AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ನ್ಯೂಸ್: ವಿಜಯಪುರ-ಮಂಗಳೂರು ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಣೆ

Vijayapura Mangaluru Express Train: ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ವಿಜಯಪುರ-ಮಂಗಳೂರು ವಿಶೇಷ ರೈಲು ಸೇವೆಯನ್ನು ವರ್ಷಾಂತ್ಯದವರೆಗೂ ನೈಋತ್ಯ ರೈಲ್ವೆ ಇಲಾಖೆ ವಿಸ್ತರಣೆ ಮಾಡಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳಲ್ಲಿ ಯಾವುದೇ ಬದಲಾವಣೆ ಮಾಡದೇ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.

ಪ್ರಯಾಣಿಕರಿಗೆ ಗುಡ್​ನ್ಯೂಸ್: ವಿಜಯಪುರ-ಮಂಗಳೂರು ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಣೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Sep 25, 2023 | 7:23 AM

Share

ಬೆಂಗಳೂರು, ಸೆ.25: ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ವಿಜಯಪುರ-ಮಂಗಳೂರು ವಿಶೇಷ ರೈಲು ಸೇವೆಯನ್ನು (Vijayapura Mangaluru Express Train) ವರ್ಷಾಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳಲ್ಲಿ ಯಾವುದೇ ಬದಲಾವಣೆ ಮಾಡದೇ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ (South Western Railway) ಪ್ರಕಟಣೆ ಹೊರಡಿಸಿದೆ. ಹೀಗಾಗಿ ಈಗಿರುವ ವೇಳಾಪಟ್ಟಿಯಲ್ಲಿ ಮುಂದಿನ ಆದೇಶದ ವರೆಗೂ ರೈಲು ಓಡಲಿದೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆ ಈ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 30, 2023 ರವರೆಗೆ ಪ್ರತಿದಿನ ಓಡಿಸುವಂತೆ ಈ ಮೊದಲು ಸೂಚಿಸಲಾಗಿತ್ತು. ಅದನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಇನ್ನು ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ಅನ್ನು ಅಕ್ಟೋಬರ್ 1 ರವರೆಗೆ ಪ್ರತಿದಿನ ಓಡಿಸುವಂತೆ ಈ ಮೊದಲೇ ತಿಳಿಸಲಾಗಿತ್ತು. ಅದನ್ನು ಅಕ್ಟೋಬರ್ 2 ರಿಂದ ಜನವರಿ 1, 2024 ರವರೆಗೆ ವಿಸ್ತರಿಸಲಾಗುತ್ತಿದೆ.

ಇದನ್ನೂ ಓದಿ: ಒಂಬತ್ತು ವಂದೇಭಾರತ್ ರೈಲುಗಳಿಗೆ ಚಾಲನೆ ನೀಡಿದ ಮೋದಿ; ಬೆಂಗಳೂರು ಹೈದರಾಬಾದ್ ರೈಲು ವೇಳಾಪಟ್ಟಿ, ದರ ಇತ್ಯಾದಿ ವಿವರ

ರೈಲುಗಳ ಸಂಖ್ಯೆ 22497/22498 ಶ್ರೀ ಗಂಗಾನಗರ ಮತ್ತು ತಿರುಚಿರಾಪಳ್ಳಿ ನಿಲ್ದಾಣಗಳ ನಡುವೆ ಸಂಚರಿಸುತ್ತಿರುವ ಹಮ್ಸಫರ್ ಸಾಪ್ತಾಹಿಕ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೇಸ್‌ ರೈಲುಗಳಿಗೆ ನಾಗೌರ್ ನಿಲ್ದಾಣದಲ್ಲಿ ಪ್ರಾಯೋಗಿಕ ಆಧಾರ ಮೇಲೆ ಹೆಚ್ಚುವರಿ ನಿಲುಗಡೆಯನ್ನು ಮುಂದಿನ ಆದೇಶ ಬರುವರೆಗೆ ನೀಡಲು ವಾಯುವ್ಯ ರೈಲ್ವೆಯೂ ಸೂಚಿಸಿದೆ.

ಸೆಪ್ಟೆಂಬರ್ 25 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 22497 ಶ್ರೀ ಗಂಗಾನಗರ -ತಿರುಚಿರಾಪಳ್ಳಿ ಹಮ್ಸಫರ್ ಸಾಪ್ತಾಹಿಕ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೇಸ್‌ ರೈಲಿಗೆ ನಾಗೌರ್ ನಿಲ್ದಾಣದಲ್ಲಿ ಪ್ರಾಯೋಗಿಕ ನಿಲುಗಡೆಗೆ ಅವಕಾಶ ನೀಡಲಾಗಿದೆ. ಈ ರೈಲು ನಾಗೌರ್‌ ನಿಲ್ದಾಣಕ್ಕೆ ರಾತ್ರಿ 9.03 ಗಂಟೆಗೆ ಆಗಮಿಸಿ 9.05 ಗಂಟೆಗೆ ಹೊರಡುತ್ತದೆ.

ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 22498 ತಿರುಚಿರಾಪಳ್ಳಿ- ಶ್ರೀ ಗಂಗಾನಗರ ಹಮ್ಸಫರ್ ಸಾಪ್ತಾಹಿಕ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೇಸ್‌ ರೈಲಿಗೆ ನಾಗೌರ್ ನಿಲ್ದಾಣದಲ್ಲಿ ಪ್ರಾಯೋಗಿಕ ನಿಲುಗಡೆಗೆ ಅವಕಾಶ ನೀಡಲಾಗಿದೆ. ಈ ರೈಲು ನಾಗೌರ್‌ ನಿಲ್ದಾಣಕ್ಕೆ ಬೆಳಗಿನ ಜಾವ 04.28ಕ್ಕೆ ಆಗಮಿಸಿ 04.30 ಗಂಟೆಗೆ ನಿರ್ಗಮಿಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:23 am, Mon, 25 September 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ