AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Zoo: ಹಂಪಿ ಮೃಗಾಲಯದಲ್ಲಿ ಶೀಘ್ರದಲ್ಲೇ ರಾತ್ರಿ ಸಫಾರಿ; ರಾಜ್ಯದಲ್ಲೇ ಮೊದಲು

ಹಂಪಿ ಮೃಗಾಲಯವು 350 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, 700 ಎಕರೆ ಅರಣ್ಯ ಪ್ರದೇಶವನ್ನು ಹೊಂದಿದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಶೀಘ್ರದಲ್ಲೇ ರಾತ್ರಿ ಸಫಾರಿ ಆರಂಭವಾಗಲಿದೆ.

Hampi Zoo: ಹಂಪಿ ಮೃಗಾಲಯದಲ್ಲಿ ಶೀಘ್ರದಲ್ಲೇ ರಾತ್ರಿ ಸಫಾರಿ; ರಾಜ್ಯದಲ್ಲೇ ಮೊದಲು
ಹಂಪಿ ಮೃಗಾಲಯImage Credit source: Hospet.online
Follow us
TV9 Web
| Updated By: Ganapathi Sharma

Updated on: Jul 06, 2023 | 7:02 PM

ಬೆಂಗಳೂರು: ಕರ್ನಾಟಕದ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ, ವಿಜಯನಗರ ಜಿಲ್ಲೆಯ ಹಂಪಿ ಮೃಗಾಲಯದಲ್ಲಿ (Hampi zoo) ರಾತ್ರಿ ಸಫಾರಿ ಆರಂಭಿಸುವ ಸಿದ್ಧತೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಶೀಘ್ರದಲ್ಲೇ ರಾತ್ರಿ ಸಫಾರಿ (night safari) ಆರಂಭವಾಗಲಿದೆ. ಈ ಮೂಲಕ ರಾಜ್ಯದಲ್ಲೇ ಮೊದಲ ಬಾರಿ ರಾತ್ರಿ ಸಫಾರಿ ಆರಂಭಿಸಿದ ಹೆಗ್ಗಳಿಗೆ ಹಂಪಿಯ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಅಥವಾ ಹಂಪಿ ಮೃಗಾಲಯ ಪಾತ್ರವಾಗಲಿದೆ ಎಂದು ವರದಿಯಾಗಿದೆ.

ಕರ್ನಾಟಕದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮೃಗಾಲಯ ಪ್ರಾಧಿಕಾರ, ಮೈಸೂರು, ಇದರ ಸದಸ್ಯ ಕಾರ್ಯದರ್ಶಿ ರವಿ ಬಿಪಿ ಅವರು ಮೃಗಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಸುಳಿವು ನೀಡಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಹೊಸಪೇಟೆ ಮತ್ತು ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ತುಂಬಾ ಹೆಚ್ಚಾಗಿದೆ. ಆದ್ದರಿಂದ, ಮೃಗಾಲಯದಲ್ಲಿ ರಾತ್ರಿ ಸಫಾರಿ ನಡೆಸಬಹುದೇ ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೇಳಿದ್ದಾರೆ. ಅವರೂ ಇದಕ್ಕಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಹಂಪಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಸಬೇಕಾಗಿದೆ ಎಂದು ರವಿ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ರಾತ್ರಿ ಸಫಾರಿ ಆರಂಭಿಸಿದರೆ ಅದು ಹಂಪಿ ಮೃಗಾಲಯದಲ್ಲಿ ಆಗಬೇಕು. ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂಪಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು. ನಂತರ ರಾತ್ರಿ ಸಫಾರಿ ಆರಂಭಿಸಲು ವಿಶೇಷ ಅನುಮತಿ ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಇಡೀ ಕಲ್ಯಾಣ ಕರ್ನಾಟಕದಲ್ಲಿ ಸಫಾರಿಗೆ ಅವಕಾಶವಿರುವ ಏಕೈಕ ಮೃಗಾಲಯವಾಗಿರುವ ಹಂಪಿ ಝೂ ನಿರ್ಮಾಣವು 2013 ರಲ್ಲಿ ಪ್ರಾರಂಭವಾಗಿತ್ತು ಮತ್ತು 2017 ರಲ್ಲಿ ಪೂರ್ಣಗೊಂಡಿತು. ಆರಂಭದಲ್ಲಿ ಹುಲಿ, ಸಿಂಹ ಮತ್ತು ಚಿರತೆಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಏಕೈಕ ಮೃಗಾಲಯವಾಗಿ ಇದು ಗುರುತಿಸಿಕೊಂಡಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಹಂಪಿ ಮೃಗಾಲಯವು ಸುಸಜ್ಜಿತ ವನ್ಯಜೀವಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರವನ್ನು ಹೊಂದಿದ್ದು ಇದರಲ್ಲಿ, ಗಾಯಗೊಂಡ 20 ಕಾಡು ಕರಡಿಗಳಿಗೆ ಚಿಕಿತ್ಸೆ ನೀಡಿ ನಂತರ ಕಾಡಿಗೆ ಬಿಡಲಾಗಿದೆ ಎಂದು ರವಿ ಅವರು ತಿಳಿಸಿರುವುದನ್ನೂ ವರದಿಯಲ್ಲಿ ತಿಳಿಸಲಾಗಿದೆ.

ಹಂಪಿ ಮೃಗಾಲಯವು 350 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, 700 ಎಕರೆ ಅರಣ್ಯ ಪ್ರದೇಶವನ್ನು ಹೊಂದಿದೆ. ಆದರೆ, ಮೃಗಾಲಯವನ್ನು ಇಡೀ ಅರಣ್ಯ ಭೂಮಿಗೆ ವಿಸ್ತರಿಸುವ ಯೋಜನೆ ಇಲ್ಲ. ಉಳಿದ ಭೂಮಿಯನ್ನು ಬಫರ್ ವಲಯವಾಗಿ ಉಳಿಸಿಕೊಳ್ಳಲಾಗುವುದು. ಈಗಿರುವ 350 ಎಕರೆ ಜಾಗದಲ್ಲಿ 60 ಕೋಟಿ ರೂಪಾಯಿ ಖರ್ಚು ಮಾಡಿ ಹಂಪಿ ಮೃಗಾಲಯವನ್ನು ಅತ್ಯುತ್ತಮ ಮೃಗಾಲಯವನ್ನಾಗಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು