AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ

ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಕರುಳ ಕುಡಿಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ
ಮೃತ ಮಕ್ಕಳು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 17, 2025 | 1:16 PM

Share

ವಿಜಯಪುರ, ಅಕ್ಟೊಬರ್​ 17: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ (Vijayapura) ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳಾಗಿದ್ದು,ಕರುಳ ಕುಡಿಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಹದೇವ ನಗರದ ಬಳಿಯ ರಾಠೋಡ್ ಎಂಬವರ ಜಮೀನಿನಲ್ಲಿ ಮೂವರು ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಿದ್ದರು.ಕುಟುಂಬದವರು ಸಹ ಮಕ್ಕಳು ಇಲ್ಲಿಯೇ ಆಟವಾಡುತ್ತಿದ್ದಾರಲ್ಲ ಎಂದು ಅಂದುಕೊಂಡಿದ್ದರು. ಹೀಗೆ ಕುರಿಗಳ ಜೊತೆ ಆಡುತ್ತ ಕೃಷಿ ಹೊಂಡದ ಬಳಿ ತೆರಳಿರುವ ಮಕ್ಕಳು ಆಯತಪ್ಪಿ ಬಿದ್ದಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಹಳ ಹೊತ್ತಾದರೂ ಮಕ್ಕಳು ಬಾರದಿರುವ ಹಿನ್ನಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಸಂಶಯ ಬಂದು ಕೃಷಿ ಹೊಂಡದಲ್ಲಿ ಹುಡುಕಾಡಿದಾಗ ಮೂವರು ಮಕ್ಕಳ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಮಲಗಿದ ಹಾಗೆ ನಟನೆ ಮಾಡಿ ಮೊಬೈಲ್ ಎಗಿರಿಸಿದ ಖದೀಮ

ಇತ್ತೀಚಿನ ದಿನಗಳಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಕಾನೂನಿನ ಪ್ರಕಾರ ಕೃಷಿಹೊಂಡದ ಸುತ್ತಲೂ ತಂತಿ ಬೇಲಿಯನ್ನ ಕಡ್ಡಾಯವಾಗಿ ಹಾಕಬೇಕು. ಕೃಷಿ ಹೊಂಡದ ಬಳಿ ಯಾರೂ ಓಡಾಡದಂತೆ ನೋಡಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ ಇದ್ಯಾವುದೇ ನಿಯಮಗಳನ್ನು ಕೆಲ ರೈತರು ಪಾಲನೆ ಮಾಡದಿರುವುದೇ ಇಂತಹ ದುರಂತಗಳಿಗೆ ಕಾರಣವಾಗುತ್ತಿವೆ. ಹೀಗಾಗಿ ಇನ್ನಾದರೂ ಕೃಷಿ ಹೊಂಡಗಳನ್ನು ಹೊಂದಿರುವ ರೈತರು ಎಚ್ಚೆತ್ತುಕೊಳ್ಳಬೇಕಿದ್ದು, ಕೃಷಿ ಹೊಂಡದ ಸುತ್ತ ಬೇಲಿ ಅಥವಾ ತಡೆಗೋಡೆಯನ್ನ ಖಡ್ಡಾಯವಾಗಿ ನಿರ್ಮಿಸಬೇಕು ಎಂಬ ಮಾತುಗಳು ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್