AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಭಾರಿ ಮಳೆ, ಪ್ರವಾಹದಿಂದ ಹಂಪಿಯ 12 ಸ್ಮಾರಕಗಳು ಮುಳುಗಡೆ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ವಿಜಯನಗರ ಜಿಲ್ಲೆಯ ಹೊಟಪೇಟೆಯಲ್ಲಿಯೂ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗುತ್ತಿದ್ದು, ಪ್ರಸಿದ್ಧ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ಸುಮಾರು 12 ಸ್ಮಾರಕಗಳು ಮುಳುಗಡೆಯಾಗಿವೆ.

ವಿಜಯನಗರ: ಭಾರಿ ಮಳೆ, ಪ್ರವಾಹದಿಂದ ಹಂಪಿಯ 12 ಸ್ಮಾರಕಗಳು ಮುಳುಗಡೆ
ಹಂಪಿಯ ಸ್ಮಾರಕಗಳು ಮುಳುಗಡೆ
Ganapathi Sharma
|

Updated on:Jul 31, 2024 | 8:15 AM

Share

ಹೊಸಪೇಟೆ, ಜುಲೈ 31: ಭಾರಿ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ಪ್ರವಾಸಿಗರಿಗೆ ವಿಜಯನಗರ ಆಡಳಿತ ಎಚ್ಚರಿಕೆ ನೀಡಿದೆ.

ಯಾವೆಲ್ಲ ಸ್ಮಾರಕಗಳು ಮುಳುಗಡೆ?

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಸದ್ಯ ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.

ಭಾರಿ ಮಳೆಯಾದಾಗ ಅಣೆಕಟ್ಟಿನಿಂದ ನೀರು ಹೊರಬಿಡಲಾಗುತ್ತದೆ. ಸದ್ಯ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಪ್ರವಾಹಕ್ಕೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿದ್ದೇನೆ ಮತ್ತು ಜನರು ಪ್ರವಾಹಪೀಡಿತ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ವಿಜಯನಗರ ಡಿಸಿ ಎಂಎಸ್ ದಿವಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ವಯನಾಡು ಭೂಕುಸಿತ: ಕರ್ನಾಟಕದ ನಾಲ್ವರು ಸಾವು, ಮಂಡ್ಯದ ಮಹಿಳೆ ನಾಪತ್ತೆ

ಪ್ರವಾಸಿಗರೇ ಗಮನಿಸಿ: ಸೂಚನೆ ಪಾಲಿಸದಿದ್ದರೆ ಕಾನೂನು ಕ್ರಮ

ಕಳೆದ 4-5 ದಿನಗಳಿಂದ ಜಲಾವೃತಗೊಂಡ ಸ್ಮಾರಕಗಳ ದರ್ಶನಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಿಲ್ಲ. ಪ್ರವಾಸಿಗರು ಸೂಚನೆಗಳನ್ನು ಪಾಲಿಸದಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Wed, 31 July 24