ಪಕ್ಷಕ್ಕೆ‌ ರುಂಡ ಕೊಡ್ತೀನಿ, ವೈಯಕ್ತಿಕ ಬಂದರೆ ಯಾವ‌ ಮಗನಿಗೂ ಬಗ್ಗೋದಿಲ್ಲ: ವಿಜಯಾನಂದ‌ ಕಾಶಪ್ಪನವರ್

ಬಾಗಲಕೋಟೆ ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯಾನಂದ, ಪಕ್ಷಕ್ಕೆ‌ ಬೆಲೆ‌ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ‌ ಮಗನಿಗೂ ನಾನು ಬಗ್ಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ತನು, ಮನ, ಧನದಿಂದ ದುಡಿದವರಿಗೆ ಅವಕಾಶ ಕೊಡಬೇಕು. ನನ್ನ ಪತ್ನಿ ವೀಣಾ ಕಾಶಪ್ಪನವರ್​ ಕಾಂಗ್ರೆಸ್ ಪಕ್ಷಕ್ಕಾಗಿ ‌ದುಡಿದಿದ್ದಾರೆ ಎಂದಿದ್ದಾರೆ.

ಪಕ್ಷಕ್ಕೆ‌ ರುಂಡ ಕೊಡ್ತೀನಿ, ವೈಯಕ್ತಿಕ ಬಂದರೆ ಯಾವ‌ ಮಗನಿಗೂ ಬಗ್ಗೋದಿಲ್ಲ: ವಿಜಯಾನಂದ‌ ಕಾಶಪ್ಪನವರ್
ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Mar 22, 2024 | 4:54 PM

ಬಾಗಲಕೋಟೆ, ಮಾರ್ಚ್​​ 22: ಪಕ್ಷಕ್ಕೆ‌ ಬೆಲೆ‌ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ‌ ಮಗನಿಗೂ ನಾನು ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ (Vijayanand Kashappanavar) ಹೇಳಿದ್ದಾರೆ. ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಂಗ ಬಂದರೆ ರಾಜಕೀಯದಲ್ಲಿ ಯಾರು ಏನಾಗುತ್ತಾರೆ, ಯಾರಿಗೆ ಗೊತ್ತಿದೆ. 50 ವರ್ಷ ಕಾಂಗ್ರೆಸ್​ ಪಕ್ಷದಲ್ಲಿ ಇದ್ದವರಿಗೆ ತಾಕತ್ ಪ್ರಶ್ನೆ ಮಾಡ್ತೀರಿ. ನಮ್ಮ ಕಾರ್ಯಕರ್ತರಿಗೆ ಸಭೆಗೆ ಹೋಗಬೇಡಿ ಎಂದು ಧಮ್ಕಿ ಹಾಕಿದ್ದಾರೆ ಎಂದು ಸಚಿವರ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು. ತುಮ್ಹಾರೇ ಧಮ್ಕಿ ನಹೀ ಚಲೇಗಾ ಬಚ್ಚಾ ಎಂದ ಶಿವಾನಂದ‌ ಪಾಟೀಲ್​ಗೆ‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಪಕ್ಷಕ್ಕಾಗಿ ತನು, ಮನ, ಧನದಿಂದ ದುಡಿದವರಿಗೆ ಅವಕಾಶ ಕೊಡಬೇಕು. ನನ್ನ ಪತ್ನಿ ವೀಣಾ ಕಾಶಪ್ಪನವರ್​ ಕಾಂಗ್ರೆಸ್ ಪಕ್ಷಕ್ಕಾಗಿ ‌ದುಡಿದಿದ್ದಾರೆ. ಆಕೆ ಜಿ.ಪಂ. ಅಧ್ಯಕ್ಷೆಯಾಗುವಾಗಲೂ ನಾನೊಬ್ಬನೇ ಗಂಡು ನಿಂತವನು. 2019ರಲ್ಲಿ ಯಾರೂ ಎಂಪಿ ಎಲೆಕ್ಷನ್​ಗೆ ನಿಲ್ಲೋಕೆ ಮುಂದೆ ಬರಲಿಲ್ಲ. ಮೋದಿ ಅಲೆ ಅಂದರು, ನಮ್ಮ ಮುಂದೆ ಯಾವ ಅಲೆ ಕೂಡ ನಡೆಯಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವೀಣಾ ಕಾಶಪ್ಪನವರ್‌ಗೆ ಬಾಗಲಕೋಟೆ ಟಿಕೆಟ್‌ ಮಿಸ್? ಕಾಂಗ್ರೆಸ್‌ ವಿರುದ್ಧ ಬೆಂಬಲಿಗರ ಧರಣಿ!

ಜಾತ್ಯಾತೀತ ನಿಲುವಿನ ಮೇಲೆ‌ ನಿಂತಿರುವ ಪಕ್ಷ ಕಾಂಗ್ರೆಸ್. ಇವತ್ತು ನಮಗೆ ‌ನಿಮಗೆ ಎಲ್ಲರಿಗೂ ನೋವಾಗಿದೆ. ಈ ವೇದಿಕೆ ಕಾಂಗ್ರೆಸ್ ಪಕ್ಷ ಹಾಗೂ ಯಾರ ವಿರುದ್ದ ಅಲ್ಲ. ನಮಗೆ ಬೆಂಬಲವಾಗಿ‌ ಗಟ್ಟಿಯಾಗಿ ನಿಂತ ನಿಮ್ಮೆಲ್ಲರ ಪಾದಕ್ಕೆ ನನ್ನ ನಮನಗಳು. ನಮ್ಮ ಜಿಲ್ಲೆಯಲ್ಲಿ ಬಹಳ ಜನ ಆಕಾಂಕ್ಷಿಳಿದ್ದೆವು. ಈ‌ ಜಿಲ್ಲೆಯಲ್ಲಿ ನಾವು ಹುಟ್ಟಿ ಬೆಳೆದಿದ್ದೇವೆ. ಐದು ಜನ ಕಾಂಗ್ರೆಸ್ ಶಾಸಕರಲ್ಲಿ ನಮ್ಮನ್ನು ಹಿರಿಯರು ಮರೆತಿದ್ದಾರೆ ಅನಿಸುತ್ತಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳು ಸಾಲುಗಟ್ಟಿ ನಿಂತಿದ್ದಾರೆ, ಬಿಜೆಪಿಯ ಗದ್ದಿಗೌಡರಗೆ 5ನೇ ಬಾರಿ ಲಕ್ಕು ಕುದುರುತ್ತದಾ?

ನನ್ನ ಅಭಿಪ್ರಾಯ ಕೂಡ ಅಷ್ಟೇ ಮುಖ್ಯವಾಗಿದೆ. ಕೇವಲ ನನ್ನ ಪತ್ನಿ, ಕಾಶಪ್ಪನವರ ಕುಟುಂಬದ ಸೊಸೆ ಅಂತ ಅವರ ಹೆಸರು ಹೇಳೋದಲ್ಲ. ಯಾರು ಪಕ್ಷಕ್ಕಾಗಿ ತನು, ಮನ, ಧನದಿಂದ ದುಡಿತಾರೆ ಅವರಿಗೆ ಅವಕಾಶ ಕೊಡಬೇಕು. ಇಲ್ಲಿ ಕುಟುಂಬ ರಾಜಕಾರಣ ಮಾಡಲು ಬಂದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:49 pm, Fri, 22 March 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!