AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಯ ಮೇಲೆ ರಾಜಕಾರಣಿಯ ಟ್ಯಾಟೂ ಹಾಕಿಸಿಕೊಂಡ ವಿಜಯಪುರ ಅಭಿಮಾನಿ!

ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಮುದ್ದಣ್ಣ ಪರೀಟ್ ಎಂಬ 20 ವರ್ಷದ ಯುವಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಚಿತ್ರವನ್ನು ಎದೆಯ ಮೇಲೆ ಬರೆಸಿಕೊಂಡಿದ್ದಾನೆ.

ಎದೆಯ ಮೇಲೆ ರಾಜಕಾರಣಿಯ ಟ್ಯಾಟೂ ಹಾಕಿಸಿಕೊಂಡ ವಿಜಯಪುರ ಅಭಿಮಾನಿ!
ಟ್ಯಾಟೂ ಹಾಕಿಸಿಕೊಂಡ ಯುವಕ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Dec 24, 2020 | 9:46 AM

Share

ವಿಜಯಪುರ: ಇತ್ತೀಚಿಗೆ ಯುವಕರಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಾಗುತ್ತಿದೆ. ಚಿತ್ರ ವಿಚಿತ್ರ ಹಚ್ಚೆಗಳನ್ನು ಯುವಕ-ಯುವತಿಯರು ತಮ್ಮ ದೇಹದ ಮೇಲೆ ಹಾಕಿಕೊಳ್ಳುತ್ತಾರೆ. ಕೆಲವರು ದೇವರ ಫೋಟೋವನ್ನು ಟ್ಯಾಟೂ ಆಗಿ ಹಾಕಿಕೊಂಡರೆ, ಇನ್ನೂ ಕೆಲವರು ಸಿನೆಮಾ ನಟ ನಟಿಯರ ಭಾವಚಿತ್ರವನ್ನು ಟ್ಯಾಟೂ ಆಗಿ ಬಳಸುತ್ತಾರೆ.

ಆದರೆ ಇಲ್ಲೋರ್ವ ವ್ಯಕ್ತಿ ಒಂದು ಹೆಜ್ಜೆ ಮುಂದೆ ಹೋಗಿ, ವಿಧಾನ ಪರಿಷತ್ ಸದಸ್ಯರ ಚಿತ್ರವನ್ನು ಎದೆಯ ಮೇಲೆ ಟ್ಯಾಟೂ ಆಗಿ ಹಾಕಿಕೊಂಡಿದ್ದಾನೆ. ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಮುದ್ದಣ್ಣ ಪರೀಟ್ ಎಂಬ 20 ವರ್ಷದ ಯುವಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಚಿತ್ರವನ್ನು ಎದೆಯ ಮೇಲೆ ಬರೆಸಿಕೊಂಡಿದ್ದಾನೆ.

ಸುನೀಲಗೌಡ ಪಾಟೀಲ್ ಅವರ ಕಟ್ಟಾ ಬೆಂಬಲಿಗ ಮುದ್ದಣ್ಣ ಪರೀಟ್. ಸುನೀಲಗೌಡ ಅವರ ಮೇಲಿನ ಅಭಿಮಾನವನ್ನು ಎದೆಯ ಮೇಲೆ ಟ್ಯಾಟೂ ಹಾಕಿಕೊಳ್ಳುವ ಮೂಲಕ ತೋರಿಸಿದ್ದಾನೆ. ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಪಟ್ಟಣದಲ್ಲಿನ ಟ್ಯಾಟೂ ಶಾಪ್​ನಲ್ಲಿ ₹ 9,000 ಖರ್ಚು ಮಾಡಿ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಟ್ಯಾಟೂ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು, ಅವೆಲ್ಲಾ ಇದೀಗ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಮುದ್ದಣ್ಣ ಪರೀಟ್ ಅಭಿಮಾನಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಾಮೆಂಟ್ಸ್​ ಬಂದಿವೆ. ನಾನು ಸುನೀಲಗೌಡ ಪಾಟೀಲರ ಅಭಿಮಾನಿ. ಕೊನೆಯವರೆಗೂ ಅವರು ನನ್ನ ಎದೆಯ ಮೇಲೆ ಟ್ಯಾಟೂ ಮೂಲಕ ಇರುತ್ತಾರೆ ಎಂಬುದು ಮುದ್ದಣ್ಣನ ಮಾತಾಗಿದೆ.

‘ವಿದೇಶಿಗರು ಕನ್ನಡ ಅಕ್ಷರಗಳನ್ನು ಟ್ಯಾಟೂ ಹಾಕಿಸಿಕೊಂಡಾಗ ಎನ್ನೆದೆ ಉಬ್ಬುವುದು!’

Published On - 6:43 am, Thu, 24 December 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್