AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿನ್ನಿ ಮಿಲ್ಕ್ ಕಂಪನಿ ನೂರಾರು ರೈತರಿಗೆ ಕತ್ತೆಗಳನ್ನು ಮಾರಾಟ ಮಾಡಿ ಮೋಸ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಪ್ರಕರಣವನ್ನು ಸಿಐಡಿ ಕೈಗೆತ್ತಿಕೊಂಡಿದ್ದು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದೆ. 13.50 ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್‌‌ ಇಬ್ಬರು ನಾಪತ್ತೆಯಾಗಿದ್ದಾರೆ.

ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ
ವಿಜಯನಗರ ಜಿಲ್ಲೆಯಲ್ಲಿ ಕತ್ತೆ ಖರೀದಿ
ವಿನಾಯಕ ಬಡಿಗೇರ್​
| Edited By: |

Updated on: Sep 26, 2024 | 10:08 AM

Share

ವಿಜಯನಗರ, ಸೆ.26: ಕತ್ತೆಗಳನ್ನ (Donkey) ಮಾರಾಟ ಮಾಡಿ ಲಕ್ಷ ಲಕ್ಷ ದೋಚಿದ್ದ ಜಿನ್ನಿ ಮಿಲ್ಕ್ ಕಂಪನಿ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿ ಕತ್ತೆ ಕಂಪನಿ ಕಳ್ಳಾಟ ಕೇಸನ್ನು ಸಿಐಡಿ (CID)ತನಿಖೆಗೆ ವಹಿಸಲು‌ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್‌‌ 13.50 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾರೆ. ಈ ಬಗ್ಗೆ Tv9 ವರದಿ ಬಿತ್ತರಿಸಿದ್ದು ಮೊದಲ‌ ದಿನದಿಂದಲೇ ಎಂಡಿ, ಮ್ಯಾನೇಜರ್ ಇಬ್ಬರೂ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಟೀಂ ಈ ವಂಚನೆ ಜಾಲ ಬೇಧಿಸಲಿದೆ.

ಇನ್ನೆರಡು ದಿನಗಳಲ್ಲಿ ಸಿಐಡಿ‌ ಅಧಿಕಾರಿಗಳ‌ ತಂಡ ಹೊಸಪೇಟೆಗೆ ಭೇಟಿ ನೀಡಲಿದೆ. ಕತ್ತೆ ಹಾಲಿನ ಮೋಸದ ಜಾಲಕ್ಕೆ ಸಿಲುಕಿ 300ಕ್ಕೂ ಅಧಿಕ ಅನ್ನದಾತರು ಪರದಾಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಹೊಸಪೇಟೆ ನಗರ ಠಾಣೆಗೆ ಆಗಮಿಸಿ ನೂರಾರು ರೈತರು ದೂರು ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ತುಮಕೂರು, ಬಾಗಲಕೋಟಿ, ಬಿಜಾಪುರ, ಗದಗ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ರೈತರು ಹೊಸಪೇಟೆಗೆ ಆಗಮಿಸಿ ಕತ್ತೆ ಖರೀದಿಗೆ ಹಣ ಹೂಡಿ ಒಡಂಬಡಿಕೆ ಬಾಂಡ್ ಸಮೇತ ದೂರು ಸಲ್ಲಿಸುತ್ತಿದ್ದಾರೆ.

ದೂರು ದಾಖಲಾಗಿ 7 ದಿನ ಕಳೆದ್ರೂ ಜಿನ್ನಿ ಮಿಲ್ಕ್ ಕಂಪನಿ ಎಂಡಿ ನೂತಲಪತಿ ಮುರಳಿ, ಮ್ಯಾನೇಜರ್ ಶಂಕರ ರೆಡ್ಡಿ ಪತ್ತೆಯಾಗಿಲ್ಲ. ವಿಜಯನಗರ ಪೊಲೀಸ್ ಇಲಾಖೆ ಪ್ರಕರಣ ಬೇಧಿಸಲು ಮೂರು ವಿಶೇಷ ತಂಡ ರಚಿಸಿದೆ. ಆಂಧ್ರದ ಅನಂತಪುರಂ, ನೆಲ್ಲೂರಿನಲ್ಲಿ ಎರಡು ತಂಡಗಳು ಶೋಧ ನಡೆಸುತ್ತಿವೆ. ಇನ್ನು ಹೊಸಪೇಟೆಯಲ್ಲೂ ಮತ್ತೊಂದು ವಿಶೇಷ ತನಿಖಾ ತಂಡ ಬೀಡು ಬಿಟ್ಟಿದೆ.

ಇದನ್ನೂ ಓದಿ: ನೂರಾರು ಕತ್ತೆ ಸೇಲ್‌ ಮಾಡಿದ್ದ ಕಂಪನಿಗೆ ಬೀಗ: ಕತ್ತೆಗಳನ್ನ ನಂಬಿ ಬಂಡವಾಳ ಹೂಡಿದ್ದವರು ಕಂಗಾಲು!

ಏನಿದು ಘಟನೆ?

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ಆರು ತಿಂಗಳ ಹಿಂದೆ ‘ಜಿನ್ನಿ ಮಿಲ್ಕ್’ ಎಂಬ ಕಂಪನಿಯು ಆಫೀಸ್‌ಯೊಂದನ್ನ ತೆರೆದು ಕತ್ತೆಗಳ ಸಾಕಾಣಿಕೆ ಮಾಡಿ, ಹೈನುಗಾರಿಕೆಯಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ದುಡಿಯಿರಿ ಎಂದು ಸ್ಲೋಗನ್ ಹಾಕಿ ರೈತರಿಗೆ ಕತ್ತೆಗಳನ್ನ ಮಾರಾಟ ಮಾಡಿತ್ತು. ರೈತರು ಅದನ್ನ ನಂಬಿ ಮೂರು ಲಕ್ಷ ರೂಗೆ ಮೂರು ಕತ್ತೆ ಹಾಗೂ ಮೂರು ಕತ್ತೆ ಮರಿಗಳನ್ನ ಖರೀದಿ ಮಾಡಿದ್ದರು. ಮೊದಲಿಗೆ ಒಂದು ಲೀಟರ್ ಕತ್ತೆ ಹಾಲಿಗೆ 2300 ರೂ ಕೊಟ್ಟು ಜಿನ್ನಿ ಕಂಪನಿಯೇ ಖರೀದಿ ಮಾಡುತ್ತಿತ್ತು. ಆದ್ರೆ, ಕಂಪನಿ ಟ್ರೇಡ್ ಲೈಸೆನ್ಸ್ ಹೊಂದಿಲ್ಲ ಎಂದು ವಿಜಯನಗರ ಜಿಲ್ಲಾಡಳಿತ ಆ ಆಫೀಸನ್ನ ಕ್ಲೋಸ್ ಮಾಡಿಸಿದೆ. ಲಕ್ಷಾಂತರ ಬಂಡವಾಳ ಹಾಕಿದ ಜನ್ರಿಗೆ ಜಿನ್ನಿ ಕಂಪನಿ ಮೋಸ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ.

ಕಂಪನಿಯ ಲಕ್ಷಾಂತರ ಬಂಡವಾಳ ಹಾಕಿದ ಜನ್ರಿಗೆ ಜಿನ್ನಿ ಕಂಪನಿ ಮೋಸ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿನ್ನಿ ಮಿಲ್ಕ್ ಕಂಪನಿ ವಿರುದ್ಧ ನೂರಾರು ರೈತರು ದೂರು ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್