AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಡಿ. ಚೆನ್ನಣ್ಣನವರ್ ಫೊಟೋ ಹಾಕಿಕೊಂಡು ಓಡಾಡಿದ ವಾಹನ ಚಾಲಕನಿಗೆ 500 ರೂಪಾಯಿ ದಂಡ

ವಿಜಯಪುರ ನಗರದ ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಓಮಿನಿ ಕಾರ್ ಹಿಂಭಾಗ ರವಿ ಡಿ. ಚೆನ್ನಣ್ಣನವರ್ ಫೊಟೋ ಹಾಕಿಕೊಂಡು ಓಡಾಡುತ್ತಿದ್ದ ಕಾರ್ ಚಾಲಕನಿಗೆ ದಂಡ ಹಾಕಿದ್ದಾರೆ. ವಾಹನ ಸೀಜ್ ಮಾಡುವಾಗ ಕೀ ಕೊಡಲು ಸತಾಯಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ.

ರವಿ ಡಿ. ಚೆನ್ನಣ್ಣನವರ್ ಫೊಟೋ ಹಾಕಿಕೊಂಡು ಓಡಾಡಿದ ವಾಹನ ಚಾಲಕನಿಗೆ 500 ರೂಪಾಯಿ ದಂಡ
ವಾಹನ ಚಾಲಕನಿಗೆ 500 ರೂಪಾಯಿ ದಂಡ
Follow us
preethi shettigar
|

Updated on: May 15, 2021 | 1:37 PM

ವಿಜಯಪುರ: ಕೊರೊನಾ ಎರಡನೇ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೂಡ ನಿಯೋಜನೆ ಮಾಡಲಾಗಿದೆ ಮತ್ತು ಸುಖಾಸುಮ್ಮನೆ ರಸ್ತೆಯಲ್ಲಿ ಸಂಚಾರ ಮಾಡುವವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಹೀಗಿರುವಾಗಲೇ ಇಂದು ರವಿ ಡಿ. ಚೆನ್ನಣ್ಣನವರ್​ ಫೊಟೋ ಹಾಕಿಕೊಂಡು ಓಡಾಡಿದ ವಾಹನ ಚಾಲಕನಿಗೆ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದಾರೆ.

ವಿಜಯಪುರ ನಗರದ ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಓಮಿನಿ ಕಾರ್ ಹಿಂಭಾಗ ರವಿ ಡಿ. ಚೆನ್ನಣ್ಣನವರ್ ಫೊಟೋ ಹಾಕಿಕೊಂಡು ಓಡಾಡುತ್ತಿದ್ದ ಕಾರ್ ಚಾಲಕನಿಗೆ ದಂಡ ಹಾಕಿದ್ದಾರೆ. ವಾಹನ ಸೀಜ್ ಮಾಡುವಾಗ ಕೀ ಕೊಡಲು ಸತಾಯಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ.

ಖಾಕಿ ಲಾಠಿ ಪ್ರಯೋಗಕ್ಕೆ ಬ್ರೇಕ್ ಲಾಕ್​ಡೌನ್​ ಮೊದಲ ದಿನ ಪೊಲೀಸ್ರು, ತಾರಾಮಾರಾ ಲಾಠಿ ಬೀಸಿ ಜನರನ್ನು ಹೆದರಿಸಿದ್ರು. ಮನೆಬಿಟ್ಟು ಹೊರಬರಬೇಡಿ ಮನೆಯಲ್ಲೇ ಇರಿ ಅಂತಾ ಎರಾಽಬಿರಿಽ ಲಾಠಿ ಏಟು ಕೊಟ್ಟಿದ್ರು. ಆದ್ರೆ, ಪೊಲೀಸರ ಌಕ್ಷನ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿತ್ತು. ಇದ್ರಿಂದಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಲಾಠಿ ಬೀಸದಂತೆ ಆದೇಶ ನೀಡಿದ್ದಾರೆ. ಹೀಗಾಗಿ, ಪೊಲೀಸರು ಕೂಡ ಇಂದಿನಿಂದ ಲಾಠಿ ಪ್ರಯೋಗಕ್ಕೆ ಬ್ರೇಕ್ ಹಾಕಲಿದ್ದಾರೆ. ಆದ್ರೆ, ಲಾಕ್ಡೌನ್ನ ಎರಡನೇ ದಿನವಾದ ಇಂದು ಕೂಡ ಅನಗತ್ಯವಾಗಿ ಹೊರಬಂದ್ರೆ ವಾಹನಗಳನ್ನೇ ಸೀಜ್ ಮಾಡ್ತಾರೆ. ಜತೆಗೆ ಕೇಸ್ ಹಾಕಿ ಮಾರಿಹಬ್ಬ ಮಾಡೋಕೂ ಸಜ್ಜಾಗಿದ್ದಾರೆ.

‘ವಾಹನ ಬಳಸಿ, ಆದ್ರೆ ಅನಗತ್ಯ ಸಂಚಾರ ನಿರ್ಬಂಧ’ ಹತ್ತಿರದಲ್ಲಿ ತರಕಾರಿ, ಹೋಟೆಲ್ನಲ್ಲಿ ಪಾರ್ಸೆಲ್ ತರೋಕೆ ವಾಹನದಲ್ಲಿ ಹೋಗುವಂತಿಲ್ಲ. ಕಾಲ್ನಡಿಗೆಯಲ್ಲೇ ಹೋಗ್ಬೇಕು ಅಂತಾ ಖಡಕ್ ರೂಲ್ ಜಾರಿ ಮಾಡ್ಲಾಗಿತ್ತು. ಆದ್ರೀಗ ಆ ನಿಮಯದಲ್ಲೂ ಸ್ವಲ್ಪ ಬದಲಾವಣೆ ಆಗಿದ್ದು, ಖುದ್ದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ನಿಮ್ಮ ಹತ್ತಿರದ ಸ್ಥಳಗಳಲ್ಲಿ ಅಗತ್ಯ ವಸ್ತುಗಳನ್ನ ಖರೀದಿಸಲು ವಾಹನ ಬಳಕೆಗೆ ನಿರ್ಬಂಧವಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ವಾಹನಗಳನ್ನ ಬಳಸಿಕೊಳ್ಳಬಹುದು. ಆದ್ರೆ, ಅದನ್ನ ದುರುಪಯೋಗಪಡಿಸಿಕೊಳ್ಳದಂತೆ ಮನವಿ ಮಾಡಿದ್ರು.

ಇದನ್ನೂ ಓದಿ:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

ಇನ್ಮುಂದೆ ಖಾಕಿ ಲಾಠಿ ಪ್ರಯೋಗಕ್ಕೆ ಬ್ರೇಕ್.. ಅನಗತ್ಯವಾಗಿ ಹೊರಬಂದ್ರೆ ಸೀಜ್ ಆಗ್ತಾವೆ ವಾಹನಗಳು

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ