AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗತ್ಯವಾದ್ರೆ ರಾಜಕೀಯ ಬಿಡ್ತೀನಿ, ಪಂಚಮಸಾಲಿ ಸಮುದಾಯ ಬಿಡಲ್ಲ: ವಿಜಯಾನಂದ ಕಾಶಪ್ಪನವರ್

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಹೆಸರು ಘೋಷಣೆಯಾಗಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ವಿಚಾರವನ್ನು ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಿದರು.

ಅಗತ್ಯವಾದ್ರೆ ರಾಜಕೀಯ ಬಿಡ್ತೀನಿ, ಪಂಚಮಸಾಲಿ ಸಮುದಾಯ ಬಿಡಲ್ಲ: ವಿಜಯಾನಂದ ಕಾಶಪ್ಪನವರ್
ವಿಜಯಾನಂದ ಕಾಶಪ್ಪನವರ್
TV9 Web
| Updated By: ganapathi bhat|

Updated on:Apr 06, 2022 | 7:51 PM

Share

ಬೆಂಗಳೂರು: ಪಂಚಮಸಾಲಿಯವರು ಗುರಿ ಇಟ್ಟರೆ ಅದ್ಯಾವುದೂ ತಪ್ಪಲ್ಲ. ಮಳೆ ಬರಲಿ, ಏನೇ ಬರಲಿ ಯಾರೂ ಇಲ್ಲಿಂದ ಕದಲಬೇಡಿ. ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲೇಬೇಕು. ನಮ್ಮ ಹೋರಾಟದ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಯಬೇಕು. 27 ವರ್ಷಗಳು ಕಳೆದರೂ ನಮ್ಮ ಬೇಡಿಕೆ ಈಡೇರಲಿಲ್ಲ. ಎಲ್ಲಾ ಸರ್ಕಾರಗಳು ನಮ್ಮ ಮೂಗಿಗೆ ತುಪ್ಪ ಹಚ್ಚಿದ್ದಾರೆ. ಈಗ ನಮಗೆ ನ್ಯಾಯ ಸಿಗುವವರೆಗೂ ಹಿಂದೆ ಸರಿಯಬಾರದು ಎಂದು ಪಂಚಮಸಾಲಿ ಬೃಹತ್ ಸಮಾವೇಶದಲ್ಲಿ ವಿಜಯಾನಂದ ಕಾಶಪ್ಪನವರ್ ಹೇಳಿದರು.

ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸುವಂತೆ ಕಳೆದ ಕೆಲವಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಸುಮಾರು 700 ಕಿ.ಮೀ. ಪಾದಯಾತ್ರೆ ನಡೆಸಿದ ಬಳಿಕ ಇಂದು (ಫೆ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಸಮಾರಂಭ ಆಯೋಜಿಸಲಾಗಿದೆ. ಸಮಾರಂಭದಲ್ಲಿ ವಿಜಯಾನಂದ ಕಾಶಪ್ಪನವರ್ ಮಾತನಾಡಿದರು.

ಮೀಸಲಾತಿ ಸಿಗುವವರೆಗೆ ಸರ್ಕಾರವನ್ನು ಸುಮ್ಮನೆ ಬಿಡಬಾರದು. ಈ ಹೋರಾಟಕ್ಕೆ 2 ಪಂಚಮಸಾಲಿ ಪೀಠಗಳು ಒಂದಾಗಿವೆ. ಇಂದು ಪೂಜ್ಯರು ಹೇಳಿದಂತೆ ನಾವು ಮುಂದೆ ಸಾಗೋಣ. ವಿಧಾನಸೌಧದ ಮುಂದೆ ಧರಣಿ ಸತ್ಯಾಗ್ರಹ ಮಾಡೋಣ. ಮಾರ್ಚ್ 4ರವರೆಗೆ ಧರಣಿ ಸತ್ಯಾಗ್ರಹ ಮಾಡೋಣ. ನಂತರ ಉಪವಾಸ ಸತ್ಯಾಗ್ರಹ ಮಾಡೋಣ ಎಂದು ವಿಜಯಾನಂದ ಕಾಶಪ್ಪನವರ್ ಸಮುದಾಯಕ್ಕೆ ಕರೆನೀಡಿದರು.

ಅಗತ್ಯ ಬಿದ್ದರೆ ರಾಜಕೀಯ ಬೇಕಾದರೂ ತೊರೆಯುತ್ತೇನೆ. ಆದರೆ ಪಂಚಮಸಾಲಿ ಸಮುದಾಯವನ್ನು ಮಾತ್ರ ಬಿಡುವುದಿಲ್ಲ. ಬೇಕೇ ಬೇಕು ನಮಗೆ ಮೀಸಲಾತಿ ಬೇಕು ಎಂದು ಅವರು ಘೋಷಣೆ ಕೂಗಿದರು.

ಸಮಾವೇಶದ ಕೊನೆಗೆ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಹೆಸರು ಘೋಷಣೆಯಾಗಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ವಿಚಾರವನ್ನು ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಿದರು.

ಜುಲೈ 23ರಿಂದ ಅಕ್ಟೋಬರ್ 23ರವರೆಗೆ ರಥಯಾತ್ರೆ ಸರ್ಕಾರದ ನಿಲುವು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸಮಾವೇಶದ ಬಳಿಕ ವಿಧಾನಸೌಧ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ. ನಾನು ಮಠ ಕಟ್ಟಿಲ್ಲ ಎಂದು ಸಮುದಾಯದವರು ಹೇಳ್ತಿದ್ದರು. ಆದರೆ ನಿಮಗಾಗಿ ಪಾದಯಾತ್ರೆ, ಹೋರಾಟ ಮಾಡಿದ್ದೇನೆ. ಮೀಸಲಾತಿ ನೀಡಿದ್ದಕ್ಕೆ ಡಾ.ಅಂಬೇಡ್ಕರ್ ಇತಿಹಾಸದಲ್ಲಿದ್ದಾರೆ. ಇನ್ಮುಂದೆ ಮಠವನ್ನು ಕಟ್ಟುವ ಕೆಲಸವನ್ನು ಕೂಡ ಮಾಡುತ್ತೇನೆ. ಜುಲೈ 23-ಅಕ್ಟೋಬರ್ 23ರವರೆಗೆ ರಥಯಾತ್ರೆ ಮಾಡುತ್ತೇನೆ ಎಂದು ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ ತಿಳಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೂ ನ್ಯಾಯ ಸಿಗಬೇಕು. ಇತರೆ ಸಮುದಾಯಗಳಿಗೂ ನ್ಯಾಯ ಸಿಗಬೇಕಾಗಿದೆ. ಪಂಚಮಸಾಲಿಗರು ಒಗ್ಗಟ್ಟಾಗಿ ಇರುವ ಸಂದೇಶ ರವಾನೆ ಆಗಬೇಕಿದೆ. ಈ ಸಮಾವೇಶದ ಮೂಲಕ ಪ್ರಧಾನಿ ಮೋದಿಗೆ ಒಗ್ಗಟ್ಟಿನ ಸಂದೇಶ ರವಾನೆಯಾಗಿದೆ. ಸಮಾಜದ ವಿಚಾರದಲ್ಲಿ ನಾವೆಲ್ಲಾ ಒಂದಾಗುತ್ತೇವೆ. ರಾಣಿ ಚೆನ್ನಮ್ಮನ ಮಕ್ಕಳು ಒಗ್ಗಟ್ಟಾಗಿದ್ದೇವೆಂದು ಸಾಬೀತಾಗಿದೆ. ವಿಜಯಪುರದಿಂದ ಅತಿ ಹೆಚ್ಚಿನ ಸಂಖ್ಯೆಯ ಜನ ಬಂದಿದ್ದಾರೆ. ಯತ್ನಾಳ್, ಕಾಶಪ್ಪನವರ ಏನು ಹೇಳುತ್ತಾರೋ ನೋಡೋಣ. ಅವರು ಹೇಳಿದ್ದನ್ನು ಕೇಳಿಕೊಂಡು ಮುಂದೆ ಸಾಗೋಣ ಎಂದು ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ ಹೇಳಿದ್ದಾರೆ.

ಇದನ್ನೂ ಓದಿ: ನನಗೆ ಸಮಾಜವೇ ತಂದೆ-ತಾಯಿ, ಸಮಾಜವೇ ಗುರು: ಪಂಚಮಸಾಲಿ ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ

ಪಂಚಮಸಾಲಿ ಸಮಾವೇಶ: ಯಾರೂ ಕೂಡ ರಾಜ್ಯ ಸರ್ಕಾರಕ್ಕೆ ಗಡುವು ನೀಡಬಾರದು: ಕೈಮುಗಿದು ಕೇಳಿಕೊಂಡ ಆರ್. ಅಶೋಕ್

Published On - 2:39 pm, Sun, 21 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!