AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!

ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ದೂರಿನ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರ ಬಲೆಗೆ ಪಿಡಬ್ಲ್ಯುಡಿ ಅಧಿಕಾರಿಗಳು ಬಿದ್ದಿದ್ದಾರೆ.

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!
ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು
ಭಾವನಾ ಹೆಗಡೆ
|

Updated on: Feb 11, 2026 | 11:08 AM

Share

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ.

ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್ ಹಾಗೂ ಅಕೌಂಟೆಂಟ್ ಮಾರುತಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಮಹೇಶ್ ಹಲಗೇರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್ ಛಲವಾದಿ ನೇತೃತ್ವದಲ್ಲಿ ಪಿಐಗಳಾದ ರಾಜೇಶ್ ಲಮಾಣಿ, ಅಮರೇಶ್ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಟ್ರ್ಯಾಪ್ ನಡೆಸಿ, ಲಂಚದ ಹಣ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಮೊದಲೂ ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕಿದ್ದ ಅಧಿಕಾರಿಗಳು

ಕಳೆದ ತಿಂಗಳು ಕಲಬುರಗಿಯಲ್ಲಿ ಕಮಲಾಪುರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಶಶಿಕುಮಾರ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದರು. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಪುಟ್ಟ ಕಿಶನ್ ರಾಥೋಡ್ ಅವರಿಂದ 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿತ್ತು. ಈ ಕುರಿತು ಕಿಶನ್ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಹಣ ಸ್ವೀಕರಿಸುವ ಕ್ಷಣದಲ್ಲೇ ಶಶಿಕುಮಾರ್ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು.

ಇದನ್ನೂ ಓದಿ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಇನ್ನೊಂದು ಪ್ರಕರಣದಲ್ಲಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಪ್ರಕರಣದಲ್ಲಿ ಬೆದರಿಕೆ ಹಾಕಿ ಒಟ್ಟು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದರೆಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಈಗಾಗಲೇ 1 ಲಕ್ಷ ರೂ. ಪಡೆದಿದ್ದ ಅವರು, ಉಳಿದ ಹಣ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ