AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಲೇಶ್ವರ, ತಿಕೋಟಾದಲ್ಲಿ ಪ್ರತಿ ನಿವಾಸಿಗೆ ದಿನಕ್ಕೆ 135 ಲೀಟರ್ ನೀರು​: ಸಚಿವ ಎಂಬಿ ಪಾಟೀಲ್

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರತಿ ನಿವಾಸಿಗೆ ದಿನಕ್ಕೆ 55 ಲೀಟರ್ ನೀರು ಪೂರೈಸಲು ಯೋಜಿಸಲಾಗುತ್ತಿತ್ತು. ಆದರೆ, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬಬಲೇಶ್ವರ, ತಿಕೋಟಾದಲ್ಲಿ ಪ್ರತಿ ನಿವಾಸಿಗೆ ದಿನಕ್ಕೆ 135 ಲೀಟರ್ ನೀರು​: ಸಚಿವ ಎಂಬಿ ಪಾಟೀಲ್
ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಸಭೆ
ಗಂಗಾಧರ​ ಬ. ಸಾಬೋಜಿ
|

Updated on: Aug 11, 2023 | 5:51 PM

Share

ಬೆಂಗಳೂರು, ಆಗಸ್ಟ್​ 11: ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು. ಅದೇ ರೀತಿಯಾಗಿ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ (Minister MB Patil) ಗುರುವಾರ ಹೇಳಿದರು. ವಿಜಯಪುರ, ಬಾಳೇಶ್ವರ, ತಿಕೋಟ ಕುಡಿಯುವ ನೀರಿನ ಯೋಜನೆಗಳ ಕುರಿತು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಬಬಲೇಶ್ವರ ಮತ್ತು ತಿಕೋಟಾ ಯೋಜನೆಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರತಿ ನಿವಾಸಿಗೆ ದಿನಕ್ಕೆ 55 ಲೀಟರ್ ಪೂರೈಸಲು ಯೋಜಿಸಲಾಗುತ್ತಿತ್ತು. ಆದರೆ, ಈಗ ಅವುಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ನಗರದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಅನುಗುಣವಾಗಿ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದರು.

ಇದನ್ನೂ ಓದಿ: ಲಕ್ಷ್ಮಣ ಸವದಿ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುತ್ತೇವೆ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭರವಸೆ

ಕೊಲ್ಹಾರ-ವಿಜಯಪುರ ಕುಡಿಯುವ ನೀರು ಪೈಪ್‌ಲೈನ್‌ನಲ್ಲಿ ಸೋರಿಕೆ 

ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ 10.74 ಕಿ.ಮೀ ಉದ್ದದ ಕಾಂಕ್ರೀಟ್ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾಗುತ್ತಿರುವುದನ್ನು ಗುರುತಿಸಲಾಗಿದ್ದು, ಉತ್ತಮ ಗುಣಮಟ್ಟದ ಎಂಎಸ್ ಪೈಪ್ ಹಾಕಲು ನಿರ್ಧರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

52 ಕೋಟಿ ರೂ. ವೆಚ್ಚ

ಈ ಯೋಜನೆಗೆ 2018 ರಲ್ಲಿ 32 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಈಗ ಇದನ್ನು ಪರಿಷ್ಕರಿಸಲಾಗಿದ್ದು, 52 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ವಿಳಂಬ ಮಾಡದೆ ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Retirement: ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದಕ್ಕಿದ್ದಂತೆ ರಾಜಕೀಯ ನಿವೃತ್ತಿ ಮಾತನ್ನಾಡಿದ್ದೇಕೆ?

ವಿಜಯಪುರ ನಗರ ಅಗಾಧವಾಗಿ ಬೆಳೆಯುತ್ತಿದ್ದು, ಹಾಗಾಗಿ ನಗರದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕಾಗಿದೆ. ಹೆಚ್ಚಿದ ಸುರಕ್ಷತೆ ಮತ್ತು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಆಯುಕ್ತ ಶರತ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಎಂಜಿನಿಯರ್‌ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?