AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಗ್ಯಾರಂಟಿಗಳನ್ನು ಕೈ ಬಿಡಬೇಕೆಂದು ಸಿದ್ದರಾಮಯ್ಯಗೆ ಮನವಿ ಮಾಡ್ತೇವೆ: ಕಾಂಗ್ರೆಸ್​ ಶಾಸಕ

ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳಿದ್ದ ಕಾಂಗ್ರೆಸ್​ ಶಾಸಕ ಗವಿಯಪ್ಪ ಸರ್ಕಾರ ಮುಜುಗರ ಪಡುವಂತೆ ಮಾಡಿದ್ದರು. ಇದೀಗ, ಐದು ಗ್ಯಾರಂಟಿ ಯೋಜನೆಗಳಲ್ಲಿ ಎರಡನ್ನು ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

2 ಗ್ಯಾರಂಟಿಗಳನ್ನು ಕೈ ಬಿಡಬೇಕೆಂದು ಸಿದ್ದರಾಮಯ್ಯಗೆ ಮನವಿ ಮಾಡ್ತೇವೆ: ಕಾಂಗ್ರೆಸ್​ ಶಾಸಕ
ಶಾಸಕ ಗವಿಯಪ್ಪ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Nov 26, 2024 | 11:53 AM

Share

ವಿಜಯನಗರ, ನವೆಂಬರ್ 26: ಪಂಚ ಗ್ಯಾರಂಟಿಗಳು (Guarantee) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ 2.O ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್​ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.

ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.

ಅನುದಾನ ನೀಡಿಲ್ಲ ಎಂದಿದ್ದ ಗವಿಯಪ್ಪ

ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕ ಗವಿಯಪ್ಪ ಹೇಳಿದ್ದರು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಸಕ ಹೆಚ್​ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದರು. ವಿಜಯನಗರ ಕ್ಷೇತ್ರಕ್ಕೆ ಅಂದಾಜು 150 ಕೋಟಿ ರೂಪಾಯಿ ಅನುದಾನ ಬಂದರೂ ಶಾಸಕ ಗವಿಯಪ್ಪ ಸುಳ್ಳು ಹೇಳುತ್ತಾರೆ ಎಂದು ಇಮಾಮ್ ನಿಯಾಜಿ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಗ್ಯಾರಂಟಿ ಜಾರಿಯಾಗುತ್ತಾ? ಚರ್ಚೆಗೆ ಗ್ರಾಸವಾದ ವಿದ್ಯಾರ್ಥಿ ಪ್ರಶ್ನೆಗೆ ಡಿಸಿಎಂ ಕೊಟ್ಟ ಉತ್ತರ

ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ನಡುವೆಯೇ ಸ್ವತಃ ಕಾಂಗ್ರೆಸ್​ ಪಕ್ಷದ ಶಾಸಕರ ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Tue, 26 November 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ