ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ

| Updated By: ಗಂಗಾಧರ​ ಬ. ಸಾಬೋಜಿ

Updated on: May 27, 2024 | 10:47 PM

ಮಗಳ ಪ್ರಿಯಕರನಿಗೆ ಪೋಷಕರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸುಟ್ಟಗಾಯಗಳಿಂದ ಬಳಲ್ತಿರುವ ಯುವಕ ರಾಹುಲ್ ಬಿರಾದಾರ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯುವಕ ಹಾಗೂ ಯುವತಿ ಮನೆಯವರಿಬ್ಬರಿಂದಲೂ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ
ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ
Follow us on

ವಿಜಯಪುರ, ಮೇ 27: ಮಗಳನ್ನು ಪ್ರೀತಿಸಿದ್ದ ಯುವಕನಿಗೆ (lover) ಪೆಟ್ರೋಲ್ ಸುರಿದು ಬೆಂಕಿ (fire) ಹಚ್ಚಿದ್ದಾರೆ ಎಂದು ಯುವತಿ ಪೋಷಕರ ವಿರುದ್ಧ ಆರೋಪ ಕೇಳಿಬಂದಿದೆ. ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ರಾಹುಲ್ ಬಿರಾದಾರ್​ಗೆ ಸುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಐಶ್ವರ್ಯ ಮದರಿ ತಂದೆ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಂದ‌ ಕೃತ್ಯವೆಂದ ಆರೋಪಿಸಲಾಗಿದೆ.

ರಾಹುಲ್​​ಗೆ ಬೆಂಕಿ ಹಚ್ಚುವ ವೇಳೆ ಯುವತಿಯ ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಗೂ ಬೆಂಕಿ ತಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ರಾಹುಲ್ ಹಾಗೂ ಐಶ್ವರ್ಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಎರಡೂ ಮನೆಯವರಿಗೆ ಗೊತ್ತಾಗಿ ಕಳೆದ ಒಂದು ವರ್ಷದ ಹಿಂದೆಯೇ ಹಿರಿಯರು ರಾಜಿ ಮಾಡಿದ್ದರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಲವರ್ಸ್ ಬೈಕ್​​ಗೆ ಲಾರಿ ಡಿಕ್ಕಿಯಾಗಿ ಪ್ರಿಯಕರ ಸಾವು, ಬಸ್​ ಡಿಕ್ಕಿಯಾಗಿ ರೈತರಿಬ್ಬರ ದುರ್ಮರಣ

ಆಗ ಐಶ್ವರ್ಯ ಪ್ರಿಯಕರ ರಾಹುಲ್​​ನನ್ನು ಮದುವೆ ಆಗಲ್ಲ, ಪೋಷಕರು ಹೇಳಿದ ಯುವಕನನ್ನು ಮದುವೆ ಆಗುವೆ ಎಂದು ಬ್ರೇಕ್ ಅಪ್ ಮಾಡಿಕೊಂಡಿದ್ದಳು. ಕಳೆದ ಒಂದು ವರ್ಷದಿಂದ ಇಬ್ಬರ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ರಾಹುಲ್, ಐದಾರು ವರ್ಷ ನನ್ನ ಜೊತೆಗೆ ಓಡಾಡಿ ಹಣ ಖರ್ಚು ಮಾಡಿಸಿದ್ದೀಯಾ ಎಂದು ಯುವತಿ ಮೇಲೆ ಸಿಟ್ಟಾಗಿದ್ದ.

ಇತ್ತೀಚೆಗೆ ಯುವತಿ ಮನೆ ಬಳಿ ಹೆಚ್ಚು ಓಡಾಡುತ್ತಿದ್ದ. ಯಾಕೆ ಓಡಾಡುತ್ತಿದ್ದೀಯಾ ಎಂದು ಯುವತಿ ಮನೆಯವರು ರಾಹುಲ್​​ಗೆ ನಿನ್ನೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದು ನಿಮ್ಮ ಮನೆಗೆ ಬರುವೆ ಎಂದು ಯುವತಿ ಮನೆಗೆ ಹೋಗಿದ್ದಾನೆ. ಆಗ ಐಶ್ವರ್ಯ ಮನೆಯವರೊಂದಿಗೆ ಮಾತನಾಡುತ್ತಿದ್ದ. ಈ ವೇಳೆ ಯುವತಿ ತಂದೆ ಅಪ್ಪು ಮದರಿ ರಾಹುಲ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮುಖ್ಯಶಿಕ್ಷಕಿ ಸೂಚನೆ ಮೇರೆಗೆ ಸರ್ಕಾರಿ ಶಾಲೆಯಲ್ಲಿ ಕಳ್ಳತನ: ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಸಿಬ್ಬಂದಿ

ಯುವಕನೇ ಪೆಟ್ರೋಲ್ ತಂದು ನಮಗೆ, ನಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದು, ನಮ್ಮ ಮನೆಯಲ್ಲಿ ಮೂವರಿಗೆ ಬೆಂಕಿ ತಗುಲಿದೆ. ಆತನಿಗೂ ಬೆಂಕಿ ತಗುಲಿದೆ ಎಂದು ಯುವತಿ ತಂದೆ ದೂರು ನೀಡಿದ್ದಾರೆ. ಅತ್ತ ಯುವಕ ರಾಹುಲ್ ತಂದೆ ಕೂಡ ದೂರು ನೀಡಿದ್ದು, ನಮ್ಮ ಮಗನನ್ನು ಮನೆಗೆ ಕರೆಯಿಸಿ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದಿದ್ದಾರೆ.

ಸದ್ಯ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯುವಕ ಹಾಗೂ ಯುವತಿ ಮನೆಯವರಿಂದ ದೂರು ಸ್ವೀಕರಿಸಿದ್ದು, ಪೊಲೀಸರ ತನಿಖೆ ಮುಂದುವರೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.