AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಟು ಮಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಡಿಸೆಂಬರ್ 2025 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನೈರುತ್ಯ ರೆಲ್ವೆ ಮಾಹಿತಿ ನೀಡಿದೆ. ಜುಲೈ 1 ರಿಂದ 07378 ಮಂಗಳೂರು-ವಿಜಯಪುರ ರೈಲಿನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹೊಸ ವೇಳಾಪಟ್ಟಿ ಮತ್ತು ವಿಸ್ತರಿತ ಅವಧಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಜಯಪುರ ಟು ಮಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
ಸಂಗ್ರಹ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 18, 2025 | 7:58 AM

Share

ಬೆಂಗಳೂರು, ಜೂನ್​ 18: ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ (Vijayapura to Mangaluru Central Express) ಸಂಚಾರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ (Railway Board) ಅನುಮೋದನೆ ನೀಡಿದೆ. ಜುಲೈ 1ರಿಂದ ಜಾರಿಗೆ ಬರುವಂತೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿದೆ.

ಈ ಹಿಂದೆ ಜೂನ್ 30ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07377 ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ವಿಸ್ತರಿಸಲ್ಪಟ್ಟಿದೆ. ಅದೇ ರೀತಿ, ಜುಲೈ 1 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೀಗ ಜುಲೈ 2 ರಿಂದ 2026 ಜನವರಿ 1 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ
Image
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Image
ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
Image
ಕರ್ನಾಟಕದ ಕರಾವಳಿ ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆ
Image
ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ

ನೈರುತ್ಯ ರೆಲ್ವೆ ಟ್ವಿಟ್​

ಮಂಗಳೂರು ಸೆಂಟ್ರಲ್ ಟು ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಪರಿಷ್ಕೃತ ವೇಳಾಪಟ್ಟಿ

ಪರಿಷ್ಕೃತ ವೇಳಾಪಟ್ಟಿಯಂತೆ, 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್​ ರೈಲು ಮಂಗಳೂರು ಸೆಂಟ್ರಲ್‌ನಿಂದ 02:35 ಗಂಟೆಗೆ ಹೊರಡುವ ಬದಲು ಸಂಜೆ 04:45 ಗಂಟೆಗೆ ಹೊರಡಲಿದೆ. ನಂತರ ರೈಲು ಬಂಟವಾಳಕ್ಕೆ ಸಂಜೆ 5:30/5:32 ಗಂಟೆಗೆ, ಕಬಕಪುತ್ತೂರಿಗೆ 6 ಗಂಟೆ ಅಥವಾ 6: 2 ನಿಮಿಷಕ್ಕೆ ಸುಬ್ರಹ್ಮಣ್ಯ ರೋಡ್​ 6:50 ಅಥವಾ 7 ಗಂಟೆ, ಸಕಲೇಶಪುರಕ್ಕೆ 9:20 ಅಥವಾ 9:30 ಗಂಟೆಗೆ, ಹಾಸಕ್ಕೆ 10:20 ಅಥವಾ 10:30ಕ್ಕೆ ಅರಸೀಕೆರೆಗೆ 11:20 ಅಥವಾ 11:25 ಗಂಟೆಗೆ, ಕಡೂರಿಗೆ 11:59 ಅಥವಾ ರಾತ್ರಿ 12 ಗಂಟೆಗೆ, ಬೀರೂರಿಗೆ 12:08 ಅಥವಾ 12:09 ಗಂಟೆಗೆ, ಚಿಕ್ಕಜಾಜೂರಿಗೆ 01:10 ಅಥವಾ 01:12 ಗಂಟೆಗೆ, ದಾವಣಗೆಗೆ 01:48 ಅಥವಾ 01:50, ಹರಿಹರಕ್ಕೆ 02:03 ಅಥವಾ 02:05, ರಾಣೆಬೆನ್ನೂರಿಗೆ 2:25 ಅಥವಾ 2:27ಕ್ಕೆ ಬ್ಯಾಡಗಿಗೆ 02:44 ಅಥವಾ 02:46 ಗಂಟೆಗೆ ಮತ್ತು ಎಸ್‌ಎಂಎಂ ಹಾವೇರಿಗೆ 03 ಅಥವಾ 03:02 ಗಂಟೆಗೆ ಆಗಮಿಸಿ ಮತ್ತೆ ಹೊರಡುತ್ತದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ

ಇದಾದ ನಂತರ, ರೈಲು ಯಲವಿಗಿಗೆ 03:32 ಅಥವಾ 03:33 ಗಂಟೆಗೆ, ಎಸ್‌ಎಸ್ಎಸ್ ಹುಬ್ಬಳ್ಳಿಗೆ 04:40 ಅಥವಾ 04:50 ಗಂಟೆಗೆ, ಅಣ್ಣಿಗೇರಿಗೆ 05:20 ಅಥವಾ 05:21 ಗಂಟೆಗೆ, ಗದಗಕ್ಕೆ 06:15 ಅಥವಾ 06:20 ಗಂಟೆಗೆ, ಮಲ್ಲಾಪುರಕ್ಕೆ 06:49 ಅಥವಾ 06:50 ಗಂಟೆಗೆ, ಹೋಳೆ ಆಲೂರಿಗೆ 07:07 ಅಥವಾ 07:08, ಬಾದಾಮಿಗೆ 07:29 ಅಥವಾ 07:30, ಗುಳೇದ್​ಗುಡ್ಡ ರೋಡ್​ಗೆ 07:43 ಅಥವಾ 07:44 ಗಂಟೆಗೆ, ಬಾಗಲಕೋಟೆಗೆ 07:56 ಅಥವಾ 07:58 ಗಂಟೆಗೆ, ಆಲಮಟ್ಟಿಗೆ 08:37 ಅಥವಾ 08:38 ಗಂಟೆಗೆ, ಮತ್ತು ಬಸವನ ಬಾಗೇವಾಡಿ ರೋಡ್​ಗೆ 08:59 ಅಥವಾ 09:00 ಗಂಟೆಗೆ ಆಗಮಿಸಿ ಹೊರಡಲಿದೆ. ಈ ರೈಲು ಮೊದಲು 09:35 ಗಂಟೆಗೆ ತಲುಪುತ್ತಿದ್ದು, ಇದೀಗ ಪರಿಷ್ಕೃತ ವೇಳಾಪಟ್ಟಿಯಂತೆ 11:15 ಗಂಟೆಗೆ ತಲುಪಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 am, Wed, 18 June 25

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು