, ಅಪ್ಪು ದೇವರ ಫೋಟೊ ಇಟ್ಟು ಪೂಜೆ ಮಾಡುವುದು. ಬೆಳಗ್ಗೆ ಸೂರ್ಯ ಉದಯಿಸುವ ಮುನ್ನ ಹಾಗೂ ಸಂಜೆ ಸೂರ್ಯ ಮುಳುಗಿದ ಬಳಿಕ ಸ್ನಾನ ಮಾಡುವುದು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ರಾತ್ರಿ ಉಪಾಹಾರ ಸೇವಿಸುವುದು ಅಂತ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.

ಅಪ್ಪು ದೇವರ ಮಾಲೆ ಧರಿಸುವವರು ದುಶ್ಚಟಗಳಿಂದ ದೂರವೇ ಇರಬೇಕು. ಮಾಲೆ ಹಾಕುವ ಅಭಿಮಾನಿಗಳು ಐದು ದಿವಸ, 11 ದಿವಸ ಮತ್ತು ಒಂದು ದಿವಸ ಮಾಲೆ ಹಾಕಬಹುದು. ಮಾಲೆ ಹಾಕುವ ಎಲ್ಲಾ ಅಪ್ಪುಸ್ವಾಮಿಗಳು ಇಲ್ಲಿಂದ ಪುಣ್ಯಭೂಮಿಗೆ ತೆರಳುವಾಗ ಕೈಲಾದ ದಿನಸಿಗಳನ್ನು ಇರುಮುಡಿಯಾಗಿ ತೆಗೆದುಕೊಂಡು ಹೋಗತಕ್ಕದ್ದು, ಅಕ್ಕಿ, ಬೆಳೆ, ಎಣ್ಣೆ ದಿನಸಿಗಳನ್ನು ತೆಗೆದುಕೊಂಡು ಹೋಗಬಹುದು. ಎಲ್ಲಾ ಮಾಲೆಧರಿಸುವ ಮಾಲಾಧಾರಿಗಳು ಅಪ್ಪು ದೇವರ ಪುಣ್ಯಭೂಮಿ ದರ್ಶನ ಪಡೆದು, ವಾಪಾಸ್ ಬಂದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಶ್ರೀವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಮಾಲೆಯನ್ನು ವಿಸರ್ಜನೆ ಮಾಡಲಿದ್ದಾರೆ.

ಇದನ್ನೂ ಓದಿ:ಪುನೀತ್ ರಾಜಕುಮಾರ್ ನೆನಪುಗಳು: ತಂದೆಯ ಹಾಗೆ ಅಪ್ಪು ಸಹ ಮಹಾ ದೈವಭಕ್ತರಾಗಿದ್ದರು

ಅಭಿಮಾನಿಗಳೇ ನಮ್ಮ ಮನೆ ದೇವರು ಎಂದು ಅಪ್ಪು ಅವರು ಅಭಿಮಾನಿಗಳನ್ನ ಗೌರವಿಸಿದ್ರೆ. ಅದೇ ಅಪ್ಪು ಅಭಿಮಾನಿಗಳು ಅಪ್ಪು ಹೆಸರಿನಲ್ಲೀಗ ಅಪ್ಪು ಮಾಲೆ ಧರಿಸಿ ವ್ರತಾಚರಣೆ ಮಾಡುವ ಮೂಲಕ ಅಪ್ಪುವನ್ನ ಅಜರಾಮರವಾಗಿಸುವ ಕೆಲಸಕ್ಕೆ ಮುಂದಾಗಿರುವುದು ವಿಶೇಷವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:11 am, Fri, 24 February 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು